ವಿಶ್ವ ಹಿರಿಯ ನಾಗರಿಕರ ದಿನ - ವೃದ್ಧರು ನಿರುಪಯುಕ್ತರಲ್ಲ, ನಮ್ಮ ಅಮೂಲ್ಯ ಆಸ್ತಿ
ಆಗಸ್ಟ್ 21, ವಿಶ್ವ ಹಿರಿಯ ನಾಗರಿಕರ ದಿನವಾಗಿ ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಹಿರಿಯ ನಾಗರಿಕರು ಒಂದು ತಲೆಮಾರಿನ ಹಿಂದಿನವರೆಗೂ ನಮ್ಮ ಕುಟುಂಬಗಳ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ ನೊಗ ಹೊತ್ತವರು. ದುಡಿಯುವ ಶಕ್ತಿ ಕುಂಠಿತಗೊಂಡರೂ ಅವರು ಯಾವತ್ತಿದ್ದರೂ ದೇಶದ ಆಸ್ತಿ. ಅವರಿಗಾಗಿ ಒಂದು ದಿನವನ್ನು ಮುಡಿಪಾಗಿಟ್ಟು ಆಚರಿಸುವುದು ಹೊಸ ತಲೆಮಾರಿನವರ ಭಾಗ್ಯ ಮತ್ತು ಕರ್ತವ್ಯ.
ಇಂದಿನ ವೇಗದ ಜೀವನ, ಅಥವಾ ಹಾಗೆ ವೇಗವಾಗಿ ಸಾಗುತ್ತಿದ್ದೇವೆಂಬ ಭ್ರಮೆಯಲ್ಲಿ ನಡೆಯುತ್ತಿರುವ ಈ ಲೋಕದಲ್ಲಿ ಮುಮ್ಮಲ ಮರುತ್ತಿರುವುದು ಹೆಚ್ಚಾಗಿ ಹಿರಿಯ ಜೀವಗಳೇ. ಯುವಜನರು ಸಂಪಾದನೆಯ ಬೇಟೆಗೆ ಬಿದ್ದು ಊರು ತೊರೆದು ಹೋಗುವ ಅಥವಾ ಸಂಗಾತಿಯ ಮಾತಿಗೆ ಕಟ್ಟುಬಿದ್ದು ಕುಟುಂಬ ತೊರದು ಹೋಗುವ ಪ್ರವೃತ್ತಿ ಅಥವಾ ಪರಿಸ್ಥಿತಿ ಹೆಚ್ಚುತ್ತಿದೆ. ಇದರಿಂದ ಬಾಧಿತವಾಗಿರುವ ವೃದ್ಧರ ಗೋಳನ್ನು ವಿವರಿಸುವುದು ಕಷ್ಟಸಾಧ್ಯ.
ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯ. ಆಗಸ್ಟ್ ೨೧ರ ಈ ದಿನವನ್ನು ಹಿರಿಯ ನಾಗರಿಕರ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಅರಿವು ಮೂಡಿಸುವ ಕೆಲಸ ಆಗಬೇಕು.

ಹಿರಿಯ ನಾಗರಿಕರ ದಿನ ಇತಿಹಾಸ
ಕಳೆದ 32 ವರ್ಷಗಳಿಂದಲೂ ವಿಶ್ವ ಹಿರಿಯ ನಾಗರಿಕರ ದಿನ ಆಚರಿಸಿಕೊಂಡು ಬರಲಾಗುತ್ತಿದೆ. 1991ರಲ್ಲಿ ಈ ದಿನದ ಘೋಷಣೆ ಮಾಡಲಾಯಿತು. ವಿಶ್ವ ಹಿರಿಯ ನಾಗರಿಕರ ದಿನ ಅಸ್ತಿತ್ವಕ್ಕೆ ಬರಲು ಕಾರಣವಾಗಿದ್ದು ಅಮೆರಿಕ ಮಾಜಿ ಅಧ್ಯಕ್ಷ ರೊನಾಲ್ಡ್ ರೀಗನ್. 1988 ಆಗಸ್ಟ್ 19ರಂದು ಅವರು ಘೋಷಣೆಗೆ ಸಹಿ ಹಾಕಿದರು. 1990ರಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಆಗಸ್ಟ್ 21ರ ದಿನವನ್ನು ವಿಶ್ವ ಹಿರಿಯ ನಾಗರಿಕರ ದಿನ ಎಂದು ಘೋಷಿಸಿತು.
ರೊನಾಲ್ಡ್ ರೀಗನ್ ಅವರು ಹಿರಿಯ ನಾಗರಿಕ ಸಾಧನೆಗಳನ್ನು ಪ್ರಶಂಸಿಸುತ್ತಾ, ಅವರನ್ನು ಗೌರವಿಸುವುದು ಎಷ್ಟು ಮುಖ್ಯ ಎಂಬ ವಿಚಾರವನ್ನು ತಮ್ಮ ಘೋಷಣೆಯಲ್ಲಿ ಎತ್ತಿತೋರಿಸಿದ್ದರು. ವಯೋವೃದ್ಧರಿಗೆ ನಾವು ಎಷ್ಟು ಋಣಿಯಾಗಿರಬೇಕು, ಸರಕಾರ ಈ ಹಿರಿಯ ಜೀವಗಳು ನೆಮ್ಮದಿಯಿಂದ ಮತ್ತು ಗೌರವದಿಂದ ಬದುಕಲು ಸಾಧ್ಯವಾಗುವಂತೆ ಹೇಗೆ ಮಾಡಬೇಕು ಎಂಬುದನ್ನು ರೇಗನ್ ಹೇಳಿದ್ದರು.

ಹಿರಿಯ ನಾಗರಿಕರ ಮಹತ್ವ
ವಿಶ್ವಸಂಸ್ಥೆ ವರದಿಯೊಂದರ ಪ್ರಕಾರ 2050ರಷ್ಟರಲ್ಲಿ ವಿಶ್ವಾದ್ಯಂತ ಹಿರಿಯ ನಾಗರಿಕ ಸಂಖ್ಯೆ 150 ಕೋಟಿ ಆಗಬಹುದು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ವೃದ್ಧರು ಇರುವುದರಿಂದ ಅವರ ಮೂಲಭೂತ ಅಗತ್ಯಗಳಿಗೆ ಅನುಕೂಲ ಮಾಡಿಕೊಡುವಂಥ ವ್ಯವಸ್ಥೆಯನ್ನು ನಿರ್ಮಿಸುವುದು ಅತ್ಯಗತ್ಯವಾಗಿದೆ.
ಯಾಕೆಂದರೆ ಎಲ್ಲಾ ವೃದ್ಧರೂ ಕೂಡ ತಮ್ಮ ಕೊನೆಗಾಲದಲ್ಲಿ ನೆಮ್ಮದಿಯಿಂದ ಇರುತ್ತಾರೆಂದು ಹೇಳಲು ಸಾಧ್ಯವಿಲ್ಲ. ಕೆಲವರಿಗೆ ಅವರ ಮಕ್ಕಳು, ಮೊಮ್ಮಕ್ಕಳ ಆಸರೆ ಸಿಗಬಹುದು. ಈ ಅದೃಷ್ಟ ಎಲ್ಲರಿಗೂ ಇರುವುದಿಲ್ಲ. ತಮ್ಮ ಮಕ್ಕಳಿಗಾಗಿ ಇಡೀ ಜೀವಮಾನ ದುಡಿದು, ಉಳಿತಾಯದ ಹಣ ಇಲ್ಲದೇ ವೃದ್ಧಾಪ್ಯಕ್ಕೆ ಕಾಲಿಟ್ಟವರೇ ಬಹುತೇಕರು. ಹಣಕಾಸು ಸಮಸ್ಯೆ ಮಾತ್ರವಲ್ಲ ವೃದ್ಧಾಪ್ಯದಲ್ಲಿ ಆರೋಗ್ಯ ಸಮಸ್ಯೆಯೂ ಬಹಳವಾಗಿ ಕಾಡುತ್ತದೆ. ಜೊತೆಗೆ, ದೈಹಿಕ ಮತ್ತು ಮಾನಸಿಕ ದೃಢತೆ ಕಳೆದುಕೊಂಡ ವೃದ್ಧರು ಬಹಳ ಸುಲಭವಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ.
ಈ ಹಿನ್ನೆಲೆಯಲ್ಲಿ ಹಿರಿಯ ಜೀವಗಳಿಗೆ ಭದ್ರತೆ ಒದಗಿಸುವ ಬಲಿಷ್ಠ ವ್ಯವಸ್ಥೆ ನಿರ್ಮಾಣವಾಗಬೇಕು.

ಆಚರಣೆ ಹೇಗೆ?
ನಮಗಾಗಿ ತಮ್ಮಿಡೀ ಜೀವನ ಮೀಸಲಿಟ್ಟ ವೃದ್ಧರಿಗೆ ಪ್ರೀತಿ, ಗೌರವ, ಕಾಳಜಿ ತೋರುವುದು ಎಲ್ಲರ ಕರ್ತವ್ಯ. ಹಿರಿಯ ನಾಗರಿಕರ ದಿನವಾದ ಇಂದು ನಾವು ವೃದ್ಧರ ಜೊತೆ ಸೆಲ್ಫಿ ತೆಗೆದುಕೊಂಡು ಸೋಷಿಯಲ್ ಮೀಡಿಯಾಗೆ ಹಾಕಿಕೊಳ್ಳುವುದಕ್ಕೆ ಸೀಮಿತವಾದರೆ ಅರ್ಥ ಇಲ್ಲ.
ನೀವು ವರ್ಷದ 365 ದಿನವೂ ನಿಮ್ಮ ಕುಟುಂಬದ ಹಿರಿಯ ಜೀವಗಳ ಜೊತೆ ಒಡನಾಡುತ್ತಿದ್ದೀರೆಂದರೆ ಅದು ನಿಮ್ಮ ಸೌಭಾಗ್ಯ. ಈಗಿನ ಜಾಗತಿಕತೆಯ ದಿನಗಳಲ್ಲಿ ಅದು ಕಷ್ಟ. ಈ ಒಂದು ದಿನವನ್ನು ಇಡಿಯಾಗಿ ನಿಮ್ಮ ಅಜ್ಜ ಅಜ್ಜಿ, ಅಪ್ಪ ಅಮ್ಮನ ಜೊತೆ ಕಳೆಯಿರಿ. ಅವರಿಗೆ ಖುಷಿ ಕೊಡುವ, ನೆಮ್ಮದಿ ತರುವ ಕೆಲಸವನ್ನು ಮಾಡಿಕೊಡಿ. ಅವರ ಮಾತನ್ನು ಆಲಿಸಿ. ಅವರಿಗೆ ಒಂದು ನೋಟಿನ ಕಂತೆ ಕೊಡುವುದಕ್ಕಿಂತ ಈ ಕೆಲಸಗಳು ಹೆಚ್ಚು ಅರ್ಥಪೂರ್ಣ.
ನಮ್ಮ ಪ್ರದೇಶದ ಸುತ್ತಮುತ್ತ ಅನೇಕ ವೃದ್ಧಾಶ್ರಮಗಳಿಗೆ. ಅಲ್ಲಿಗೆ ಹೋಗಿ ಅಲ್ಲಿನ ವೃದ್ಧರನ್ನು ಭೇಟಿಯಾಗಿ ಕಷ್ಟಸುಖ ಕೇಳಿ. ವೃದ್ಧಾಶ್ರಮಗಳಿಗೆ ದೇಣಿಗೆ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ.

ಸರಕಾರದ ಸೌಲಭ್ಯ ತಲುಪಿಸಿ
ನಮ್ಮ ಸರಕಾರಗಳು ವೃದ್ಧರಿಗೆಂದು ಹಲವು ಸೌಲಭ್ಯಗಳನ್ನು ಒದಗಿಸುತ್ತದೆ. ಅನೇಕ ಹಿರಿಯ ನಾಗರಿಕರಿಗೆ ಈ ಯೋಜನೆಗಳು ಬೇರೆ ಬೇರೆ ಕಾರಣಕ್ಕೆ ತಲುಪದೇ ಹೋಗಿರಬಹುದು. ನಿಮಗೆ ಇಂಥ ಪ್ರಕರಣಗಳು ಗಮನಕ್ಕೆ ಬಂದರೆ ಅವರಿಗೆ ನೆರವಾಗುವ ಪ್ರಯತ್ನ ಮಾಡಿ. ಹಿರಿಯ ನಾಗರಿಕರ ಕಾರ್ಡ್ ಮಾಡಿಸಿಕೊಡುವುದು, ಪಿಂಚಣಿ ಮಾಡಿಸಿಕೊಡುವುದು ಇತ್ಯಾದಿ ಕಾರ್ಯಗಳಲ್ಲಿ ನೆರವಾಗಿ.
ನಿಮ್ಮ ಇಂಥ ಈ ಸಹಾಯವು ಆ ವೃದ್ಧರಿಗೆ ದೊಡ್ಡ ಉಪಕಾರವಾಗಬಹುದು. ವಿಶ್ವ ಹಿರಿಯ ನಾಗರಿಕರ ದಿನ ಆಚರಣೆಗೂ ಒಂದು ಅರ್ಥ ಸಿಗಬಹುದು.
(ಒನ್ಇಂಡಿಯಾ ಸುದ್ದಿ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications