2017 ವರ್ಷದ ಹಿನ್ನೋಟ: ರಾಜ್ಯದಲ್ಲಿ ಸುದ್ದಿಯಾದ 5 ಮಾನಿನಿಯರು
2017... ಹಲವರ ಪಾಲಿಗೆ ಸಿಹಿಯಾದರೆ, ಮತ್ತಷ್ಟು ಜನರ ಪಾಲಿಗೆ ಕಹಿ. ಆದರೆ ಕರ್ನಾಟಕದಲ್ಲಿ ಮಾತ್ರ 2017 ರಲ್ಲಿ ಮಹಿಳಾ ಪರ್ವ ಆರಂಭವಾಗಿತ್ತು. ಕರ್ನಾಟಕದ ಮಹಿಳೆಯರು, ಅಥವಾ ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬಂದು ಸೇವೆ ಸಲ್ಲಿಸಿ, ಉನ್ನತ ಹುದ್ದೆಯನ್ನು ಪಡೆದ ಮಹಿಳೆಯರಿಂದ ಹಿಡಿದು, ವ್ಯವಸ್ಥೆಯ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಮಹಿಳೆಯರವರೆಗೆ ಕತೆ ಬಿಚ್ಚಿಕೊಳ್ಳುತ್ತದೆ.
ಕನ್ನಡದ ನಟಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಕಾಂಗ್ರೆಸ್ ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆಯಾಗುತ್ತಿದ್ದಂತೆಯೇ ಕನ್ನಡಿಗರೆಲ್ಲ ಸಂಭ್ರಮಿಸಿದ್ದೋ ಸಂಭ್ರಮಿಸಿದ್ದೇ. ನಂತರ ಭ್ರಷ್ಟ ವ್ಯವಸ್ಥೆಯ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಡಿವೈಎಸ್ಪಿ ಅನುಪಮಾ ಶೇಣೈ ಹೊಸ ಪಕ್ಷ ಕಟ್ಟಿದ್ದು, ನೀಲಮಣಿ ರಾಜು ಅವರು ಕರ್ನಾಟಕದ ಪ್ರಪ್ರಥಮ ಮಹಿಳಾ ಡಿಜಿಪಿಯಾಗಿ ನೇಮಕವಾಗಿದ್ದು, ಹಿರಿಯ ಐಎಎಸ್ ಅಧಿಕಾರಿ ರತ್ನಪ್ರಭಾ ಅವರನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದು, ಜೊತೆಗೆ ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಭಾರತೀಯ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿ, ಮಹಿಳಾ ವಿಶ್ವಕಪ್ ನಲ್ಲಿ ಸಾಧನೆ ಮೆರಿದಿದ್ದು... ಎಲ್ಲವೂ ಕರ್ನಾಟಕದ ಪಾಲಿಗೆ ಹೆಮ್ಮೆಯ ಸಂಗತಿಯೇ.
ಹೀಗೇ 2017 ರಲ್ಲಿ ಕರ್ನಾಟಕದ ಕೀರ್ತಿಯನ್ನು ಹೆಚ್ಚಿಸಿದ ಐದು ಪ್ರಮುಖ ಮಹಿಳೆಯರ ಪಟ್ಟಿ ನಿಮಗಾಗಿ ಇಲ್ಲಿದೆ.

ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಹೆಡ್ ರಮ್ಯಾ
ಕನ್ನಡ ನಟಿಯಾಗಿ ಚಿರಪರಿಚಿತರಾದ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ, ಈ ವರ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗುವ ಮೂಲಕ ಹೆಚ್ಚು ಸುದ್ದಿಯಾಗಿದ್ದರು.
'ಅಭಿ' ಚಿತ್ರದ ಮೂಲಕ ಕನ್ನಡ ನೂರಾರು ಅಭಿಮಾನಿಗಳನ್ನು ಪಡೆದ ರಮ್ಯಾ, ಫಿಲ್ಮ್ ಫೇರ್ ಪ್ರಶಸಿಯನ್ನೂ ಪಡೆದ ಕನ್ನಡ ನಟಿ ಎಂಬ ಖ್ಯಾತಿ ಕಳಿಸಿದವರು. ಬೆಂಗಳೂರಿನಲ್ಲಿ ಜನಿಸಿದ ರಮ್ಯಾ, 2012 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ 2013 ರಲ್ಲಿ ನಡೆದ ಮಂಡ್ಯ ಉಪಚುನಾವಣೆಯಲ್ಲಿ(ಲೋಕಸಭೆ) ಗೆಲುವು ಸಾಧಿಸಿದ್ದರು. ನಂತರ 2014 ರಲ್ಲಿ ನಡೆದ ಚುನಾವಣೆಯಲ್ಲಿ ಸೋತಿದ್ದರು.
ಸದ್ಯಕ್ಕೆ ಕಾಂಗ್ರೆಸ್ ನ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯಾಗಿರುವ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ನಾಯಕಿ ಸೋನಿಯಾಗಾಂಧಿ ಅವರೊಂದಿಗೆ ಆಪ್ತ ಒಡನಾಟವನ್ನೂ ಹೊಂದಿದ್ದಾರೆ.

ರಾಜ್ಯದ ಮೊದಲ ಮಹಿಳಾ ಡಿಜಿಪಿ ನೀಲಮಣಿ ರಾಜು
ಕರ್ನಾಟಕ ರಾಜ್ಯದಲ್ಲಿ ಡಿಜಿಪಿ ಪದವಿಗೇರಿದ ಮೊದಲ ಮಹಿಳಾ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನೀಲಮಣಿ ರಾಜು.
ಇವರು ಉತ್ತರ ಪ್ರದೇಶದ ರೂರ್ಕಿಯಲ್ಲಿ 1960 ಜನವರಿ 17ರಂದು ಜನಿಸಿದ ಅವರು
ನೀಲಮಣಿ ರಾಜು 1983ನೇ ಸಾಲಿನ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತ ನರಸಿಂಹರಾಜು ಅವರ ಪತ್ನಿಯಾಗಿರುವ ಅವರು ಒಂದಷ್ಟು ಕಾಲ ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ 1993ರಲ್ಲಿ ಕೇಂದ್ರ ಸೇವೆಗೆ ತೆರಳಿದ್ದರು. 23ಕ್ಕೂ ಹೆಚ್ಚು ವರ್ಷಗಳ ಕಾಲ ರಾಜ್ಯದಿಂದ ಹೊರಗಿದ್ದ ನೀಲಮಣಿ ರಾಜು 2016ರಲ್ಲಿ ರಾಜ್ಯ ಸೇವೆಗೆ ವಾಪಸಾಗಿದ್ದರು.
ಡಿಜಿಪಿ ಆರ್ ಕೆ ದತ್ತಾ ಅವರ ನಿವೃತ್ತಿಯ ನಂತರ ಈ ಸ್ಥಾನ ಅಲಂಕರಿಸಿದ ನೀಲಮಣಿಯವರು, ತಾವು ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡುವುದಾಗಿ ಹೇಳಿಕೊಂಡಿದ್ದಾರೆ.

ಅನುಪಮಾ ಶೆಣೈ ಹೊಸ ಪಕ್ಷ
ಭ್ರಷ್ಟ ಅಧಿಕಾರಿಗಳ ವಿರುದ್ಧ ದನಿ ಎತ್ತುವ ಮೂಲಕ 2016 ರಲ್ಲಿ ಸುದ್ದಿಯಾಗಿದ್ದ ಕೂಡ್ಲಿಗಿ ಡಿವೈಎಸಿ ಅನುಪಮಾ ಶೆಣೈ ಅವರು ರಾಜಕೀಯ ಪಕ್ಷ ಕಟ್ಟುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಫಣಿಯೂರಿನವರಾದ ಶೆಣೈ ಅವರು ಪ್ರಾಮಾಣಿಕ ಅಧಿಕಾರಿ ಎಂದು ಹೆಸರು ಮಾಡಿದವರು. ಅವರನ್ನು ಕೂಡ್ಲಿಗಿಯಿಂದ ವಿಜಯಪುರದ ಇಂಡಿಗೆ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಿದ ಸರ್ಕಾರದ ಕ್ರಮದ ವಿರುದ್ಧ ಸಿಡಿದೆದ್ದು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದರು. ಅವರ ಧಅಯರ್ಯದ ನಡೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿತ್ತು.
ನವೆಂಬರ್ 1 ರಂದು ಭಾರತೀಯ ಜನಶಕ್ತಿ ಕಾಂಗ್ರೆಸ್ ಎಂಬ ಹೆಸರಿನೊಂದಿಗೆ ಅವರು ಹೊಸ ರಾಜಕೀಯ ಪಕ್ಷವೊಂದನ್ನು ಕಟ್ಟಿ, ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

ಮುಖ್ಯಕಾರ್ಯದರ್ಶಿಯಾಗಿ ರತ್ನಪ್ರಭಾ
ಹಿರಿಯ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರನ್ನು ನವೆಂಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಈ ಮೂಲಕ ಅವರು ಸಾಕಷ್ಟು ಸುದ್ದಿಯಲ್ಲಿದ್ದರು. ಡಾ.ಸುಭಾಷ್ ಚಂದ್ರ ಕುಂಟಿಯಾ ಅವರ ನಿವೃತ್ತಿಯ ನಂತರ ಈ ಸ್ಥಾನ ಪಡೆದ ರತ್ನಪ್ರಭಾ ಅವರು ಮೂಲತಃ ಆಂಧ್ರಪ್ರದೇಶದವರು.
ರತ್ನಪ್ರಭಾ, 1981 ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದವರು. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕೆಲಸ ಮಾಡಿರುವ ಇವರಿಗೆ ರಾಜ್ಯ ಕೈಗಾರಿಕಾ ಇಲಾಖೆ ಹೆಚ್ಚುವರಿ ಕಾರ್ದರ್ಶಿಯಾಗಿ ದಕ್ಷ ಕಾರ್ಯ ನಡೆಸಿದ ಅನುಭವವಿದೆ.

ವಿಶ್ವಕಪ್ ನಲ್ಲಿ ಕರ್ನಾಟಕಕ್ಕೆ ಕೀರ್ತಿ ತಂದ ವೇದಾ ಕೃಷ್ಣಮೂರ್ತಿ
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರಾದ ವೇದಾ ಕೃಷ್ಣಮೂರ್ತಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ. ಈ ವರ್ಷ ಇವರು ಹೆಚ್ಚು ಸುದ್ದಿಯಲ್ಲಿದ್ದಿದ್ದು, ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ವಿಶ್ವಕಪ್ ನಲ್ಲಿ ಫೈನಲ್ ಹಂತದವರೆಗೂ ಕೊಂಡೊಯ್ದವರಲ್ಲಿ ಮಹತ್ವದ ಪಾತ್ರ ವಹಿಸಿದ ಕಾರಣಕ್ಕೆ. 45 ಬಾಲ್ ಗಳಿಗೆ 70 ರನ್ ಗಳಿಸುವ ಮೂಲಕ, ವಿಶ್ವಕಪ್ ನಲ್ಲಿ ಅತೀ ವೇಗದ 70 ರನ್ ಗಳಿಸಿದ ದಾಖಲೆ ಬರೆದಿದ್ದರು.
ಆದರೆ ಇಂಗ್ಲೆಂಡ್ ಜೊತೆಗಿನ ಫೈನಲ್ ಪಂಮದ್ಯದಲ್ಲಿ ಭಾರತ ಕೇವಲ 9 ರನ್ ಗಳಿಂದ ಸೋತು, ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications