ರಾಷ್ಟ್ರಪತಿ ಚುನಾವಣೆಯಲ್ಲಿ ಇವಿಎಂ ಏಕೆ ಬಳಸಲ್ಲ?
ಸೋಮವಾರ ರಾಷ್ಟ್ರದಾದ್ಯಂತ ಭಾರತದ ಪ್ರಥಮ ಪ್ರಜೆ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯುತ್ತಿದೆ. ಇದು ಸಂವಿಧಾನಾತ್ಮಕಾವಾಗಿ ಮಹತ್ವದ ಹುದ್ದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಅಂತ್ಯಗೊಳ್ಳುತ್ತಿದ್ದು, ನೂತನ ರಾಷ್ಟ್ರಪತಿ ಆಯ್ಕೆಗೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯುತ್ತಿದೆ.
ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಬಿಹಾರದ ಮಾಜಿ ಗವರ್ನರ್ ದ್ರೌಪದಿ ಮುರ್ಮು ಕಣಕ್ಕೆ ಇಳಿದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದಿಂದ ಮಾಜಿ ಸಚಿವರಾಗಿದ್ದ ಯಶವಂತ್ ಸಿನ್ಹಾ ಅಭ್ಯರ್ಥಿ.
ಈ ಚುನಾವಣೆಗೆ ಮತಪತ್ರಗಳನ್ನೇ ಮೊದಲಿನಿಂದಲೂ ಬಳಸಲಾಗುತ್ತಿದೆ. ವಿದ್ಯುನ್ಮಾನ ಮತಯಂತ್ರಗಳು ದೇಶದ ಚುನಾವಣೆಗಳಲ್ಲಿ ಈಗ ಬಳಕೆಗೆ ಬಂದಿದ್ದು, ರಾಷ್ಟ್ರಪತಿ ಚುನಾವಣೆಗೆ ಮಾತ್ರ ಬ್ಯಾಲೆಟ್ ಪೇಟರ್ (ಮತ ಪತ್ರಗಳು) ಬಳಸಲಾಗುತ್ತಿದೆ. ಇದು ಯಾಕೆ ಎಂದು ತಿಳಿಯೋಣ.
2004ರಿಂದ ನಾಲ್ಕು ಲೋಕಸಭಾ ಚುನಾವಣೆಗಳು ಮತ್ತು 127 ವಿಧಾನಸಭಾ ಚುನಾವಣೆಗಳಲ್ಲಿ ಬಳಸಲಾದ ವಿದ್ಯುನ್ಮಾನ ಮತಯಂತ್ರಗಳನ್ನು ಭಾರತದ ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರು, ರಾಜ್ಯಸಭಾ ಸದಸ್ಯರು ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆಗಳಲ್ಲಿ ಏಕೆ ಬಳಸಲಾಗಿಲ್ಲ ಎಂದು ಎಂದಾದರೂ ಯೋಚಿಸಿದ್ದೀರಾ?

ರಾಷ್ಟ್ರಪತಿ ಚುನಾವಣಗೆ ಪ್ರಾತಿನಿಧ್ಯದ ವ್ಯವಸ್ಥೆ ಮತದಾನ
ಇವಿಎಂಗಳು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಂತಹ ನೇರ ಚುನಾವಣೆಗಳಲ್ಲಿ ಮತಗಳ ಒಟ್ಟುಗೂಡಿಸುವ ತಂತ್ರಜ್ಞಾನವನ್ನು ಆಧರಿಸಿವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ವಿರುದ್ಧ ಗುಂಡಿಯನ್ನು ಒತ್ತಿ ಮತ್ತು ಗರಿಷ್ಠ ಸಂಖ್ಯೆಯ ಮತಗಳನ್ನು ಗಳಿಸಿದವರನ್ನು ಚುನಾಯಿತ ಎಂದು ಘೋಷಿಸಲಾಗುತ್ತದೆ. ಆದರೆ ರಾಷ್ಟ್ರದ ಅಧ್ಯಕ್ಷರ ಚುನಾವಣೆಯನ್ನು ಒಂದೇ ವರ್ಗಾವಣೆ ಮತದ ಮೂಲಕ ಅನುಪಾತ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ನಡೆಸಲಾಗುತ್ತದೆ.

ಅಭ್ಯರ್ಥಿಗಳ ಹೆಸರಿನ ಕಾಲಂ ಮುಂದೆ ಬರೆಯಬೇಕು
ಆದರೆ ರಾಷ್ಟ್ರಪತಿ ಚುನಾವಣೆ ಒಂದೇ ಬಾರಿ ವರ್ಗಾವಣೆ ಮಾಡಬಹುದಾದ ಮತದ ಮೂಲಕ ಪ್ರಮಾಣನುಗುಣ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ಪ್ರತಿ ಮತದಾರರು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಆದ್ಯತೆಗಳನ್ನು ನೀಡಬಹುದು. ಅಂದರೆ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯಗಳನ್ನು, ಅಂಕಿ 1,2,3, 4, 5 ಅಂಕಿ ಅಂಶಗಳನ್ನು ಆದ್ಯತೆಯ ಕ್ರಮದಲ್ಲಿ ಅಭ್ಯರ್ಥಿಗಳ ಹೆಸರಿನ ಕಾಲಂ ಮುಂದೆ ಒದಗಿಸಿದ ಜಾಗದಲ್ಲಿ ನೀಡುವ ಮೂಲಕ ಮತಪತ್ರದ ಮತದಾರರು ಗುರುತಿಸಬೇಕು.

ಇವಿಎಂ ಮತಗಳ ಸಂಗ್ರಾಹಕ
ಹೀಗಾಗಿ ಇವಿಎಂಗಳು ರಾಷ್ಟ್ರಪತಿ ಚುನಾವಣೆಗೆ ಮತದಾನದ ವ್ಯವಸ್ಥೆಗೆ ಈಗ ವಿನ್ಯಾಸಗೊಳಿಸಲಾಗಿಲ್ಲ. ಇವಿಎಂ ಮತಗಳ ಸಂಗ್ರಾಹಕವಾಗಿದೆ. ಪ್ರಮಾಣಾನುಗುಣ ಪ್ರಾತಿನಿಧ್ಯದ ವ್ಯವಸ್ಥೆಯ ಅಡಿಯಲ್ಲಿ ಯಂತ್ರವು ಆದ್ಯತೆಯ ಆಧಾರದ ಮೇಲೆ ಮತಗಳನ್ನು ಲೆಕ್ಕಾಚಾರ ಮಾಡಬೇಕಾಗುತ್ತದೆ. ಇದಕ್ಕೆ ಸಂಪೂರ್ಣವಾಗಿ ವಿಭಿನ್ನ ತಂತ್ರಜ್ಞಾನದ ಅಗತ್ಯವಿದೆ. ಇದಕ್ಕೆ ಇವಿಎಂ ಸೂಕ್ತವಾಗಿರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

127 ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಬಳಕೆ
ಹಾಗಾಗಿ ಇದಕ್ಕೆ ಬೇರೆ ರೀತಿಯ ಇವಿಎಂ ಅಗತ್ಯವಿದೆ. ಚುನಾವಣಾ ಆಯೋಗದ ತ್ರೈಮಾಸಿಕ ನಿಯತಕಾಲಿಕೆಯಾದ 'ಮೈ ವೋಟ್ ಮ್ಯಾಟರ್ಸ್'ನ ಆಗಸ್ಟ್, 2021 ರ ಸಂಚಿಕೆ ಪ್ರಕಾರ, 2004ರಿಂದ, ನಾಲ್ಕು ಲೋಕಸಭೆ ಮತ್ತು 127 ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂಗಳನ್ನು ಬಳಸಲಾಗಿದೆ. ಇಸಿ ವೆಬ್ಸೈಟ್ ಪ್ರಕಾರ, ಚುನಾವಣಾ ಆಯೋಗದಲ್ಲಿ ಇವಿಎಂಗಳನ್ನು 1977ರಲ್ಲಿ ಮೊದಲ ಬಾರಿಗೆ ರೂಪಿಸಲಾಯಿತು. ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL)ಹೈದರಾಬಾದ್ಗೆ ಇವಿಎಂಗಳನ್ನು ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿಪಡಿಸುವ ಕಾರ್ಯವನ್ನು ನಿಯೋಜಿಸಲಾಗಿದೆ.

ಆಗಸ್ಟ್ 6, 1980ರಂದು ಇವಿಎಂ ಪ್ರದರ್ಶನ
1979ರಲ್ಲಿ ಇವಿಎಂನ ಒಂದು ಮೂಲಮಾದರಿಯನ್ನು ಅಭಿವೃದ್ಧಿಪಡಿಸಲಾಯಿತು. ಇದನ್ನು ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಮುಂದೆ ಆಗಸ್ಟ್ 6, 1980ರಂದು ಪ್ರದರ್ಶಿಸಿತು. ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ಬೆಂಗಳೂರು, ಮತ್ತು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ECIL ಜೊತೆಗೆ ಸಹಯೋಗಗೊಳಿಸಿ ಇವಿಎಂಗಳ ಪರಿಚಯದ ಬಗ್ಗೆ ವಿಶಾಲವಾದ ಒಮ್ಮತವನ್ನು ತಲುಪಿದ ನಂತರ ತಯಾರಿಸಲಾಯಿತು.

1989ರಲ್ಲಿ ಪ್ರಜಾಪ್ರತಿನಿಧಿ ಕಾಯಿದೆಗೆ ತಿದ್ದುಪಡಿ
1982 ಮೇನಲ್ಲಿ ಕೇರಳದಲ್ಲಿ ಉತ್ತರ ಪರವೂರಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈ ಯಂತ್ರಗಳನ್ನು ಮೊದಲು ಬಳಸಲಾಯಿತು. ಆದಾಗ್ಯೂ, ಅದರ ಬಳಕೆಯನ್ನು ಸೂಚಿಸುವ ನಿರ್ದಿಷ್ಟ ಕಾನೂನಿನ ಬಗ್ಗೆ ಸ್ಪಷ್ಟತೆ ಇಲ್ಲದೆ ಸುಪ್ರೀಂಕೋರ್ಟ್ ಆ ಚುನಾವಣೆಯನ್ನು ರದ್ದುಗೊಳಿಸಲಾಯಿತು. ತರುವಾಯ ಸಂಸತ್ತು 1989ರಲ್ಲಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಗಾಗಿ ನಿಬಂಧನೆಯನ್ನು ರಚಿಸಲು ಪ್ರಜಾಪ್ರತಿನಿಧಿ ಕಾಯಿದೆ, 1951 ಅನ್ನು ತಿದ್ದುಪಡಿ ಮಾಡಿತು.

25 ವಿಧಾನಸಭಾ ಕ್ಷೇತ್ರಗಳಲ್ಲಿ ಬಳಕೆ
ಇವಿಎಂ ಪರಿಚಯದ ಬಗ್ಗೆ ಸಾಮಾನ್ಯ ಒಮ್ಮತವನ್ನು 1998ರಲ್ಲಿ ಮಾತ್ರ ತಲುಪಲು ಸಾಧ್ಯವಾಯಿತು. ಮುಂದುವರಿದು ಮಧ್ಯಪ್ರದೇಶ, ರಾಜಸ್ಥಾನ ಮತ್ತು ದೆಹಲಿಯಾದ್ಯಂತ ಹರಡಿರುವ 25 ವಿಧಾನಸಭಾ ಕ್ಷೇತ್ರಗಳಲ್ಲಿ ಇದನ್ನು ಬಳಸಲಾಯಿತು. ಬಳಿಕ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಮೇ 2001ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂಗಳನ್ನು ಬಳಸಲಾಯಿತು. ಅಂದಿನಿಂದ ಪ್ರತಿ ರಾಜ್ಯವು ವಿಧಾನಸಭೆ ಚುನಾವಣೆಗೆ ಆಯೋಗವು ಇವಿಎಂಗಳನ್ನು ಬಳಸುತ್ತಿದೆ. 2004ರ ಲೋಕಸಭೆ ಚುನಾವಣೆಯಲ್ಲಿ ದೇಶದ ಎಲ್ಲಾ 543 ಲೋಕಸಭಾ ಕ್ಷೇತ್ರಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಇವಿಎಂಗಳನ್ನು ಬಳಸಲಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications