ವಿಶ್ವ ಗ್ರಾಹಕ ಹಕ್ಕುಗಳ ದಿನ: ನಿಮ್ಮ ಮಾಹಿತಿ ತಿಳಿದುಕೊಳ್ಳುವುದು ನಿಮ್ಮ ಹಕ್ಕು; ಕೂ
ಬೆಂಗಳೂರು, ಮಾರ್ಚ್ 15: ವಿಶ್ವ ಗ್ರಾಹಕರ ಹಕ್ಕುಗಳ ದಿನ-2022 ಸಂದರ್ಭದಲ್ಲಿ ಬಳಕೆದಾರ ರಕ್ಷಣೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಗೌಪ್ಯತೆಯ ಮಹತ್ವವನ್ನು ಕೂ ಅಪ್ಲಿಕೇಶನ್ ಪುನರುಚ್ಚರಿಸುತ್ತಿದ್ದು, ಸಾಮಾಜಿಕ ಬಳಕೆದಾರನ ಹಕ್ಕುಗಳನ್ನು ವಿವರಿಸಿದೆ.
ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಸಬಲೀಕರಣಗೊಳಿಸುವಲ್ಲಿ, ಸೃಜನಶೀಲತೆಯನ್ನು ಬೆಳೆಸುವಲ್ಲಿ, ಸಕಾರಾತ್ಮಕ ಮತ್ತು ಪ್ರಗತಿಪರ ಡಿಜಿಟಲ್ ಪರಿಸರ ನಿರ್ಮಿಸುವಲ್ಲಿ ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವುದನ್ನು ಪಾರದರ್ಶಕ ಮತ್ತು ಜವಾಬ್ದಾರಿಯುತ ಸಾಮಾಜಿಕ ಮಾಧ್ಯಮ ಕೂ ಒತ್ತಿ ಹೇಳುತ್ತದೆ.
ಈ ಬಗ್ಗೆ @KooPolicy ಹ್ಯಾಂಡಲ್ನಿಂದ ಪೋಸ್ಟ್ ಮಾಡಲಾಗಿದ್ದು, ವೇದಿಕೆ ಬಳಕೆದಾರರಿಗೆ ಅವರ ಗೌಪ್ಯತೆ ಮತ್ತು ರಕ್ಷಣೆಯ ಹಕ್ಕನ್ನು ನೆನಪಿಸುತ್ತದೆ. "ಕೂ'ನ ಪಾರದರ್ಶಕ ಗೌಪ್ಯತೆ ನೀತಿಯು ಪ್ಲಾಟ್ಫಾರ್ಮ್ನಲ್ಲಿ ಸಂವಹನ ನಡೆಸುವಾಗ ಬಳಕೆದಾರರಿಗೆ ಅರ್ಹವಾಗಿರುವ ಹಕ್ಕುಗಳ ಕುರಿತು ವಿವರಗಳನ್ನು ನೀಡುತ್ತದೆ. ಇದರಲ್ಲಿ ಬಳಕೆದಾರರ ಬಗ್ಗೆ ಪ್ಲಾಟ್ಫಾರ್ಮ್ ಹೊಂದಿರುವ ಮಾಹಿತಿಯನ್ನು ತಿಳಿದುಕೊಳ್ಳುವ ಹಕ್ಕು ಸಹ ಒಳಗೊಂಡಿವೆ. ಅಸಮರ್ಪಕ ಅಥವಾ ಅನಗತ್ಯವಾದಾಗ ವೈಯಕ್ತಿಕ ಮಾಹಿತಿಯನ್ನು ರದ್ದುಗೊಳಿಸುವ ಅಥವಾ ಅಳಿಸುವ ಹಕ್ಕನ್ನು ಒಳಗೊಂಡಿರುತ್ತದೆ.

ಏತನ್ಮಧ್ಯೆ ಆನ್ಲೈನ್ನಲ್ಲಿ ಬಳಕೆದಾರರ ಸುರಕ್ಷತೆ ಮತ್ತು ಭದ್ರತೆ ಹೆಚ್ಚಿಸಲು, ಕೂ ರಚನಾತ್ಮಕವಾದ ಸಮುದಾಯ ಮಾರ್ಗಸೂಚಿಗಳು ಮತ್ತು ವಿಷಯ ಮಾಡರೇಶನ್ ಗೈಡ್ ಅನ್ನು ಹೊಂದಿದೆ. ಬಳಕೆದಾರರಿಗೆ ಮತ್ತು ಮೊದಲ ಬಾರಿ ಸಾಮಾಜಿಕ ಮಾಧ್ಯಮ ಬಳಸುವವರಿಗೆ ಆನ್ಲೈನ್ನಲ್ಲಿ ಅನುಮತಿಸುವ ಅಥವಾ ನಿಷೇಧಕ್ಕೊಳಗಾಗುವ ವಿಷಯಗಳ ಕುರಿತು ಮಾರ್ಗದರ್ಶನ ನೀಡುವ ಮೂಲಕ ಆರೋಗ್ಯಕರ ವಿಷಯವನ್ನು ರಚಿಸಲು ಅನುವು ಮಾಡಿಕೊಡುತ್ತದೆ.
ಕುಂದುಕೊರತೆ ಪರಿಹಾರವು ಬಳಕೆದಾರರ ಹಕ್ಕುಗಳ ಮತ್ತೊಂದು ನಿರ್ಣಾಯಕ ಅಂಶವಾಗಿರುವುದರಿಂದ, ತ್ವರಿತವಾಗಿ ಕಾಳಜಿ ವಹಿಸುವ ಕುಂದುಕೊರತೆ ಅಧಿಕಾರಿ, ನೋಡಲ್ ಅಧಿಕಾರಿ ಮತ್ತು ಅನುಸರಣೆ ಅಧಿಕಾರಿಯನ್ನು ಒಳಗೊಂಡ ದೃಢವಾದ ಪ್ರಕ್ರಿಯೆಯನ್ನು ಕೂ ಹೊಂದಿದೆ.

ಬಳಕೆದಾರರು ತಮ್ಮ ಸಮಸ್ಯೆಗಳಿಗಾಗಿ [email protected] ಅಥವಾ [email protected] ಗೆ ಬರೆಯಬಹುದು, ವಿವಿಧ ವಿಷಯಗಳ ಕುರಿತು ವರದಿ ಮಾಡಲು ಮತ್ತು ಪರಿಹಾರಕ್ಕಾಗಿ ಸಂಪನ್ಮೂಲ ಕೇಂದ್ರದಲ್ಲಿನ ವರದಿ ಮತ್ತು ಪರಿಹಾರ ಅರ್ಜಿ ಕುರಿತ ಪೇಜ್ಗೆ ಭೇಟಿ ನೀಡಿ.
ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಸ್ವಯಂ-ಅಭಿವ್ಯಕ್ತಿಗೆ ಅತಿ ದೊಡ್ಡ ವೇದಿಕೆಯಾದ ಕೂ, ಇದು 20 ಮಿಲಿಯನ್ಗಿಂತಲೂ ಹೆಚ್ಚು ಡೌನ್ಲೋಡ್ಗಳನ್ನು ಹೊಂದಿದೆ. ಆನ್ಲೈನ್ನಲ್ಲಿ ಸುರಕ್ಷಿತವಾಗಿ ಮತ್ತು ಸೂಕ್ಷ್ಮಗ್ರಾಹಿಯಾಗಿಸಿ ಬಳಕೆದಾರರನ್ನು ರಕ್ಷಿಸಲು ಮತ್ತು ಸಂವೇದನಾಶೀಲಗೊಳಿಸಲು ನಿಯಮಿತವಾಗಿ ಉಪಕ್ರಮಗಳನ್ನು ಹೊರತರುತ್ತಿರುತ್ತದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications