Robot Suicide: ವಿಶ್ವದಲ್ಲೇ ಮೊದಲು ಕೆಲಸದ ಒತ್ತಡಕ್ಕೆ 'ರೋಬೋಟ್' ಆತ್ಮಹತ್ಯೆ, ನೆಟ್ಟಿಗರು ವಿಷಾದ
ಈ ಬದುಕಿನಲ್ಲಿ ಮನುಷ್ಯ ಹೊಟ್ಟೆಪಾಡಿಗಾಗಿ ಆರೋಗ್ಯ ಮರೆತು ಸಾಕಷ್ಟು ಸಮಸ್ಯೆಗಳ ನಡುವೆಯು ಕೆಲಸ ಮಾಡುತ್ತಿರುತ್ತಾರೆ. ಹೀಗಾಗಿ ಆನಾರೋಗ್ಯ ಕೆಲವೊಮ್ಮೆ ಮಾನಸಿಕ ಒತ್ತಡಕ್ಕೆ ಒಳಗಾಗಬೇಕಾಗುತ್ತದೆ.ಕೆಲವರು ಈ ಒತ್ತಡ ತಾಳಲಾರದೇ ಆತ್ಮಹತ್ಯೆ ದಾರಿ ಹಿಡಿದಿದ್ದನ್ನು ನಾವೆರಲ್ಲರೂ ನೋಡಿದ್ದೇವೆ. ಇದೀಗ ಈ ಸಾಲಿಗೆ ರೋಬೋಟ್ (Robot Suicide) ಸೇರಿದ್ದು, ಇದು ವಿಶ್ವದ ಮೊದಲ ಪ್ರಕರಣವಾಗಿದೆ.
ಹೌದು, ದಕ್ಷಿಣ ಕೋರಿಯಾದಲ್ಲಿ ವಿಚತ್ರ ಘಟನೆಯೊಂದು ನಡೆದಿದೆ. ಇಲ್ಲಿನ ರೋಬೋಟ್ ವೊಂದು ಕೆಲಸದ ಒತ್ತಡ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದೆ. ಈ ಮೊದಲ ಪ್ರಕರಣಕ್ಕೆ ವಿಶ್ವವೇ ಸಾಕ್ಷಿಯಾಗಿದೆ. ಇದೆಲ್ಲ ನಿಜವೇ? ಹೇಗೆ ಸಾಧ್ಯ? ಎಂದು ಕೇಳುವವರು ಮುಂದೆ ಓದಿ.

ಕೆಲಸದ ಒತ್ತಡಕ್ಕೆ ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನಾವೆಲ್ಲರು ಕೇಳಿದ್ದೇವೆ. ಅದೆ ರೀತಿ ನಿರಂತರ ಕೆಲಸದ ಒತ್ತಡದಿಂದಾಗಿ ರೋಬೋಟ್ ಕಚೇರಿಯ ಮೆಟ್ಟಿಲುಗಳಿಂದ ಜಿಗಿದು ಸೂಸೈಡ್ ಮಾಡಿಕೊಂಡಿದೆ ಎಂದು ವರದಿ ಆಗಿದೆ. ಈ ಕುರಿತು ಫೋಟೋಗಳು ಸಾಮಾಜಿಕ ಜಾತಲಾಣಗಳಲ್ಲಿ ಹರಿದಾಡುತ್ತಿವೆ.
ರೋಬೋಟ್ ಭಾಗ ಒಡೆದು ಛಿದ್ರ
ದಕ್ಷಿಣ ಕೋರಿಯಾದ ಗುಮಿ ನಗರ ಪಾಲಿಕೆಯಲ್ಲಿ ಕೆಲಸಕ್ಕೆಂದು ಈ ರೋಬೋಟ್ ಅನ್ನು ಇಡಲಾಗಿತ್ತು. ಇಲ್ಲಿನ ಕೆಲಸ ಹೆಚ್ಚಾಗಿ ರೋಬೋಟ್ ಒತ್ತಡಕ್ಕೆ ಒಳಗಾಗಿತ್ತು ಎನ್ನಲಾಗಿದೆ. ಹೀಗಾಗಿ ಕಚೇರಿ ಒಳಗೆ ಮೆಟ್ಟಿಲುಗಳಿಂದ ಜಿಗಿದಿದೆ. ಪರಿಣಾಮ ರೋಬೋಟ್ ಭಾಗಗಳು ಒಡೆದು ಚೆಲ್ಲಾ ಪಿಲ್ಲಿಯಾಗಿವೆ.
ಸದ್ಯ ರೋಬೋಟ್ ಬಿಡಿಭಾಗಗಳನ್ನು ಆಯ್ದಿರುವ ಕಂಪನಿಯು ಅದರ ಹಿನ್ನೆಲೆ ಏನು, ಯಾತಕಾಗಿ ಈ ರೀತಿ ಮೆಟ್ಟಿಲುಗಳಿಂದ ಜಿಗಿದಿದೆ. ನಿಜವಾಗಿಯು ಕೆಲಸದ ಒತ್ತಡ ಇತ್ತಾ? ಎಂಬೆಲ್ಲ ಆಯಾದಲ್ಲಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.
ಸಿಟಿ ಕೌನ್ಸಿಲರ್ ಕಚೇರಿಯ ಅಧಿಕಾರಿ ಆಗಿದ್ದ ರೋಬೋಟ್
ಈ ರೋಬೋಟ್ ಅನ್ನು ಕ್ಯಾಲಿಫೋರ್ನಿಯಾದ ಬೇರ್ ರೋಬೋಟಿಕ್ಸ್ ಕಂಪನಿಯು ಅಭಿವೃದ್ಧಿ ಪಡಿಸಿದೆ. ಕಳೆದ ಒಂದು ವರ್ಷದಿಂದ ಈ ರೊಬೋಟ್ ನಗರ ಪಾಲಿಕೆಯಲ್ಲಿ ಸಿಟಿ ಕೌನ್ಸಿಲರ್ ಕಚೇರಿಯ ಅಧಿಕಾರಿಯಾಗಿ ಕೆಲಸ ಮಾಡುತ್ತಿತ್ತು.
ನಗರಪಾಲಿಕೆಗೆ ಸಂಬಂಧಿಸಿದ ಕಡತ ಪರಿಶೀಲನೆ ಜತೆ ವಿಲೇವಾರಿ, ಅಗತ್ಯ ಪ್ರಚಾರ, ಆಡಳಿತ, ಅಗತ್ಯ ಮಾಹಿತಿ ಪೂರೈಕೆಯಂತ ಸೇವೆ ಮಾಡುತ್ತಿತ್ತು. ತನ್ನ ವ್ಯಾಪ್ತಿಯ ಎಲ್ಲ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಬಂದಿದೆ. ಸದ್ಯ ಈ ರೋಬೋಟ್ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿದ ಸಾಮಾಜಿಕ ಜಾಲತಾಣ ಬಳಕೆದಾರರು ವಿಷಾದ ವ್ಯಕ್ತಪಡಿಸಿದ್ದಾರೆ.
ಸದ್ಯ ರೋಬೋಟ್ ಆತ್ಮಹತ್ಯೆ ಕುರಿತು ತನಿಖೆ ಆರಂಭಿಸಲಾಗಿದೆ. ಈ ಕುರಿತು ಆದಷ್ಟು ಶೀಘ್ರವೇ ಸತ್ಯಾಸತ್ಯತೆ ತಿಳಿದು ಬರಬೇಕಿದೆ ಎಂಬುದೇ ನೆಟ್ಟಿಗರ ಆಶಯವಾಗಿದೆ.
-
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ''












Click it and Unblock the Notifications