ರಮ್ಯಾ ಟ್ವಿಟ್ಟರ್ ಗೆ ಗುಡ್ ಬೈ ಅಂದಿದ್ದಕ್ಕೆ ಅಸಲಿ ಕಾರಣ ಇದೇನಾ?
Recommended Video
ನವದೆಹಲಿ, ಜೂನ್ 04: ಲೋಕಸಭೆ ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅತೀ ಹೆಚ್ಚು ಕಾಲೆಳೆದವರ ಪಟ್ಟಿಯಲ್ಲಿ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ ಅವರಿಗೆ ಅಗ್ರಪಂಕ್ತಿಯಲ್ಲೇ ಸ್ಥಾನ ಸಿಕ್ಕಿದೆ.
ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ದಿನದಿನವೂ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಕಾಲೆಳೆಯುವ ಕೆಲಸ ಮಾಡುತ್ತಿದ್ದ ರಮ್ಯಾ, ಇದ್ದಕ್ಕಿದ್ದಂತೆ ಟ್ವಿಟ್ಟರ್ ಮತ್ತು ಇನ್ ಸ್ಟಾಗ್ರಾಂ ಖಾತೆಗಳಿಗೆ ಗುಡ್ ಬೈ ಹೇಳಿರುವುದು ಕುತೂಹಲ ಸೃಷ್ಟಿಸಿತ್ತು.
ಲೋಕಸಭೆ ಚುನಾವಣೆಯ ಸೋಲಿನ ನಂತರವು ಒಂದಷ್ಟು ದಿನ ಟ್ವಿಟ್ಟರ್ ನಲ್ಲಿ active ಆಗಿಯೇ ಇದ್ದ ರಮ್ಯಾ ಇದ್ಯಾಕೆ ಇದ್ದಕ್ಕಿದ್ದಂತೆ ಮೈಕ್ರೋ ಬ್ಲಾಗಿಂಗ್ ಸೈಟ್ ನಿಂದ ಹೊರಹೋದರು ಎಂಬ ಅನುಮಾನ ಎದ್ದಿತ್ತು. ಆದರೆ ರಮ್ಯಾ ಹೀಗೆ ಟ್ವಿಟ್ಟರ್ ನಿಂದ ಹೊರಹೋಗುತ್ತಿರುವುದು ಇದೇ ಮೊದಲಲ್ಲ. ಕಳೆದ ಅಕ್ಟೋಬರ್ ನಲ್ಲೂ ಅವರು ಕೆಲ ದಿನಗಳ ಕಾಲ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು. ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನಗೊಂಡ ರಮ್ಯಾ ಟ್ವಿಟ್ಟರ್ ನಿಂದ ಆಚೆ ಬಂದಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಕೆಲವೇ ದಿನಗಳ ನಂತರ ಮತ್ತೆ ಟ್ವಿಟ್ಟರ್ ಗೆ ಮರುಪದಾರ್ಪಣೆ ಮಾಡಿ ವದಂತಿಗಳನ್ನು ಹುಸಿಗೊಳಿಸಿದ್ದರು.
ಆದರೆ ಇದೀಗ ಮತ್ತೆ ಅವರು ಟ್ವಿಟ್ಟರ್ ನಿಂದ ಹೊರಹೋಗಿದ್ದಾರೆ. ಅಷ್ಟಕ್ಕೂ ಅದಕ್ಕೆ ಕಾರಣವೇನು?

ರಾಜಕೀಯದಿಂದ ಬ್ರೇಕ್?
ಕೇವಲ ಟ್ವಿಟ್ಟರ್ ಮತ್ತು ಇನ್ ಸ್ಟಾಗ್ರಾಂ ಮಾತ್ರವಲ್ಲದೆ ದಿವ್ಯ ಸ್ಪಂದನ ಅವರು ಕಾಂಗ್ರೆಸ್ ನ ಆಂತರಿಕ ವಾಟ್ಸಾಪ್ ಗ್ರೂಪ್ ನಿಂದಲೂ ಎಕ್ಸಿಟ್ ಆಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಅವರು ರಾಜಕಾರಣದಿಂದ ಕೆಲ ಕಾಲ ಬ್ರೇಕ್ ತೆಗೆದುಕೊಳ್ಳಲು ನಿರ್ಧರಿಸಿದಂತಿದೆ ಎಂದು ಪಕ್ಷದ ಕೆಲವು ಮೂಲಗಳು ತಿಳಿಸಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಟ್ವಿಟ್ಟರ್ ನಿಂದ ರಮ್ಯಾ ಆಪ್ತನ ನಿರ್ಗಮನ!
ರಮ್ಯಾ ಟ್ವಿಟ್ಟರ್ ನಿಂದ ಹೊರಬಂದ ಕೆಲವೇ ದಿನದಲ್ಲಿ ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣಗಳ ನಿರ್ವಹಣಾ ವಿಭಾಗದ ಪ್ರಮುಖ ಸದಸ್ಯ ಚಿರಾಗ್ ಪಟ್ನಾಯಕ್ ಅವರು ಸಹ ಟ್ವಿಟ್ಟರ್ ಗೆ ಗುಡ್ ಬೈ ಹೇಳಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿರಾಗ್ ಅವರ ವಿರುದ್ಧ ಕ್ರಿಮಿನಲ್ ಪ್ರಕಣಗಳಿದ್ದು, ಅವರೊಂದಿಗೆ ಗುರುತಿಸಿಕೊಂಡ ಕಾರಣಕ್ಕೆ ತನಗೂ ಸಮಸ್ಯೆಯಾಗಬಹುದು ಎಂಬುದನ್ನು ಅರಿತ ದಿವ್ಯ ಸ್ಪಂದನ ಕೆಲಕಾಲ ಸಾಮಾಜಿಕ ಮಾಧ್ಯಮದಿಂದ ದೂರವುಳಿಯಲು ನಿರ್ಧರಿಸಿದ್ದಾರೆ ಎಂಬ ವದಂತಿಯೂ ಇದೆ.

ಮಾಧ್ಯಮಗಳಿಂದ ದೂರ ಉಳಿಯುವುದಕ್ಕಾಗಿ?
ಲೋಕಸಭೆ ಚುನಾವಣೆಯ ಹೀನಾಯ ಪ್ರದರ್ಶನದಿಂದ ಬೇಸತ್ತಿರುವ ಕಾಂಗ್ರೆಸ್ ಪಕ್ಷ ಇನ್ನೊಂದು ತಿಂಗಳು ತನ್ನ ಪಕ್ಷದ ಯಾವುದೇ ಮುಖಂಡರು, ಸದಸ್ಯರು, ಕಾರ್ಯಕರ್ತರು ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಳ್ಳಬಾರದು ಎಂದು ಸೂಚನೆ ನೀಡಿದೆ. ಇದರದೇ ಭಾಗವಾಗಿ ರಮ್ಯಾ ಅವರೂ ತಮ್ಮ ಟ್ವಿಟ್ಟರ್ ಖಾತೆಯಿಂದ ಹೊರಗೆ ಹೋಗಿರಬಹುದು ಎನ್ನಲಾಗಿದೆ. ಚುನಾವಣೆಯ ಸೋಲಿನ ಬಳಿಕವೂ ಮೋದಿ ಸರ್ಕಾರದ ಕಾಲೆಳೆಯುವಂಥ ಟ್ವೀಟ್ ಗಳನ್ನು ಮಾಡಲು ಹೊರಟಿದ್ದ(ನಿರ್ಮಲಾ ಸೀತಾರಾಮನ್ ಕುರಿತಾದ ಟ್ವೀಟ್) ರಮ್ಯಾ ಅವರಿಗೆ ಪಕ್ಷದ ವರಿಷ್ಠರೇ ಎಚ್ಚರಿಕೆ ನೀಡಿರಬಹುದು ಎನ್ನಲಾಗಿದೆ.

ಖಾತೆ ನಿಷ್ಕ್ರಿಯ
ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52(543) ಸ್ಥಾನಗಳಲ್ಲಿ ಗೆದ್ದು ಹೀನಾಯ ಪ್ರದರ್ಶನ ತೋರಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಅಂದರೆ ಮೇ 01 ರಂದು ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications