ಕೈಗೆಟಕುವ ದರದಲ್ಲಿ ಮೊಟ್ಟ ಮೊದಲ 150 ಸಿಸಿ ಹೊಸ ಬೈಕ್ ಬಿಡುಗಡೆ ಮಾಡಿದ ಯಮಹಾ
ಜಪಾನ್ ಮೂಲದ ಯಮಹಾ ಕಂಪನಿಯು ಆಗಾಗ ಹೊಸ ಹೊಸ ಮಾದರಿಯ ದ್ವಿಚಕ್ರ ವಾಹನಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಈ ಪಂಕನಿಯ ಬೈಕ್ಗಳು ಭಾತದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದು, ಅಷ್ಟೇ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಹಾಗೆಯೇ ಇದೀಗ ಮೊಟ್ಟ ಮೊದಲ ಬಾರಿಗೆ 150cc ಹೈಬ್ರಿಡ್ ಬೈಕ್ ಅನ್ನು ಬಿಡುಗಡೆಗೊಳಿಸಿದೆ. ಹಾಗಾದ್ರೆ ವಿಶೇಷತೆ ಹಾಗೂ ಬೆಲೆಗಳ ವಿವರನ್ನು ಇಲ್ಲಿ ತಿಳಿಯಿರಿ.
ಯಮಹಾ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿ ಆಗಿದ್ದು, ಅತ್ಯಾಧುನಿಕ ಮಾದರಿಯ, ಸ್ಟೈಲೀಶ್ ಬೈಕ್ ಹಾಗೂ ಸ್ಕೂಟರ್ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸುತ್ತಾ ಬಂದಿದೆ. ಇವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಲೇ ಇದ್ದಾರೆ ಕೂಡ.

ಇದೀಗ ಯಮಹಾ ಹೈಬ್ರಿಡ್ ಟೆಕ್ನಾಲಜಿಯನ್ನು ಒಳಗೊಂಡಿರುವ ಹೊಸ FZ-S Fi ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ತಂದಿದ್ದು, ಇದನ್ನು ಕೊಂಡುಕೊಳ್ಳಲು ಗ್ರಾಹಕರು ಮುಗಿಬಿದ್ದಿದ್ದಾರೆ. ಈ ಹೊಸ ಯಮಹಾ Yamaha FZ-S Fi Hybrid ಬೈಕ್, ಗ್ರಾಹಕರ ಕೈಗೆಟಕುವ ಕೈಗೆಟುಕುವ ಬೆಲೆಯಲ್ಲಿಯೇ ಬಿಡುಗಡೆ ಆಗಿದೆ.
ಹೊಸ ಯಮಹಾ ಬೈಕ್ನ ಎಕ್ಸ್ ಶೋ ರೂಂ ಬೆಲೆ 1.45 ಲಕ್ಷ ರೂಪಾಯಿ ಆಗಿದೆ. ಇದು 150 ಸಿಸಿಯಲ್ಲಿ ಹೈಬ್ರಿಡ್ ಟೆಕ್ನಾಲಜಿ ಹೊಂದಿರುವ ದೇಶದ ಮೊದಲ ಬೈಕ್ ಆಗಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 2025ರ ಹೊಸ ಯಮಹಾ ಎಫ್ಝಡ್-ಎಸ್ ಫೈ ಹೈಬ್ರಿಡ್ ಬೈಕ್, ಹೊರಭಾಗದಲ್ಲಿ ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ.
ಈ ಬೈಕ್ ಅತ್ಯುತ್ತಮ ಹೈಡ್ಲೈಟ್, ದೊಡ್ಡದಾದ ಫ್ಯುಯೆಲ್ ಟ್ಯಾಂಕ್ ಹಾಗೂ ಇಂಟಿಗ್ರೇಟೆಡ್ ಫ್ರಂಟ್ ಟರ್ನ್ ಸಿಗ್ನಲ್ಗಳನ್ನು ಹೊಂದಿದೆ. ಗ್ರಾಹಕರಿಗೆ ರೇಸಿಂಗ್ ಬ್ಲೂ & ಸಯಾನ್ ಮೆಟಾಲಿಕ್ ಗ್ರೇ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದೆ. ಇದು 149 ಸಿಸಿ ಫೋರ್-ಸ್ಟ್ರೋಕ್, ಟೂ-ವಾಲ್ವ್, ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಒಳಗೊಂಡಿದೆ.
7,250 ಆರ್ಪಿಎಂನಲ್ಲಿ 12.4 ಹಾರ್ಸ್ ಪವರ್ ಹಾಗೂ 13.3 ನ್ಯೂಟನ್ ಮೀಟರ್ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸ್ಲಿಪ್ಪರ್ ಕ್ಲಚ್ ಆಯ್ಕೆಯೊಂದಿಗೆ 5-ಸ್ಪೀಡ್ ಗೇರ್ಬಾಕ್ಸ್ನ್ನು ಹೊಂದಿದ್ದು, ಇದರ ಪವರ್ ಟ್ರೇನ್ ಒಬಿಡಿ-2ಬಿ ಮಾನದಂಡಗಳನ್ನು ಪೂರೈಸಿದೆ.
ನೂತನ ಯಮಹಾ ಎಫ್ಝಡ್-ಎಸ್ ಫೈ ಮೋಟಾರ್ ಸೈಕಲ್, ಹೈಬ್ರಿಡ್ ಟೆಕ್ನಾಲಜಿ ಹೊಂದಿರುವುದರಿಂದ ಕಾರ್ಯಕ್ಷಮತೆಯೂ ಸುಧಾರಿಸುತ್ತದೆ. ಈ ಬೈಕ್, ಸ್ಮಾರ್ಟ್ ಮೋಟಾರ್ ಜನರೇಟರ್ ಮತ್ತು ಸ್ಟಾಪ್ & ಸ್ಟಾರ್ಟ್ ಸಿಸ್ಟಮ್ ಟೆಕ್ನಾಲಜಿಯನ್ನು ಹೊಂದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications