World Sight Day 2023; ಕಣ್ಣಿನ ಕಾಳಜಿಗೆ ಸಲಹೆಗಳು
ಅಕ್ಟೋಬರ್ 12 ಅನ್ನು 'ವಿಶ್ವ ದೃಷ್ಟಿ ದಿನ'ವಾಗಿ ಆಚರಣೆ ಮಾಡಲಾಗುತ್ತದೆ. ಕಣ್ಣುಗಳ ಸುರಕ್ಷತೆಗೆ ಪ್ರತಿಯೊಬ್ಬರೂ ಆದ್ಯತೆ ನೀಡುವಂತೆ ಅರಿವು ಮೂಡಿಸುವುದು ವಿಶ್ವ ದೃಷ್ಟಿ ದಿನದ ಪ್ರಮುಖ ಗುರಿಯಾಗಿದೆ.
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ. ರಮೇಶ್ ಬಾಬು ಅವರು ದೇವರು ಮನುಷ್ಯನಿಗೆ ನೀಡಿದ ಅದ್ಭುತ ಕೊಡುಗೆಗಳಲ್ಲಿ ಕಣ್ಣು ಸಹ ಒಂದಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಕಣ್ಣಿನ ಆರೈಕೆಗೆ ಒತ್ತು ನೀಡಬೇಕು ಎಂದು ಕರೆ ನೀಡಿದ್ದಾರೆ. 'ವಿಶ್ವ ದೃಷ್ಟಿ ದಿನ 2023' ಅಂಗವಾಗಿ ವಿಶೇಷ ಲೇಖನ ಇಲ್ಲಿದೆ.

ಜಾಗತಿಕವಾಗಿ ಕುರುಡುತನ ಮತ್ತು ದೃಷ್ಟಿ ಹೀನತೆಯ ಬಗ್ಗೆ ಜನ ಜಾಗೃತಿ ರೂಪಿಸಲು 2000ರ ಅಕ್ಟೋಬರ್ 12ರಿಂದ ಪ್ರತಿ ವರ್ಷ ವಿಶ್ವ ದೃಷ್ಟಿ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸಾಮಾನ್ಯವಾಗಿ ಕುರುಡುತನದ ಸಮಸ್ಯೆಗಳನ್ನು ತಡೆಗಟ್ಟಬಹುದಾದರೂ, ಹೆಚ್ಚಿನ ಸಂದರ್ಭಗಳಲ್ಲಿ ಸರಿಯಾದ ಚಿಕಿತ್ಸೆ ಪಡೆಯದ ಕಾರಣ, ಕ್ರಮೇಣ ದೃಷ್ಟಿ ಹೀನತೆಗೆ ಕಾರಣವಾಗುತ್ತವೆ.
ಸಾರ್ವಜನಿಕರು ಈ ದಿಶೆಯಲ್ಲಿ ಪೌಷ್ಟಿಕಕಾಂಶವುಳ್ಳ ಆಹಾರವನ್ನು ಸೇವಿಸಬೇಕು, ಊಟದಲ್ಲಿ ಹಸಿರು ತರಕಾರಿಗಳು, ಹಳದಿ ಮತ್ತು ಕೆಂಪು ಹಣ್ಣುಗಳು ಹಾಗೂ ಸ್ಥಳೀಯವಾಗಿ ಸಾಮಾನ್ಯವಾಗಿ ದಿನನಿತ್ಯ ಸಿಗುವ ತರಕಾರಿ ಮತ್ತು ಕಾಯಿಪಲ್ಲೆಗಳನ್ನು ದೈನಂದಿನ ಆಹಾರದಲ್ಲಿ ಸೇವಿಸುವುದಕ್ಕೆ ಮಹತ್ವ ನೀಡಬೇಕು.
ಕಣ್ಣಿನ ಸೋಂಕು ವಿಟಮಿನ್ 'ಎ' ಅನ್ನಾಂಗದ ಕೊರತೆ, ಅಪೌಷ್ಠಿಕತೆ, ಕಣ್ಣಿನ ಅಕ್ಷಿಪಟಿಲದ ಗಾಯ, ಅನುವಂಶಿಕ ನ್ಯೂನತೆ ಮುಂತಾದವುಗಳು ಕಣ್ಣಿನ ದೃಷ್ಟಿ ಹಾನಿಯಾಗಲು ಕಾರಣವಿರುತ್ತದೆ. ಕಣ್ಣಿಗೆ ಸಂಬಂಧಿಸಿದಂತೆ ಯಾವುದೇ ಸೋಂಕು ಕಂಡುಬಂದರೆ ನಿಗದಿತವಲ್ಲದ ಔಷಧಿಗಳನ್ನು ಹಾಕಬಾರದು, ಬದಲಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು.
ಡಯಾಬಿಟಿಕ್ ರೆಟಿನೋಪತಿ ಮತ್ತು ಸದ್ದಿಲ್ಲದೇ ಕಣ್ಣಿನ ದೃಷ್ಟಿಯನ್ನು ಹಾನಿ ಮಾಡುವ ಗ್ಲಾಕೋಮದಂತಹ ರೋಗಗಳನ್ನು ನಿಯಮಿತವಾಗಿ ಪರೀಕ್ಷಿಸುವ ಮೂಲಕ ದೃಷ್ಟಿಯನ್ನು ಸಂರಕ್ಷಿಸುವುದು. ಸಾರ್ವಜನಿಕರು ವಕ್ರಕಾರಕ ದೋಷಗಳು ಅಂದರೆ ದೃಷ್ಟಿ ದೋಷವುಳ್ಳವರು ನಿರ್ಲಕ್ಷ್ಯವಹಿಸದೇ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ನೇತ್ರ ತಜ್ಞರ ಅಭಿಪ್ರಾಯದಂತೆ ಕನ್ನಡಕಗಳನ್ನು ಹಾಕಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಕಣ್ಣಿನ ಪೊರೆ ಕಂಡುಬಂದರೆ ಸಕಾಲದಲ್ಲಿ ವೈದ್ಯರಿಂದ ಪರೀಕ್ಷೆ ಮಾಡಿಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕು.
ಮೊಬೈಲ್, ಕಂಪ್ಯೂಟರ್ ಬಳಕೆ; ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಮತ್ತು ಕಂಪ್ಯೂಟರ್ ಬಳಕೆ ದೈನಂದಿನ ಜೀವನದ ಚಟುವಟಿಕೆಗಳಾಗಿವೆ. ಅದರಲ್ಲೂ ಪೋಷಕರು ಮಕ್ಕಳಿಗೆ ಮೊಬೈಲ್ ಕೊಡುವುದನ್ನು ಆದಷ್ಟು ನಿಯಂತ್ರಿಸಿ ಮತ್ತು ಮೊಬೈಲ್ಗಳ ಪ್ರಕರತೆ (ಸ್ಕ್ರೀನ್ ಬೆಳಕು) ತುಂಬಾ ಕಡಿಮೆ ಇರುವಂತೆ ಕ್ರಮವಹಿಸಬೇಕು.
ಕಂಪ್ಯೂಟರ್ ಮುಂದೆ ಕಾರ್ಯನಿರ್ವಹಿಸುವಾಗ ಪ್ರತಿ 20 ನಿಮಿಷಕ್ಕೊಮ್ಮೆ ಕಂಪ್ಯೂಟರ್ ಪರದೆಯಿಂದ ಕನಿಷ್ಟ 20 ಸೆಕೆಂಡ್ ಕಾಲ ಬೇರೆಡೆಗೆ ದೃಷ್ಟಿ ಹರಿಸುವುದು ಉತ್ತಮ. ಕಣ್ಣುಗಳನ್ನು ಮುಟ್ಟುವ ಮುನ್ನ ಕೈಗಳನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು.
ಹಬ್ಬಗಳ ಸಮಯದಲ್ಲಿ ಹಾಗೂ ಮನೆಯ ವಿಶೇಷ ಕಾರ್ಯಕ್ರಮಗಳಲ್ಲಿ ಪಟಾಕಿಗಳನ್ನು ಬಳಸದಂತೆ, ಅದರಲ್ಲೂ ಪ್ರಬಲವಾದ ಪಟಾಕಿಗಳನ್ನು ಮಕ್ಕಳಿಗೆ ಕೊಡದಂತೆ ಜಾಗ್ರತೆ ವಹಿಸಬೇಕು.
ಪಟಾಕಿಗಳನ್ನು ಹಾರಿಸುವಾಗ ಪ್ಲಾಸ್ಟಿಕ್ ಡಬ್ಬಿಗಳು, ತಗಡಿನ ಟಿನ್ಗಳು ಮುಂತಾದವುಗಳನ್ನು ಪಟಾಕಿಗಳ ಮೇಲೆ ಮುಚ್ಚಿ ಹಾರಿಸದಿರುವಂತೆ ಪಾಲಕರು ನಿಗಾವಹಿಸಬೇಕು. ಪಟಾಕಿ ಸಿಡಿತದ ಗಾಯಗಳಿಂದ ದೃಷ್ಟಿ ಕಳೆದುಕೊಳ್ಳುವುದನ್ನು ತಡೆಯಬೇಕು ಎಂದು ಡಾ. ವೈ. ರಮೇಶ್ಬಾಬು ಸಲಹೆ ನೀಡಿದ್ದಾರೆ.
-
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications