ಚಿಂವ್ ಚಿಂವ್ ಗುಬ್ಬಚ್ಚಿ ಎಲ್ಲಿ ಹೋದೆ...
ಗುಬ್ಬಚ್ಚಿಗಳಿಲ್ಲದ ಮನೆ ಇಲ್ಲ ಎಂಬ ಮಾತು ದಶಕಗಳ ಹಿಂದಿನವರೆಗೂ ಚಾಲ್ತಿಯಲ್ಲಿತ್ತು. ಪ್ರತಿ ಮನೆಯಂಗಳದಲ್ಲಿ, ಪೇಟೆ ಬೀದಿಯ ಅಂಗಡಿಗಳ ಮುಂಭಾಗದಲ್ಲಿ ಗುಬ್ಬಚ್ಚಿಗಳ ಚಿಲಿಪಿಲಿ ಕೇಳುತ್ತಲೇ ಇತ್ತು. ಆದರೆ, ಮನೆಯ ಸದಸ್ಯರಂತೆಯೇ ಹಾರಾಡಿಕೊಂಡು, ಚಿಲಿಪಿಲಿ ಎನ್ನುತ್ತಿದ್ದ ಪುಟ್ಟ ಪುಟ್ಟ ಗುಬ್ಬಚ್ಚಿಗಳು ಇಂದಿನ ಮಕ್ಕಳಿಗೆ ಸಿಂಹ, ಹುಲಿ ಎಂದು ಚಿತ್ರಗಳನ್ನು ತೋರಿಸುವ ಸಾಲಿಗೆ ಸೇರಿರುವುದು ಬೇಸರದ ಸಂಗತಿಯಾಗಿದೆ. ಇಂದು ವಿಶ್ವ ಗುಬ್ಬಚ್ಚಿ ದಿನ. ಈ ನೆಪದಲ್ಲೊಂದು ಲೇಖನ ಇಲ್ಲಿದೆ...
ದೇಶದಲ್ಲಿವೆ ಐದು ಜಾತಿಯ ಗುಬ್ಬಿಗಳು
ಗುಬ್ಬಚ್ಚಿ/ ಗುಬ್ಬಿ (ಪಾಸರ್ ಡೊಮೆಸ್ಟಿಕಸ್) ವಿಶ್ವದೆಲ್ಲೆಡೆ ಕಂಡುಬರುವ ಪಾಸರೀಡೆ ಕುಟುಂಬಕ್ಕೆ ಸೇರಿದ ಪಕ್ಷಿ. ಚಿಕ್ಕ ಕೀಟಗಳು ಹಾಗೂ ಕಾಳುಗಳು ಇದರ ಆಹಾರ. ಈವರೆಗೆ ವಿಶ್ವದಲ್ಲಿ 26 ವಿವಿಧ ಜಾತಿಯ ಗುಬ್ಬಿಗಳನ್ನು ಗುರುತಿಸಿದ್ದು, ಇದರಲ್ಲಿ ನಮ್ಮ ದೇಶದಲ್ಲಿ ಪಾಸರ್ ಡೊಮೆಸ್ಟಿಕಸ್, ಪಾಸರ್ ಹಿಸ್ಪಾನಿಯೊಲೆನ್ಸಸ್, ಪಾಸರ್ ಪೈರೊನಾಟಸ್, ಪಾಸರ್ ರುಟಿಲನ್ಸ್, ಪಾಸರ್ ಮೊಂಟನಸ್ ಎಂಬ 5 ವಿಭಿನ್ನ ಜಾತಿಯ ಗುಬ್ಬಿಗಳನ್ನು ಕಾಣಬಹುದು.
ಇದರಲ್ಲಿ ಮನೆಗುಬ್ಬಿ ಸರ್ವವ್ಯಾಪಿ. ಇದರ ಜೀವಿತಾವಧಿ 3 ವರ್ಷ. ಪರಿಸರ ನಾಶ ಮತ್ತು (ಆಧುನಿಕ ಕಾಂಕ್ರೀಟ್ ಕಟ್ಟಡಗಳು ಗೂಡು ನಿರ್ಮಿಸಲು ಸೂಕ್ತವಲ್ಲ) ಗೂಡುಕಟ್ಟುವ ತಾಣಗಳ ನಾಶದಿಂದ, ಮೊಬೈಲ್ ಟವರ್, ಅವು ಹೊರಸೂಸುವ ತರಂಗಗಳು, ಶಬ್ದಮಾಲಿನ್ಯ, ಸೂಕ್ಷ್ಮ ಮಾಲಿನ್ಯ ಮತ್ತು ಮಿತಿಮೀರಿದ ಕೀಟನಾಶಕದ ಬಳಕೆಯಿಂದ ಗುಬ್ಬಿಯ ಸಂತತಿಯು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕ್ಷೀಣಿಸುತ್ತಿದೆ. ಒಂದು ಕಾಲದಲ್ಲಿ ಪಟ್ಟಣಗಳಲ್ಲಿ ಮಾತ್ರ ಕಾಂಕ್ರೀಟ್ ಕಟ್ಟಡಗಳ ನಿರ್ಮಾಣ ಸಾಮಾನ್ಯವಾಗಿತ್ತು. ಆದರೆ, ಇತ್ತೀಚೆಗೆ ಹಳ್ಳಿಗಳು ಇದಕ್ಕೆ ಹೊರತಾಗಿಲ್ಲ. ಪಟ್ಟಣವಿರಲಿ, ಹಳ್ಳಿಯಾಗಲಿ ಹಂಚಿನ ಹಾಗೂ ಸಾಂಪ್ರದಾಯಿಕ ಮಡಿಗೆ ಮನೆಯ ಪ್ರಾಂಗಣಗಳಲ್ಲಿ ಗುಬ್ಬಿಗಳು ಗೂಡುಕಟ್ಟಿ ಸಂಸಾರ ನಡೆಸುವುದು ಸಾಮಾನ್ಯವಾಗಿತ್ತು.

ಆಧುನಿಕತೆಗೆ ತಕ್ಕಂತೆ ಮಾನವ ಮನೆ ನಿರ್ಮಾಣಕ್ಕೆ ಬಳಸುವ ಕಚ್ಛಾವಸ್ತು ಮತ್ತು ವಿನ್ಯಾಸಗಳು ಗುಬ್ಬಿಗಳು ಗೂಡು ನಿರ್ಮಿಸಲು ಪೂರಕವಾಗದಿರುವುದು ಕೂಡಾ ಸಂತತಿ ಕ್ಷೀಣಿಸಲು ಒಂದು ಕಾರಣವಾಗಿದೆ ಎನ್ನುತ್ತಾರೆ ವೈಲ್ಡ್ ಲೈಫ್ ವೆಲ್ ಫೇರ್ ಸೊಸೈಟಿಯ ಜೀವವೈವಿಧ್ಯ ಸಂಶೋಧಕ ಮಂಜುನಾಥ ನಾಯಕ.
ಸಂತತಿ ಕ್ಷೀಣಿಸಲು ಕಾರಣವೇನು?
ಹಿಂದಿನ ದಿನಗಳಲ್ಲಿ ಧಾನ್ಯಗಳನ್ನು ಅಂಗಡಿ/ ಸಂತೆಯಿಂದ ತಂದು ಮರದಿಂದ ಸ್ವಚ್ಛಗೊಳಿಸುವಾಗ ಕಾಳುಗಳನ್ನು ಮನೆ ಅಂಗಳದಲ್ಲಿ ಗುಬ್ಬಿಗೋಸ್ಕರವೇ ಚೆಲ್ಲುತ್ತಿದ್ದರು. ಇದರಿಂದ ಗುಬ್ಬಿಗಳಿಗೆ ಹೇರಳವಾಗಿ ಆಹಾರ ಸಿಗುತ್ತಿತ್ತು. ಬದಲಾದ ಆಧುನಿಕ ಜೀವನ ಶೈಲಿಯಿಂದಲೂ, ಸೀಸ ಮಿಶ್ರಿತ ಪೆಟ್ರೋಲ್ ಬಳಕೆ, ಮೊಬೈಲ್ ಗೋಪುರದಿಂದ ಹೊರಸೂಸುವ ವಿದ್ಯುತ್ ಕಾಂತೀಯ ಸೂಕ್ಷ್ಮ ತರಂಗಗಳಿಂದ ಮೊಟ್ಟೆಯಿಂದ ಮರಿಯಾಗುವ ಪ್ರಕ್ರಿಯೆಗೆ ತೊಂದರೆ, ಮಿತಿಮೀರಿದ ಶಬ್ದಮಾಲಿನ್ಯದಿಂದಾಗಿ ಸಹ ಗುಬ್ಬಿಗಳ ಸಂಖ್ಯೆ ಕ್ಷೀಣಿಸಲು ಕಾರಣವೆನ್ನಬಹುದು. ಮನೆಗುಬ್ಬಿಗಳು ಪರಿಸರದ ನಿರಂತರ ಅವನತಿ/ ವಿಘಟನೆಯ ಸೂಚಕಗಳಾಗಿವೆ ಎಂದು ಅವರು ಹೇಳುತ್ತಾರೆ.

ವಿಶ್ವ ಗುಬ್ಬಚ್ಚಿ ದಿನ ಆಚರಣೆ
'ಕಣ್ಮರೆಯಾಗುತ್ತಿರುವ ಈ ಗುಬ್ಬಚ್ಚಿಗಳನ್ನು ರಕ್ಷಣೆ ಮಾಡುವ ಸಲುವಾಗಿ ನೇಚರ್ ಫಾರ್ ಎವರ್ ಸೊಸೈಟಿಯ ಸಂಸ್ಥಾಪಕ ಮೊಹ್ಮದ್ ದಿಲಾವರ್ ಮತ್ತು ಎಕೊ- ಸಿಸ್ ಆಕ್ಷನ್ ಫೌಂಡೇಷನ್ ಫ್ರಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿವರ್ಷ ಮಾರ್ಚ್ 20ರಂದು ವಿಶ್ವ ಗುಬ್ಬಚ್ಚಿ ದಿನವನ್ನು ಆಚರಿಸಲಾಗುತ್ತದೆ. 2010ರಿಂದ ವಿಶ್ವದ ವಿವಿಧ ದೇಶಗಳಲ್ಲಿ ಈ ಆಚರಣೆ ಪ್ರಾರಂಭವಾಯಿತು. ಪ್ರಕೃತಿ ಸಂರಕ್ಷಣೆಯ ಅಂತರರಾಷ್ಟ್ರೀಯ ಸಂಘಟನೆಯ (ಐಯುಸಿಎನ್) ವರದಿಯ ಪ್ರಕಾರ, 25 ವರ್ಷಗಳಲ್ಲಿ ಗುಬ್ಬಿಗಳ ಸಂತತಿಯು ಶೇ 71ರಷ್ಟು ಕುಸಿದಿದೆ. ಈ ಸಂತತಿಯ ಬಗ್ಗೆ ಅರಿವು ಮೂಡಿಸಲು ಮತ್ತು ಸಂರಕ್ಷಿಸಲು ಗುಬ್ಬಚ್ಚಿಯನ್ನು 2012ರಲ್ಲಿ ದೆಹಲಿಯ ರಾಜ್ಯ ಪಕ್ಷಿಯಾಗಿ ಘೋಷಿಸಲಾಯಿತು. ಇತ್ತೀಚಿಗೆ ಬಿಹಾರ ರಾಜ್ಯವು ಕೂಡ ಗುಬ್ಬಚ್ಚಿಯನ್ನು ರಾಜ್ಯಪಕ್ಷಿಯಾಗಿ ಘೋಷಿಸಿತು' ಎಂದು ಅವರ ವಿವರಿಸಿದರು.
ಗುಬ್ಬಿಗಳ ಸಂರಕ್ಷಣೆ ಹೇಗೆ?
ಗುಬ್ಬಿಗಳು ಮಾನವರ ನಿಕಟ ಸಂಬಂಧಿ. ಅವುಗಳಿಗೆ ವಾಸಿಸಲು ಅನುಕೂಲವಾಗುವಂತೆ ಮನೆಯ ಸುತ್ತಮುತ್ತ ಮರಗಳನ್ನು ಬೆಳೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಬೆಳೆದಿರುವ ಗಿಡಗಳ ರೆಂಬೆಗಳಿಗೆ ನೀರು ತುಂಬಿದ ಮಡಿಕೆಗಳನ್ನು ನೇತು ಹಾಕುವುದು, ತಾರಸಿಗಳ ಮೇಲೆ ನೀರು ತುಂಬಿದ ಮಡಿಕೆಗಳನ್ನು ಇಡುವ ಮೂಲಕ ಬೇಸಿಗೆಯಲ್ಲಿ ಅವುಗಳಿಗೆ ದಣಿವಾರಿಸಿಕೊಳ್ಳಲು ಅನುಕೂಲ ಮಾಡಿಕೊಡಬೇಕು. ಗುಬ್ಬಿಗಳು ಮನೆಯಲ್ಲಿ ಗೂಡು ನಿರ್ಮಿಸುವುದು ಸಾಮಾನ್ಯ. ಅದನ್ನು ಅಪಶಕುನವೆಂದು ಗೂಡು ನಾಶ ಮಾಡಬಾರದು ಎನ್ನುವುದು ಮಂಜುನಾಥ ನಾಯಕ ಅವರ ಕಳಕಳಿ.

ಪ್ರತಿ ವನ್ಯಜೀವಿಗಳು ಪರಿಸರ ಸಮತೋಲನದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಮಳೆ ತರುವಲ್ಲಿ ಹಾಗೂ ಮಳೆ ನೀರು ಇಂಗಿಸಲು ಅರಣ್ಯಗಳು ಬಹುಮುಖ್ಯ. ಅರಣ್ಯವೃದ್ಧಿಯಲ್ಲಿ ಪಕ್ಷಿ ಸಂಕುಲ ಪ್ರಮುಖ ಪಾತ್ರ ವಹಿಸುತ್ತವೆ. ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಅವರು ಕರೆ ನೀಡುತ್ತಾರೆ.
-
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna












Click it and Unblock the Notifications