'ಸಂವಿಧಾನವನ್ನೇ ಅರಿಯದೇ 50 ವರ್ಷ ರಾಜಕಾರಣ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್'
ಭಾರತದ ಸಂವಿಧಾನದ ರಚನಾ ಸ್ವರೂಪ ಮತ್ತು ಅದರ ಉದ್ದೇಶದ ಬಗೆಗೆ ಸರಿಯಾದ ಜ್ಞಾನ ಹೊಂದಿಲ್ಲದ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರು ಕೇವಲ ತನ್ನ ಸುತ್ತ ವ್ಯಕ್ತಿ ಕೇಂದ್ರಿತವಾದ ಚರ್ಚೆಯೊಂದು ನಡೆಯಲಿ ಎಂಬ ಕಾರಣಕ್ಕೆ ಸಂವಿಧಾನವನ್ನು ಬದಲಿಸುವ ಮಾತನ್ನು ಆಡಿರುವುದು ಅವರ ಬೇಜವಾಬ್ದಾರಿ ತನದ ಸಂಕೇತ.
ಈತನ ಪ್ರಕಾರ ಸಮವರ್ತಿ ಪಟ್ಟಿಯಲ್ಲಿರುವ ಅಂಶಗಳ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾಳ ಮೇಳ ಇಲ್ಲದೇ ಇರುವುದರಿಂದ ಸಂವಿಧಾನವನ್ನು ಬದಲಿಸಬೇಕಂತೆ. ಸರ್ಕಾರಗಳ ನಡುವೆ ತಾಳ ಮೇಳ ಇಲ್ಲದೇ ಹೋಗುವುದು ಸರ್ಕಾರಗಳ ಲೋಪವೋ ಇಲ್ಲ ಸಂವಿಧಾನದ ಲೋಪವೋ? ನಿಮ್ಮ ದುರ್ಬಲತೆಗೆ ಸಂವಿಧಾನವೇಕೆ ಜವಾಬ್ದಾರಿ ಹೊರಬೇಕು?
50 ವರ್ಷಗಳ ರಾಜಕೀಯ ನೋಡಿದ್ದರಿಂದಾಗಿಯೇ ಸಂವಿಧಾನವನ್ನು ಹೊಸದಾಗಿ ಬರೆಯಬೇಕು ಎಂದು ತೆಲಂಗಾಣ ಮುಖ್ಯಮಂತ್ರಿಗಳಿಗೆ ಅನ್ನಿಸಿದೆಯಂತೆ. ಸಂವಿಧಾನವನ್ನೇ ಅರ್ಥ ಮಾಡಿಕೊಳ್ಳದೇ ಈತ 50 ವರ್ಷ ರಾಜಕೀಯ ಹೇಗೆ ಮಾಡಿರಬಹುದು ಎಂದು ನೆನೆದರೆ ನನಗೆ ಆತಂಕವಾಗುತ್ತದೆ. ಭಾರತದ ಸಂವಿಧಾನವು ಜಗತ್ತಿನಲ್ಲೇ ಅತಿದೊಡ್ಡ ಸಂವಿಧಾನ ಎಂದು ಹೆಸರು ಪಡೆದಿದೆ.
ಅತಿದೊಡ್ಡ ಸಂವಿಧಾನ ಎಂದು ಕರೆಸಿಕೊಳ್ಳುವ ಸಲುವಾಗಿಯೇ ಸಂವಿಧಾನದೊಳಗೆ ಪುಟಗಳನ್ನು ತುಂಬಿಸಿಲ್ಲ. ಬದಲಿಗೆ ವಿಸ್ತಾರ ಭೂ ಪ್ರದೇಶ ಹೊಂದಿ, ಕೆಲವೇ ಕಿಲೋಮೀಟರ್ ಗಳ ಅಂತರಕ್ಕೆ ಒಂದು ಭಾಷೆ, ಸಂಸ್ಕೃತಿ ಮತ್ತು ವಿಭಿನ್ನ ಆಚರಣೆಯ ಜೊತೆಗೆ, ಹತ್ತಾರು ಧರ್ಮ, ನೂರಾರು ಜಾತಿಗಳನ್ನು ಹೊಂದಿರುವ ವೈವಿಧ್ಯಮಯ ದೇಶವಾಗಿರುವ ಕಾರಣಕ್ಕೆ, ಅವರೆಲ್ಲರ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಸಂವಿಧಾನವು ದೊಡ್ಡದಾಗಿ ರೂಪುಗೊಂಡಿದೆ.

ಚಂದ್ರಶೇಖರ ರಾವ್ ಅವರ ಪ್ರತ್ಯೇಕ ರಾಜ್ಯ ಬೇಕೆಂಬ ಬೇಡಿಕೆ
ಕೇವಲ ಹಕ್ಕಿನ ಪ್ರಜ್ಞೆ ಮಾತ್ರವಲ್ಲದೇ ಕರ್ತವ್ಯದ ಪ್ರಜ್ಞೆಯನ್ನೂ ಸಾರುವ ನಮ್ಮ ಸಂವಿಧಾನದಲ್ಲಿ ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ ವಿಂಗಡಣೆಯಾದ ರಾಜ್ಯಗಳ ಜನರನ್ನು ರಕ್ಷಿಸುವ ಆಡಳಿತ ಸೂತ್ರಗಳನ್ನು ವಿಸ್ತಾರವಾಗಿ ನೀಡಲಾಗಿದೆ. ಸಂವಿಧಾನದಲ್ಲಿ ಇಷ್ಟೊಂದು ಅವಕಾಶ ಇರುವುದರಿಂದಲೇ ಚಂದ್ರಶೇಖರ ರಾವ್ ಅವರ ಪ್ರತ್ಯೇಕ ರಾಜ್ಯ ಬೇಕೆಂಬ ಬೇಡಿಕೆಗೆ ಮನ್ನಣೆ ದೊರೆತಿದೆ.

ಸಂವಿಧಾನದಲ್ಲಿ ಇರುವ ಅಂಶಗಳು ಬಹುತೇಕ ಎಲ್ಲಾ ಭಾರತೀಯರ ಭಾವನೆ
ಇಷ್ಟೇ ಅಲ್ಲದೇ ಸಂವಿಧಾನದಲ್ಲಿ ಇರುವ ಅಂಶಗಳು ಬಹುತೇಕ ಎಲ್ಲಾ ಭಾರತೀಯರ ಭಾವನೆ, ಆಚರಣೆ, ಆಡಳಿತ, ರಕ್ಷಣೆ ಮತ್ತು ಎಲ್ಲರೂ ಸಹಯೋಗದೊಂದಿಗೆ ಆರೋಗ್ಯಪೂರ್ಣವಾಗಿ ಬದುಕಬೇಕೆಂಬ ತಳಹದಿಯ ಮೇಲೆ ರಚಿತವಾಗಿದೆ. ಸಂವಿಧಾನ ಎಂಬುದು ಸಿಹಿನೀರಿನ ಸಮುದ್ರ ಇದ್ದಂತೆ, ಅಲ್ಲಿ ಜೀವ ರಾಶಿಗಳು ಬದುಕಲು ಬೇಕಾದ ಎಲ್ಲ ಅವಕಾಶಗಳನ್ನೂ ಸೃಷ್ಟಿಸಲಾಗಿದೆ. ಇಂತಹ ಸಮುದ್ರದ ಸಹಾಯದಿಂದ ಎಲ್ಲರನ್ನೂ ಬದುಕಿಸಬೇಕಾದ ಜವಾಬ್ದಾರಿ ಹೊತ್ತಿರುವ ಕೆಸಿಆರ್ ಅಂತಹ ಜನ ಪ್ರತಿನಿಧಿಗಳು ಅಂತಹ ಸಮುದ್ರವನ್ನೇ ಬದಲಿಸಬೇಕು ಎನ್ನುವುದು ಮೂರ್ಖತನದ ಸಂಕೇತವಾಗಿದೆ.

ಎಲ್ಲರೂ ಸರಿಯಾಗಿ ನಡೆಯುತ್ತಾರೆ ಎಂಬುದು ಇನ್ನೊಂದು ಮೂರ್ಖತನ
ಬಾಬಾ ಸಾಹೇಬರು " ನನ್ನ ಸಂವಿಧಾನ ಉತ್ತಮವಾಗಿದ್ದರೂ ಸಹ ಅದು ಕೆಟ್ಟ ಜನರ ಕೈಗೆ ಸಿಕ್ಕರೆ, ಅದರ ಉದ್ದೇಶ ಫಲಿಸುವುದಿಲ್ಲ" ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ನೋಡಿದಾಗ ಚಂದ್ರಶೇಖರ್ ರಾವ್ ಅವರು ಮೊದಲು ಸಂವಿಧಾನವನ್ನು ಅರ್ಥಮಾಡಿಕೊಂಡು ಮಾತನಾಡುವುದನ್ನು ಕಲಿಯಬೇಕು. ಸಂವಿಧಾನವೇ ಅರ್ಥವಾಗದೇ ಸಂವಿಧಾನವನ್ನು ಬದಲಿಸುತ್ತೇವೆ ಎಂಬುದು ಮೊದಲನೇ ಮೂರ್ಖತನವಾದರೆ, ಸಂವಿಧಾನವನ್ನು ಹೊಸದಾಗಿ ಬರೆದ ಮೇಲೆ ಎಲ್ಲವೂ ಎಲ್ಲರೂ ಸರಿಯಾಗಿ ನಡೆಯುತ್ತಾರೆ ಎಂಬುದು ಇನ್ನೊಂದು ಮೂರ್ಖತನ.

ಡಾ.ಹೆಚ್.ಸಿ ಮಹದೇವಪ್ಪ ಲೇಖನ
ಹೀಗಾಗಿ ಕೇವಲ ಒಣ ಪ್ರಚಾರಕ್ಕಾಗಿ ತಮ್ಮ ಮೂಗಿನ ನೇರಕ್ಕೆ ಮಾತನಾಡುತ್ತಿರುವ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಅತಿ ಬುದ್ಧಿವಂತಿಕೆ ತೋರದೇ, ಮೊದಲು ಸಂವಿಧಾನವನ್ನು ತಿಳಿದುಕೊಳ್ಳಲಿ ಮತ್ತು ಸಂವಿಧಾನವನ್ನೇ ಅರಿಯದೇ 50 ವರ್ಷ ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಈಗ ಸಂವಿಧಾನವನ್ನು ಬದಲಿಸಬೇಕು ಎಂದು ಬೇಜವಾಬ್ದಾರಿಯಿಂದ ಮಾತನಾಡಿದ್ದಕ್ಕೆ ದೇಶದ ಜನರ ಕ್ಷಮೆಯಾಚಿಸಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ!
Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications