122 ವರ್ಷಗಳ ಹಳೆಯ ದಾಖಲೆಯನ್ನ ಮುರಿದ ಈ ವರ್ಷದ ತಾಪಮಾನ
ನವದೆಹಲಿ, ಏಪ್ರಿಲ್ 29 : ಭಾರತದಲ್ಲಿ ಪ್ರತಿವರ್ಷ ಕಳೆದಂತೆ ತಾಪಮಾನ ಪರಿಸ್ಥಿತಿ ಹದಗೆಡುತ್ತಿದೆ. ಅದರಲ್ಲೂ ಈ ವರ್ಷ ಮಾರ್ಚ್ನಲ್ಲಿಯೇ ಬಿಸಿಲಿನ ಬೇಗೆ ಆರಂಭವಾಗಿದ್ದು, ಈ ತಾಪಮಾನವು ಸುಮಾರು 122 ವರ್ಷಗಳ ಹಳೆಯ ದಾಖಲೆಯನ್ನೇ ಮುರಿದಿದೆ. ಈ ಮೂಲಕ ಗರಿಷ್ಟ ತಾಪಮಾನ ಹೆಚ್ಚಾಗಿದ್ದು, ಉತ್ತರ ಭಾರತದ ರಾಜ್ಯಗಳು ಬಿಸಿಗಾಳಿಗೆ ತತ್ತರಿಸಿ ಹೋಗಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ವಾರ ವಾಯುವ್ಯ ಮತ್ತು ಮಧ್ಯ ಭಾರತದ ಬಹುತೇಕ ಭಾಗಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷದ ಭಾರತದಲ್ಲಿ ಮಾರ್ಚ್ 11 ರಿಂದಲೇ ಬಿಸಿಗಾಳಿ ಪ್ರಾರಂಭವಾಗಿದ್ದು, 15 ರಾಜ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಅದರಲ್ಲೂ ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ಪ್ರಮಾಣ ಹೆಚ್ಚಾಗಿದ್ದು, ಜನರು ಬಿಸಿಗಾಳಿಗೆ ತತ್ತರಿಸಿ ಹೋಗಿದ್ದಾರೆ ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರ ವರದಿ ಮಾಡಿದೆ.

ಮುಂದಿನ ಐದು ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಬಹುದು. ಈಗಾಗಲೇ ಹವಮಾನ ಇಲಾಖೆ ಮುಂಜಾಗೃತ ಕ್ರಮವಾಗಿ ದೆಹಲಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇದರಜೊತೆಗೆ ರಾಜಸ್ಥಾನ, ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ತಿಂಗಳ ಕೊನೆಯವರೆಗೂ ಬಿಸಿಲಿನ ಬೇಗೆ ಹೆಚ್ಚಿರಲಿದೆ. ಇನ್ನು ಪೂರ್ವ ರಾಜ್ಯಗಳಾದ ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಮುಂದಿನ ಕೆಲ ದಿನಗಳಲ್ಲಿ ಬಿಸಿಗಾಳಿಯಿಂದ ತತ್ತರಿಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಏನಿದು ಬಿಸಿಗಾಳಿ ?
ಒಂದು ಸ್ಥಳದ ಗರಿಷ್ಟ ತಾಪಮಾನವು ಕನಿಷ್ಟ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚು ತಲುಪಿದರೆ ಅದನ್ನ ಬಿಸಿಗಾಳಿ ಎಂದು ಪರಿಗಣಿಸಲಾಗುತ್ತದೆ. ಈಗಾಗಲೇ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಿದ್ದು, ಬಿಸಿಗಾಳಿ ಪ್ರಮಾಣ ಏರಿಕೆಯಾಗಿದೆ. ಹೀಗಾಗಿ ಜನರು ಬಿಸಿಗಾಳಿ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ.
ಭಾರತದಲ್ಲಿ ತಾಪಮಾನ ಏರಿಕೆಯಾಗಲು ಮಾನವ ಕೂಡ ಕಾರಣ
ಇಂಟರ್ಗವರ್ನಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್ ನ ವರದಿಯ ಪ್ರಕಾರ ಮಾನವನ ಜಾಗತಿಕ ಚಟಿವಟಿಕೆಗಳಿಂದ ಭೂಮಿ ಇಷ್ಟು ಪ್ರಮಾಣದಲ್ಲಿ ತಾಪಮಾನಕ್ಕೆ ಏರಲು ಕಾರಣ ಎಂದು ಹೇಳಿದೆ. 1850-1900 ರ ಕೈಗಾರಿಕಾ ಪೂರ್ವದ ಅವಧಿಗೆ ಹೋಲಿಸಿ ನೋಡಿದರೆ, ಭೂಮಿಯ ಜಾಗತಿಕ ಮೇಲ್ಮೈ ತಾಪಮಾನವು 1.09 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಏರಿಕೆಯಾಗಿದೆ. ಇದೇ ರೀತಿ ಭೂಮಂಡಲದಲ್ಲಿ ಇಂಗಾಲದ ಡೈ ಆಕ್ಸೈಡ್ ಹೆಚ್ಚಾಗುತ್ತ ಹೋದರೆ 2036 -2065 ರ ವೇಳೆಗೆ ಜಾಗತಿಕ ತಾಪಮಾನ 25 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಪಿಸಿಸಿ ವರದಿ ತಿಳಿಸಿದೆ.

ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ತಾಪಮಾನದ ದಿನಗಳ ಸಂಖ್ಯೆ ಏರಿಕೆಯಾಗುತ್ತಿದೆ. 1981-90 ರಲ್ಲಿ 413 ದಿನಗಳಿಂದ 2001-10 ರಲ್ಲಿ 575 ಮತ್ತು 2011-20 ರಲ್ಲಿ 600ಕ್ಕೆ ತಾಪಮಾನ ದಿನಗಳು ಏರಿಕೆಯಾಗುತ್ತಾ ಸಾಗಿದೆ. ಭಾರತೀಯ ಹವಮಾನ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತ ನಿರ್ವಹಣಾ ಪ್ರಾಧಿಕಾರದ ಪ್ರಕಾರ 2015 ರಲ್ಲಿ ಸುಮಾರು ಒಂಬತ್ತು ರಾಜ್ಯಗಳು ಬಿಸಿಗಾಳಿಗೆ ಪ್ರಭಾವಿತವಾಗಿದ್ದರೆ, 2020ರಲ್ಲಿ 23 ರಾಜ್ಯಗಳು ಬಿಸಿಗಾಳಿಯ ಪ್ರಭಾವಿತಕ್ಕೆ ಒಳಗಾಗಿದೆ. ಈ ಮೂಲಕ ವರ್ಷ ಕಳೆದಂತೆ ತಾಪಮಾನ ಮಟ್ಟ ಹೆಚ್ಚಾಗುತ್ತಾ ಸಾಗಿದೆ.
ತಾಪಮಾನ ಮಟ್ಟ ಇದೇ ರೀತಿ ಏರಿಕೆಯಾಗುತ್ತಾ ಹೋದರೆ, ಜನರಿಗೆ ಹಾಗೂ ಆರ್ಥಿಕತೆಗೆ ಭಾರೀ ಪೆಟ್ಟು ಬಿದ್ದಂತೆ ಆಗುತ್ತದೆ. ದೇಶದಲ್ಲಿ ಲಕ್ಷಾಂತರ ಜನರು ಅದರಲ್ಲೂ ವಿಶೇಷವಾಗಿ ಕಟ್ಟಡ ಕಾರ್ಮಿಕರು, ರೈತರು, ಕಾರ್ಖಾನೆ ಕೆಲಸಗಾರರು ಹಾಗೂ ಹೆಚ್ಚಾಗಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ಈ ತಾಪಮಾನ ಹೆಚ್ಚಳದಿಂದ ಭಾರೀ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಅನೇಕ ಚರ್ಮ ರೋಗ ಸಮಸ್ಯೆಗಳು, ನಿಶಕ್ತಿ ಮುಂತಾದ ಅನೇಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಕೂಡ ಇರುತ್ತದೆ. ಇದರ ಜೊತೆಗೆ ವಿದ್ಯುತ್ ಪೂರೈಕೆ ಕೂಡ ಸರಿಯಾಗಿ ಇಲ್ಲದಿರುವುದರಿಂದ ಆರ್ಥಿಕ ಚಟುವಟಿಕೆಗೂ ಕೂಡ ಮಂದಗತಿಯಲ್ಲಿ ಸಾಗುವ ಸಾಧ್ಯತೆ ಇದೆ.
-
Ganga Expressway: ಭಾರತದ ಅತಿದೊಡ್ಡ ಗ್ರೀನ್ಫೀಲ್ಡ್ ಹೆದ್ದಾರಿ ಯೋಜನೆಯಿಂದ ಪ್ರಾದೇಶಿಕ ಅಭಿವೃದ್ಧಿಗೆ ಹೊಸ ವೇಗ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications