2020 ಹಿನ್ನೋಟ: ಭಾರತದ ರಾಜಕಾರಣಿಗಳ ವಿವಾದದ ಬೆನ್ನೇರಿದ ಹೇಳಿಕೆಗಳು
2020ರ ವರ್ಷ ಮುಗಿಯಲು ಇನ್ನೇನು ಒಂದು ದಿನ ಬಾಕಿಯಿದೆ. ಪ್ರತೀ ವರ್ಷದಂತೆ ಹೊಸವರ್ಷವನ್ನು ಸ್ವಾಗತಿಸಲು ಗುಂಪು ಸೇರುವಂತಿಲ್ಲ, ತಂಡತಂಡವಾಗಿ ಎಲ್ಲೂ ಹೋಗುವಂತಿಲ್ಲ. ಇನ್ನು ಬೆಂಗಳೂರಿನಲ್ಲಿ ಡಿಸೆಂಬರ್ 31ರ ಸಂಜೆಯಿಂದ ಸೆಕ್ಷನ್ 144 ಜಾರಿಯಲ್ಲಿರುತ್ತದೆ.
ಮಾರ್ಚ್ ನಿಂದ ಇದುವರೆಗೂ ಕೊರೊನಾ ವೈರಸ್ ಕಾಟದಿಂದ ಜನಜೀವನ ಇನ್ನೂ ಸಂಪೂರ್ಣವಾಗಿ ಸರಿದಾರಿಗೆ ಬಂದಿಲ್ಲ. ಕೋವಿಡ್ ಹಾವಳಿಯ ನಡುವೆಯೂ, ಬಿಹಾರದ ಅಸೆಂಬ್ಲಿ ಚುನಾವಣೆ ಸುಸೂತ್ರವಾಗಿ ನಡೆದಿತ್ತು. ಇದರ ಜೊತೆಗೆ ಹಲವು ರಾಜ್ಯಗಳಲ್ಲಿ ಸ್ಥಳೀಯ ಚುನಾವಣೆಯೂ ನಡೆದಿತ್ತು.
ವಿರೋಧಿಗಳ ವಿರುದ್ದ ಹರಿಹಾಯಲು ರಾಜಕಾರಣಿಗಳು ಅಸವಿಂಧಾನಿಕ ಪದಗಳನ್ನು ಬಳಸುವುದು ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಮಾಮೂಲಿ. ಕೆಲವರು ದೇಶ ಮತ್ತು ಕೋಮಿನ ಬಗ್ಗೆ ವಿವಾದಕಾರಿ ಹೇಳಿಕೆಯನ್ನು ನೀಡಿದ ಉದಾಹರಣೆಗಳೂ ಬೇಕಾದಷ್ಟು ಸಿಗುತ್ತವೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಮುಂತಾದ ನಾಯಕರು ನೀಡಿರುವ ವಿವಾದಾತ್ಮಕ ಹೇಳಿಕೆಗಳ ಒಂದು ಝಲಕ್ ಹೀಗಿದೆ:

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ
"ಕಾಶ್ಮೀರಿಗಳು ತಮ್ಮನ್ನು ಭಾರತಕ್ಕಿಂತ ಹೆಚ್ಚಾಗಿ ಚೀನಾದವರು ಆಳಿದರೆ ಉತ್ತಮ ಎನ್ನುವ ಭಾವನೆಯಲ್ಲಿದ್ದಾರೆ. ಚೀನಾ ಮುಸ್ಲಿಮರಿಗೆ ಒಳ್ಳೆಯದನ್ನು ಮಾಡಿದೆ. ಮೋದಿ ಸರಕಾರ ಎಲ್ಲಾ ರಂಗದಲ್ಲೂ ವೈಫಲ್ಯವನ್ನು ಕಂಡಿದೆ, ನೀಡಿದ ಒಂದು ಭರವಸೆಯನ್ನೂ ಕೇಂದ್ರ ಸರಕಾರ ಈಡೇರಿಸಲಿಲ್ಲ" ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ.

ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ
"ಮಮತಾ ಬ್ಯಾನರ್ಜಿಗೆ ಹುಚ್ಚು ಹಿಡಿದಿದೆ. ಇದು ಭಾರತ, ಪಾಕಿಸ್ತಾನ ಅಲ್ಲ ಎನ್ನುವ ಅರಿವು ಈಗ ಅವರಿಗೆ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸನ, ಹಿಂದೂ ಶಾಸನ ಸದ್ಯದಲ್ಲೇ ಬರಲಿದೆ. ಬಂಗಾಳವನ್ನು ದೇಶದಿಂದ ಪ್ರತ್ಯೇಕಿಸುವ ಪ್ರಯತ್ನವನ್ನು ಮಮತಾ ಮಾಡುತ್ತಿದ್ದರು - ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
"ಮುಸ್ಲಿಮರು ಭಾರತದಲ್ಲಿದ್ದರೂ ದೇಶಕ್ಕೆ ಏನೂ ಒಳ್ಲೆಯದನ್ನು ಮಾಡಿಲ್ಲ. ಅಂದು ದೇಶ ವಿಭಜನೆಯಾಗುವುದನ್ನು ಅವರು ವಿರೋಧಿಸಬೇಕಿತ್ತು. ಅಂದು ವಿರೋಧಿಸದೇ ಇದ್ದಿದ್ದರಿಂದ ಪಾಕಿಸ್ತಾನದ ಉದಯವಾಯಿತು"ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದರು.

ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಹನುಮಂತ ಹುಟ್ಟಿದ ದಿನಾಂಕ ನಿನಗೆ ಗೊತ್ತಾ, ನಾನು ದನದ ಮಾಂಸವನ್ನು ತಿನ್ನುತ್ತೇನೆ. ಅದು ನನ್ನ ಆಹಾರ ಪದ್ದತಿ, ಅದನ್ನು ಪ್ರಶ್ನಿಸಲು ಯಾರಿಗೂ ಹಕ್ಕಿಲ್ಲ. ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತರುವ ಹಿಂದೆ, ಬಿಜೆಪಿಯವರದ್ದು ಏನೋ ಷಡ್ಯಂತ್ರ್ಯವಿದೆ" ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ.

ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ
"ದೆಹಲಿಯ ಶಾಹೀನ್ ಭಾಗ್ ನಲ್ಲಿ ನಡೆಯುತ್ತಿರುವುದಾದರೂ ಏನೂ, ಬಹುಸಂಖ್ಯಾತರು ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ, ಮತ್ತೆ ಮೊಘಲರ ದರ್ಬಾರ್ ಬರುವ ದಿನ ದೂರವಿಲ್ಲ. ಈ ವಿದ್ಯಮಾನಗಳು ಹಿಂದೂಗಳಿಗೆ ಒಂದು ಎಚ್ಚರಿಕೆಯ ಗಂಟೆ, ಎದ್ದೇಳಿ ಹಿಂದೂಗಳೇ" ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ.

ಶಿವಸೇನೆಯ ಮುಖಂಡ ಸಂಜಯ್ ರಾವತ್, ಬಾಲಿವುಡ್ ನಟಿ ಕಂಗನಾ ರಣಾವತ್ ಬಗ್ಗೆ ಟೀಕೆ
"ಆಕೆ ಒಬ್ಬಳು ಹರಾಂಕೋರ್, ಬೇಮಾನ್, ನಾಟಿ ಗರ್ಲ್. ಈ ಮಣ್ಣಿನಲ್ಲಿ ದುಡಿದು, ಹೆಸರು ಸಂಪಾದಿಸಿ ಈಗ ಮುಂಬೈ ಅನ್ನು ದೂರುತ್ತಿದ್ದಾಳೆ. ಅವಳ ತಂದೆಯನ್ನು ಇಲ್ಲಿಗೆ ಕರೆದುಕೊಂಡು ಬರಬೇಕಾಗುತ್ತದೆಯೆಯೋ ಏನೋ, ಅಂತಹ ಹರಾಂಕೋರ್ ಹೆಂಗಸಿನ ಪರ ಯಾಕೆ ವಾದಿಸುತ್ತೀರಾ"ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್, ಬಾಲಿವುಡ್ ನಟಿ ಕಂಗನಾ ರಣಾವತ್ ಬಗ್ಗೆ ಟೀಕಿಸಿದ್ದರು.

ಬಿಹಾರದ ಸಿಎಂ ನಿತೀಶ್ ಕುಮಾರ್
ಜನರು ಎಂಟು, ಒಂಬತ್ತು ಮಕ್ಕಳನ್ನು ಹುಟ್ಟಿಸುತ್ತಾರೆ, ಹೆಣ್ಣು ಮಕ್ಕಳ ಮೇಲೆ ಅವರಿಗೆ ನಂಬಿಕೆ ಇರುವುದಿಲ್ಲ. ಇದರಿಂದ ಬಿಹಾರವನ್ನು ಹೇಗೆ ಮುನ್ನಡೆಸಲು ಸಾಧ್ಯ? ಇದೇ ಜನರ ಆದರ್ಶ ಎನ್ನುವುದಾದರೆ ಈ ಮಣ್ಣನ್ನು ದೇವರೇ ಕಾಪಾಡಬೇಕು. ಇಲ್ಲದಿದ್ದರೆ ಜಗತ್ತು ಸರ್ವನಾಶವಾಗಲಿದೆ" - ಬಿಹಾರದ ಸಿಎಂ ನಿತೀಶ್ ಕುಮಾರ್.

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
"ಎಲ್ಲರೂ ಬಂಗಾಳಕ್ಕೆ ಬರುತ್ತಿದ್ದಾರೆ, ಬರುವ ಮುನ್ನ ಅನುಮತಿಯನ್ನು ಪಡೆದಿದ್ದೀರಾ? ಎಷ್ಟೋ ಜನರಿಗೆ ಭದ್ರತೆಯನ್ನೂ ನೀಡಲಿಲ್ಲ. ನಾನು ನಿಮಗೆ ಸವಾಲು ಹಾಕುತ್ತಿದ್ದೇನೆ. ಏನಾದರೂ ಸಮಸ್ಯೆ ಉಂಟಾದಲ್ಲಿ ಅದನ್ನು ರಾಜ್ಯ ಸರಕಾರದ ಮೇಲೆ ಹೊರಿಸುತ್ತೀರಾ. ಸೋನಿಯಾ ಗಾಂಧಿ ವಿಕ್ಟೋರಿಯಾದ ರಾಣಿ, ಇನ್ನು ರಾಹುಲ್ ಗಾಂಧಿ ಕೋಡಂಗಿ ರಾಜಕುಮಾರ" ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ.
-
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ











Click it and Unblock the Notifications