ವಿಶ್ವ ಏಡ್ಸ್ ದಿನ: ಜಾಗೃತಿ ಮೂಡಿಸಲು ಬದ್ಧರಾಗೋಣವೆಂದ ರಾಜಕೀಯ ನಾಯಕರು
ಏಡ್ಸ್/ಎಚ್ಐವಿ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮತ್ತು ಅದರ ಬಗ್ಗೆ ಶಿಕ್ಷಣ ಮಟ್ಟವನ್ನು ಹೆಚ್ಚಿಸಲು ಡಿಸೆಂಬರ್ 1, 1988ರಿಂದ ವಿಶ್ವ ಏಡ್ಸ್ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗಿದೆ.
ಪ್ರತಿ ವರ್ಷ ಡಿಸೆಂಬರ್ 1ರಂದು ಆಚರಿಸಲಾಗುವ ವಿಶ್ವ ಏಡ್ಸ್ ದಿನ (ಮೊದಲ ಜಾಗತಿಕ ಆರೋಗ್ಯ ದಿನ) 33ನೇ ವರ್ಷಕ್ಕೆ ಕಾಲಿಡುತ್ತಿದೆ. ಇದು ಇತಿಹಾಸದಲ್ಲಿ ಅತ್ಯಂತ ವಿನಾಶಕಾರಿ ಸಾಂಕ್ರಾಮಿಕ ರೋಗಗಳಲ್ಲಿ ಒಂದಾಗಿದೆ. ಹೀಗಾಗಿ ಸೋಂಕಿಗೊಳಗಾದವರು ನಡೆಸುವ ಹೋರಾಟದ ಯಶಸ್ಸಿಗೆ ನಾವೆಲ್ಲ ನಿಮ್ಮೊಟ್ಟಿಗಿದ್ದೇವೆ ಎಂಬ ಸಂಕಲ್ಪವನ್ನು ಮಾಡುವಂತಹ ಮಹತ್ವದ ದಿನ ಇದಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಕೂ ಸಂದೇಶ
ಈ #WorldAIDSday (ವಿಶ್ವ ಏಡ್ಸ್ ದಿನ)ಯಂದು ನಾವು ಒಗ್ಗೂಡೋಣ, ಅಸಮಾನತೆಗಳನ್ನು ಕೊನೆಗಾಣಿಸಲು, ಏಡ್ಸ್ ಅನ್ನು ಕೊನೆಗಾಣಿಸಲು ಮತ್ತೊಮ್ಮೆ ಬದ್ಧರಾಗೋಣ. ಈ ಗುರಿಗಳನ್ನು ಸಾಧಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕೂ ಮೂಲಕ ಮನವಿ ಮಾಡಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಸಂದೇಶ
ಮಾನವ ಜನಾಂಗವನ್ನು ಕಾಡುತ್ತಿರುವ ಎಚ್ಐವಿ/ಏಡ್ಸ್ ಬಗ್ಗೆ ಸಮಾಜದಲ್ಲಿ ಹೆಚ್ಚು ಜಾಗೃತಿ ಅಗತ್ಯ. ಈ #WorldAIDSDay ಸಂದರ್ಭದಲ್ಲಿ ಹೊಸ ಪ್ರಕರಣಗಳನ್ನು ಕಡಿಮೆ ಮಾಡಲು ಅರಿವು ಮೂಡಿಸುವ ಪಣ ತೊಡೋಣ. ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಅರಿಯೋಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಏಡ್ಸ್ ತಡೆ ಸಂಸ್ಥೆ ಸಂದೇಶ
ವಿಶ್ವ ಏಡ್ಸ್ ದಿನ 2021 ಎಚ್.ಐ.ವಿ ಸೋಂಕಿತ ಜನರಿಗೆ ಭರವಸೆ ಮತ್ತು ಬೆಂಬಲ ತೋರಿಸಲು ಹಾಗೂ ಏಡ್ಸ್ ಬಗ್ಗೆ ಅರಿವು ಮೂಡಿಸಲು ಈ ದಿನ ಆಚರಿಸಲಾಗುತ್ತದೆ. ಘೋಷವಾಕ್ಯ "ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ" ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸಂಸ್ಥೆ (Karnataka State AIDS Prevention Society) ಹೇಳಿದೆ.

ಈ ಎಚ್ಐವಿ ಸೋಂಕನ್ನು 1984ರಲ್ಲಿ ಗುರುತಿಸಲಾಗಿದ್ದರೂ, 35 ಮಿಲಿಯನ್ಗಿಂತಲೂ ಹೆಚ್ಚು ಜನರು ಎಚ್ಐವಿ ಅಥವಾ ಏಡ್ಸ್ ಸಂಬಂಧಿತ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ. ಡಿಸೆಂಬರ್ 1, 1988ರಲ್ಲಿ ಪ್ರಥಮ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆಯು ಯು.ಎನ್. ಏಡ್ಸ್ ಸಂಯುಕ್ತ ನೇತೃತ್ವದಲ್ಲಿ ಈ ವಿಶ್ವ ಏಡ್ಸ್ ದಿನಾಚರಣೆಯನ್ನು ಆಚರಿಸಲು ಮುಂದಾಯಿತು.

ಎಚ್ಐವಿ/ಏಡ್ಸ್ ಕಾರ್ಯ ಚಟುವಟಿಕೆಗಳಿಗೆ ಸಂಪನ್ಮೂಲ ಕೂಡಿಸುವುದಿಂದೇ ಅಲ್ಲದೆ ವ್ಯಕ್ತಿಗತ ಮತ್ತು ಸಮುದಾಯದಲ್ಲಿ ಈ ಸೋಂಕಿನಿಂದ ಉಂಟಾಗುತ್ತಿರುವ ಸಮಸ್ಯೆಗಳು ಮತ್ತು ಇದರ ಬಗ್ಗೆ ಜಾಗೃತಿ ಹೆಚ್ಚಿಸುವುದು ಹಾಗೂ ಎಚ್ಐವಿ ಸೋಂಕಿತರಾಗಿರುವವರಿಗೆ ಬೆಂಬಲ ನೀಡುವುದು ಮತ್ತು ಅವರು ಅನುಭವಿಸುತ್ತಿರುವ ಕಳಂಕ ತಾರತಮ್ಯವನ್ನು ಕಡಿಮೆ ಮಾಡುವುದು ವಿಶ್ವದಲ್ಲಿನ ಎಚ್ಐವಿ ಏಡ್ಸ್ ಬೆಳವಣಿಗೆಯತ್ತ ದೃಷ್ಟಿ ಬೀರಿ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳತ್ತ ಪ್ರತಿಯೊಬ್ಬರ ಗಮನ ಸೆಳೆಯುವುದೇ ಧ್ಯೇಯವಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications