ವಿದ್ಯಾರ್ಥಿಗಳಿಗೇಕೆ ಡಾ. ಅಬ್ದುಲ್ ಕಲಾಂ ಅಚ್ಚು ಮೆಚ್ಚು
ವಿಶ್ವದಾದ್ಯಂತ ಅಕ್ಟೋಬರ್ 15ದನ್ನು 'ವಿಶ್ವ ವಿದ್ಯಾರ್ಥಿಗಳ ದಿನ' ವಾಗಿ ಆಚರಣೆ ಮಾಡಲಾಗುತ್ತದೆ. ಭಾರತದ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಜನ್ಮದಿನವನ್ನು ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಗುತ್ತದೆ.
2010ರಲ್ಲಿ ಮೊದಲ ಬಾರಿಗೆ ಯನೈಟೆಡ್ ನೇಷನ್ಸ್ 'ವಿಶ್ವ ವಿದ್ಯಾರ್ಥಿಗಳ ದಿನ'ವನ್ನು ಆಚರಣೆ ಮಾಡಿತು. ಆಗ ಎಪಿಜೆ ಅಬ್ದುಲ್ ಕಲಾಂ ಅವರಿಗೆ 79 ವರ್ಷ ವಯಸ್ಸಾಗಿತ್ತು. ಇಂದು ಹುಟ್ಟು ಹಬ್ಬದ ಸಂದರ್ಭದಲ್ಲಿ ಭಾರತ ಅಬ್ದುಲ್ ಕಲಾಂ ನೆನಪು ಮಾಡಿಕೊಳ್ಳುತ್ತದೆ.
ಡಾ. ಎಪಿಜೆ ಅಬ್ದುಲ್ ಕಲಾಂ ಭಾರತ ಕಂಡ ಅತ್ಯಂತ ಸರಳ ರಾಷ್ಟ್ರಪತಿ. ಸಂಶೋಧನಾ ವಿದ್ಯಾರ್ಥಿಗಳ ಪಾಲಿನ ನೆಚ್ಚಿನ ವಿಜ್ಞಾನಿ, ಓದುಗರಿಗೆ ನೆಚ್ಚಿನ ಲೇಖಕ. ಹೀಗೆ ಹಲವಾರು ಕ್ಷೇತ್ರಗಳಲ್ಲಿ ಕಲಾಂ ಭಾರತೀಯರಿಗೆ ಅತ್ಯಂತ ಪ್ರೀತಿ ಪಾತ್ರರು.

ಡಾ. ಕಲಾಂ 15 ಅಕ್ಟೋಬರ್, 1931ರಲ್ಲಿ ತಮಿಳುನಾಡಿನ ರಾಮೇಶ್ವರಂನಲ್ಲಿ ಜನಿಸಿದರು. ಫಿಸಿಕ್ಸ್ ಮತ್ತು ಏರೋಸ್ಪೇಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದರು. ನಾಲ್ಕು ದಶಕಗಳ ಕಾಲ ವಿಜ್ಞಾನಿಯಾಗಿ ಡಿಆರ್ಡಿಓ ಮತ್ತು ಇಸ್ರೋದಲ್ಲಿ ಕೆಲಸ ಮಾಡಿದರು.
ಉಪನ್ಯಾಸ ಮಾಡುವುದು ಅಬ್ದುಲ್ ಕಲಾಂ ಅವರ ನೆಚ್ಚಿನ ವೃತ್ತಿಯಾಗಿತ್ತು. ಇಂದಿಗೂ ಸಹ ವಿಶ್ವಮಟ್ಟದಲ್ಲಿ ಅವರು ಇದಕ್ಕಾಗಿಯೇ ಪ್ರಸಿದ್ಧಿ ಪಡೆದಿದ್ದಾರೆ. ತಮ್ಮ ಪ್ರೀತಿಯ ವೃತ್ತಿಯನ್ನು ಮಾಡುತ್ತಿದ್ದಾಗಲೇ ಅಬ್ದುಲ್ ಕಲಾಂ ವಿಧಿವಶರಾದರು.
2015, ಜುಲೈ 27ರಂದು ಅಬ್ದುಲ್ ಕಲಾಂ ಶಿಲ್ಲಾಂಗ್ನ ಐಐಎಂನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದರು. ವೇದಿಕೆ ಮೇಲೆಯೇ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಅವರು ಕೊನೆಯುಸಿರೆಳೆದಿದ್ದರು.
ವಿಶ್ವದಾದ್ಯಂತ ಇರುವ ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಬದ್ಧತೆಗಳನ್ನು ಗೌರವಿಸಲು ಅಕ್ಟೋಬರ್ 15ರಂದು 'ವಿಶ್ವ ವಿದ್ಯಾರ್ಥಿಗಳ ದಿನ'ವನ್ನು ಆಚರಣೆ ಮಾಡಲಾಗುತ್ತದೆ. ಅಬ್ದುಲ್ ಕಲಾಂ ಅವರನ್ನು ನೆನೆಪು ಮಾಡಿಕೊಳ್ಳಲಾಗುತ್ತದೆ.
ಹಲವಾರು ಪುಸ್ತಕಗಳನ್ನು ಬರೆದಿರುವ ಅಬ್ದುಲ್ ಕಲಾಂ ಭಾರತ ರತ್ನ, ಪದ್ಮಭೂಷಣ, ಪದ್ಮ ವಿಭೂಷಣ, ವೀರ ಸಾವರ್ಕರ್, ರಾಮಾನುಜಂ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಭಾರತೀಯರು ಪ್ರೀತಿಯಿಂದ ಅವರನ್ನು 'ಮಿಸೈಲ್ ಮ್ಯಾನ್ ಆಫ್ ಇಂಡಿಯಾ' ಎಂದು ಕರೆಯುತ್ತಾರೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರ ಸಾಧನೆಯನ್ನು ಪರಿಗಣಿಸಿ ಹೀಗೆ ಕರೆಯಲಾಗುತ್ತದೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications