ವರ್ಷದ ವಿಶೇಷ : 2017ರ ಕರ್ನಾಟಕದ 10 ಪ್ರಮುಖ ಸುದ್ದಿಗಳು
ಬೆಂಗಳೂರು, ಡಿಸೆಂಬರ್ 28 : 2017 ಮುಗಿಯುತ್ತಾ ಬಂದಿದೆ, ಹೊಸ ಕನಸುಗಳು, ಹೊಸ ನಿರೀಕ್ಷೆಗಳ ಜೊತೆ ಹೊಸ ವರ್ಷವನ್ನು ನಾವು ಸ್ವಾಗತಿಸಬೇಕಿದೆ. ಕರ್ನಾಟಕದಲ್ಲಿ ಈ ವರ್ಷ ನಡೆದ ಪ್ರಮುಖ ಘಟನೆಗಳ ಚಿತ್ರಣವನ್ನು ಒಮ್ಮೆ ಅವಲೋಕಿಸೋಣ.
2017ರ ಜನವರಿ 1ರಂದು ರಾಜ್ಯ, ದೇಶ ಮಟ್ಟದಲ್ಲಿ ಸುದ್ದು ಮಾಡಿದ ನಗರ ಬೆಂಗಳೂರು. ಹೊಸ ವರ್ಷಾಚರಣೆ ವೇಳೆ ನಗರದ ಬ್ರಿಗೇಡ್ ರಸ್ತೆಯಲ್ಲಿ ಯುವತಿಗೆ ಕಿರುಕುಳ ನೀಡಿದ್ದು ದೊಡ್ಡ ಸುದ್ದಿಯಾಯಿತು. ಭಾರೀ ಚರ್ಚೆ ನಡೆಯಿತು.
ವರ್ಷದ ವಿಶೇಷ : 2017ರ ಪ್ರಮುಖ ರಾಜಕೀಯ ಬೆಳವಣಿಗೆಗಳು
ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಡೈರಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ, ಗುಜರಾತ್ ರಾಜ್ಯಸಭೆ ಚುನಾವಣೆ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ, ಬೆಂಗಳೂರು ಸ್ಟೀಲ್ ಬ್ರಿಡ್ಜ್ ವಿವಾದಗಳು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದವು.
ವರ್ಷಾಂತ್ಯಕ್ಕೆ ಕರ್ನಾಟಕದ 5 ವಿಶಿಷ್ಟ ಪ್ರವಾಸಿ ತಾಣಗಳು
ರಾಜಕೀಯವಾಗಿಯೂ ಕರ್ನಾಟಕ ಈ ವರ್ಷದಲ್ಲಿ ಹಲವು ಏಳು-ಬೀಳು ಕಂಡಿತು. ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಬಿಜೆಪಿ ಸೇರಿದರು. ರಾಜ್ಯದ ಹಲವು ನಾಯಕರು ಪಕ್ಷಾಂತರ ಮಾಡಿದರು. ಹೊಸ ವರ್ಷ ರಾಜ್ಯದ ಪಾಲಿಗೆ ಚುನಾವಣಾ ವರ್ಷ. (ಮಾಹಿತಿ : ಪಿಟಿಐ)
ಹೊಸ ವರ್ಷಕ್ಕೆ ನಿಮ್ಮ ಸಂಕಲ್ಪವೇನು? ನಮ್ಮ 5 ಸಲಹೆ
ಡೈರಿಯ ವಿವರ ಬಹಿರಂಗ
ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ವಿಧಾನಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರ ಡೈರಿ ಪ್ರಕರಣ ದೇಶಾದ್ಯಂತ ಸದ್ದು ಮಾಡಿತು. ಗೋವಿಂದರಾಜು ಮನೆಯಲ್ಲಿ ಐಟಿ ದಾಳಿ ನಡೆದಾಗ ಸಿಕ್ಕ ಡೈರಿಯಲ್ಲಿನ ಮಾಹಿತಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಡೈರಿಯಲ್ಲಿ ಹಲವರಿಗೆ ಹಣ ಕೊಟ್ಟ ಬಗ್ಗೆ ಮಾಹಿತಿ ಇತ್ತು ಎಂಬುದು ಚರ್ಚೆಗೆ ಗ್ರಾಸ ವಾಯಿತು.
ಡೈರಿ ಸ್ಪೋಟ: ಕೋಟಿ ಕೋಟಿ ಹಣದ ಸಂಪೂರ್ಣ ವಿವರ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ
ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿನ ನಿವಾಸದ ಮುಂದೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆಯಿತು. ಹತ್ಯೆ ನಡೆದು ನಾಲ್ಕು ತಿಂಗಳು ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಈ ಹತ್ಯೆ ದೇಶದ ತುಂಬಾ ಸುದ್ದಿ ಮಾಡಿತು.
'ಗೌರಿ ಹತ್ಯೆಯಾಗಿ 3 ತಿಂಗಳಾದರೂ ಹಂತಕರ ಸುಳಿವಿಲ್ಲ'
ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ
ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಯಾಗಬೇಕು ಎಂದು ಕರ್ನಾಟಕದಲ್ಲಿ ಹೋರಾಟ ಆರಂಭವಾಯಿತು. ಸಿದ್ದರಾಮಯ್ಯ ಸಂಪುಟದ ಸಚಿವರು ಹೋರಾಟದ ಮುಂಚೂಣಿಯಲ್ಲಿದ್ದಾರೆ. ಪರ-ವಿರೋಧ ಚರ್ಚೆ ಇನ್ನೂ ನಡೆಯುತ್ತಿದೆ. ಚುನಾವಣೆ ಬರುವ ತನಕ ಹೋರಾಟಕ್ಕೆ ಅಂತಿಮ ಸ್ವರೂಪ ಸಿಗುವುದು ಕಷ್ಟ.
ಕೊನೆಗೂ ಲಿಂಗಾಯತ ಅಲ್ಪಸಂಖ್ಯಾತ ಮಾನ್ಯತೆಗೆ ತಜ್ಞರ ಸಮಿತಿ ರಚನೆ
ಪರಪ್ಪನ ಅಗ್ರಹಾರಕ್ಕೆ ವಿ.ಕೆ.ಶಶಿಕಲಾ
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ವಿ.ಕೆ.ಶಶಿಕಲಾ ಅಪರಾಧಿ ಎಂಬ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯಿತು. ಆದ್ದರಿಂದ, ಫೆಬ್ರವರಿಯಲ್ಲಿ ವಿ.ಕೆ.ಶಶಿಕಲಾ, ಇ.ಇಳವರಸಿ ಮತ್ತು ಸುಧಾಕರನ್ ಪರಪ್ಪನ ಅಗ್ರಹಾರ ಜೈಲು ಸೇರಿದರು. ಎಲ್ಲಾ ಅಪರಾಧಿಗಳಿಗೆ 4 ವರ್ಷ ಜೈಲು ಶಿಕ್ಷೆ, 10 ಕೋಟಿ ರೂ. ದಂಡ ವಿಧಿಸಲಾಗಿದೆ.
ಶಶಿಕಲಾ ಮೇಲ್ಮನವಿ ಅರ್ಜಿ ವಜಾ, ಪರಪ್ಪನ ಜೈಲೇ ಗತಿ
ಚುನಾವಣೆಗೆ ಮೂರು ಪಕ್ಷಗಳ ತಯಾರಿ
2018 ಕರ್ನಾಟಕದ ಪಾಲಿಗೆ ಚುನಾವಣಾ ವರ್ಷ. ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ, ಕಾಂಗ್ರೆಸ್ ನವ ಕರ್ನಾಟಕ ನಿರ್ಮಾಣ, ಮನೆ-ಮನೆಗೆ ಕಾಂಗ್ರೆಸ್, ಜೆಡಿಎಸ್ ಕುಮಾರಪರ್ವ ಹೆಸರಿನಲ್ಲಿ ಚುನಾವಣಾ ಪ್ರಚಾರ ಆರಂಭಿಸಿದವು.
ಪರಿವರ್ತನಾ ಯಾತ್ರೆ : ಬಿಜೆಪಿ ಸಾಧಿಸಿದ್ದೇನು?
ಗುಜರಾತ್ ರಾಜ್ಯಸಭೆ ಚುನಾವಣೆ ಇಲ್ಲಿ ಚರ್ಚೆ
ಗುಜರಾತ್ನ ಕಾಂಗ್ರೆಸ್ ಶಾಸಕರು ಬೆಂಗಳೂರು ಹೊರವಲಯದ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದು, ಭಾರೀ ಚರ್ಚೆಗೆ ಕಾರಣವಾಯಿತು. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಶಾಸಕರ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ಸಂದರ್ಭದಲ್ಲಿ ಅವರ ಮನೆ ಮೇಲೆ ಐಟಿ ದಾಳಿ ನಡೆಯಿತು. ಕೊನೆಗೆ ರಾಜ್ಯಸಭೆ ಚುನಾವಣೆಯಲ್ಲಿ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಜಯಗಳಿಸಿದರು.
ಅಹ್ಮದ್ ಪಟೇಲ್ ಗೆಲುವು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ಬಿಜೆಪಿ
ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ
ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಯಿತು. ರಾಜ್ಯದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯಿತು. ರಾಜ್ಯ ಸರ್ಕಾರ ಕೇಂದ್ರದ ಬಿಜೆಪಿ ಸರ್ಕಾರದ ಮೇಲೆ ಹಲವು ಆರೋಪ ಮಾಡಿತು.
ಡಿಕೆಶಿ ಮೇಲೆ ಐಟಿ ದಾಳಿ : 10 ಪ್ರಮುಖ ಬೆಳವಣಿಗೆಗಳು
ವಿಶಾಲ್ ಸಿಕ್ಕ ರಾಜೀನಾಮೆ
ದೇಶದ ಪ್ರತಿಷ್ಠಿತ ಐಟಿ ಸೇವಾ ಕಂಪನಿ ಬೆಂಗಳೂರು ಮೂಲದ ಇನ್ಪೋಸಿಸ್ ನಲ್ಲಿ ಭಾರೀ ಬದಲಾವಣೆ ನಡೆಯಿತು. ಕಂಪನಿಯ ಸಿಇಓ ಹುದ್ದೆಗೆ ವಿಶಾಲ್ ಸಿಕ್ಕ ರಾಜೀನಾಮೆ ನೀಡಿದರು.
ಇನ್ಫೋಸಿಸ್ ಸಿಇಒ, ಎಂಡಿ ಸ್ಥಾನಕ್ಕೆ ವಿಶಾಲ್ ಸಿಕ್ಕಾ ರಾಜೀನಾಮೆ
ಎಸ್.ಎಂ.ಕೃಷ್ಣ ಬಿಜೆಪಿಗೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದರು. ಇದು ರಾಜ್ಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿತು. ನಂತರ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
ಎಸ್.ಎಂ. ಕೃಷ್ಣ ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ಉಪ ಚುನಾವಣೆ, ಸಾವು, ಸಂಪುಟ ವಿಸ್ತರಣೆ
* ಮಾಜಿ ಸಿಎಂ ಧರಂಸಿಂಗ್, ಸಚಿವ ಎಚ್.ಎಸ್.ಮಹದೇವ ಪ್ರಸಾದ್, ಮಾಜಿ ಸಚಿವ ಖಮರುಲ್ಲಾ ಇಸ್ಲಾಂ ನಿಧನ ರಾಜಕೀಯ ಕ್ಷೇತ್ರದ ನೋವಿನ ಸುದ್ದಿಗಳು.
* ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಉಪ ಚುನಾವಣೆ ನಡೆಯಿತು. ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಯಿತು.
* ಗೀತಾ ಮಹದೇವ ಪ್ರಸಾದ್, ಎಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸೇರಿದರು.