Year End Special 2024: ಈ ವರ್ಷ ಬೆಂಗಳೂರಿನಲ್ಲಿ ದಾಖಲಾದ ತ್ರಿಬಲ್ ರೈಡಿಂಗ್ ಪ್ರಕರಣಗಳು
ಬೆಂಗಳೂರು ನಗರದ ಸಂಚಾರಿ ಪೊಲೀಸರು ತ್ರಿಬಲ್ ರೈಡಿಂಗ್ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳುತ್ತಾರೆ. ತ್ರಿಬಲ್ ರೈಡ್ ಮಾಡಬೇಡಿ ಎಂದು ವಾಹನ ಸವಾರರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಕೈಗೊಳ್ಳುತ್ತಾರೆ. ಆದರೆ ಜನರು ಮಾತ್ರ ಈ ನಿಯಮ ಪಾಲನೆ ಮಾಡುವುದಿಲ್ಲ. ಇದಕ್ಕೆ ಸಾಕ್ಷಿ ನಗರದಲ್ಲಿ ಈ ವರ್ಷ ದಾಖಲಾದ ಕೇಸುಗಳ ಸಂಖ್ಯೆ.
ಸಂಚಾರಿ ಪೊಲೀಸರ ಮಾಹಿತಿಯಂತೆ 2024ರಲ್ಲಿ ಉದ್ಯಾನ ನಗರಿ ಬೆಂಗಳೂರಿನಲ್ಲಿ 1,49,694 ತ್ರಿಬಲ್ ರೈಡಿಂಗ್ ಪ್ರಕರಣಗಳು ದಾಖಲಾಗಿವೆ. ತ್ರಿಬಲ್ ರೈಡಿಂಗ್ ವಾಹನ ಸವಾರರು ಹಿಂಬದಿ ಕುಳಿತಿರುವವರು, ಪಾದಾಚಾರಿಗಳಿಗೆ ಸಹ ಅಪಾಯು ಉಂಟು ಮಾಡುತ್ತದೆ. ಇದು ಕಾನೂನು ಬಾಹಿರ ಎಂದು ತಿಳಿದಿದ್ದರೂ ಸಹ ಜನರು ನಿಯಮ ಉಲ್ಲಂಘನೆ ಮಾಡಿ ದಂಡವನ್ನು ಕಟ್ಟುತ್ತಾರೆ.

ತ್ರಿಬಲ್ ರೈಡಿಂಗ್ ಮಾಡುವ ಸಂದರ್ಭದಲ್ಲಿ ರಸ್ತೆ ಅಪಘಾತಗಳು ನಡೆದು ಗಾಯಗೊಂಡ ಪ್ರಕರಣಗಳು ನಡೆದಿವೆ. ಆದರೆ ತ್ರಿಬಲ್ ರೈಡಿಂಗ್ ಮಾಡುವುದನ್ನು ಜನರು ಬಿಟ್ಟಿಲ್ಲ. ಅದರಲ್ಲೂ ಮಕ್ಕಳನ್ನು ಶಾಲೆಗೆ ಬಿಡಲು ಹೆಲ್ಮೆಟ್ ಧರಿಸದೇ ಬೈಕ್ನಲ್ಲಿ ಮೂವರು ಹೋಗುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ತ್ರಿಬಲ್ ರೈಡಿಂಗ್ ಮಾಡುವುದು ಸಂಚಾರ ನಿಯಮ ಉಲ್ಲಂಘನೆಯಾಗಿದೆ. ಅಲ್ಲದೇ ತ್ರಿಬಲ್ ರೈಡಿಂಗ್ ಮಾಡುವಾಗ ಮೂವರು ಸಹ ಹೆಲ್ಮೆಟ್ ಧರಿಸಿರುವುದಿಲ್ಲ. ಆದ್ದರಿಂದ ವಿಶೇಷ ಕಾರ್ಯಾಚರಣೆ ನಡೆಸುವಾಗ ಸಿಕ್ಕಿಬಿದ್ದರೆ ಹೆಚ್ಚಿನ ದಂಡವನ್ನು ಪಾವತಿ ಮಾಡಬೇಕಾಗುತ್ತದೆ. ಕ್ಯಾಮರಾಗಳ ಸಹಾಯದಿಂದ ತ್ರಿಬಲ್ ರೈಡಿಂಗ್ ಪತ್ತೆ ಹಚ್ಚಿ ವಾಹನ ಮಾಲೀಕರಿಗೆ ದಂಡದ ನೋಟಿಸ್ ನೀಡುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ.
ಅಂಕಿ ಸಂಖ್ಯೆಗಳ ವಿವರ: ಸಂಚಾರಿ ಪೊಲೀಸರ ಮಾಹಿತಿ ಪ್ರಕಾರ ಬೆಂಗಳೂರು ನಗರದಲ್ಲಿ ಕಳೆದ ಮೂರು ವರ್ಷಗಳಿಂದ ತ್ರಿಬಲ್ ರೈಡಿಂಗ್ ಕೇಸುಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿ ವರ್ಷ 10ಕ್ಕೂ ಅಧಿಕ ಹೊಸ ಪ್ರಕರಣಗಳು ಸೇರ್ಪಡೆಯಾಗುತ್ತಿವೆ.
ನಗರದಲ್ಲಿ 2022ರಲ್ಲಿ 1,62,617 ತ್ರಿಬಲ್ ರೈಡಿಂಗ್ ಕೇಸುಗಳು ದಾಖಲಾಗಿದ್ದವು. 2023ರಲ್ಲಿ ಈ ಪ್ರಕರಣಗಳ ಸಂಖ್ಯೆ 1,17,738 ಆಗಿತ್ತು. ಈ ವರ್ಷ 1,49,694 ಪ್ರಕರಣಗಳು ದಾಖಲಾಗಿದ್ದು, ಸಂಚಾರ ನಿಯಮ ಉಲ್ಲಂಘನೆ ಮಾಡಿದ ಸವಾರರಿಂದ 4,97,6,400 ರೂ. ದಂಡವನ್ನು ಸಂಗ್ರಹ ಮಾಡಲಾಗಿದೆ.
ತ್ರಿಬಲ್ ರೈಡಿಂಗ್ ಪ್ರಕರಣಗಳಿಂದ ರಸ್ತೆ ಅಪಘಾತಗಳು ಸಂಭವಿಸಿ ಗಾಯಗೊಳ್ಳುವುದು, ಜೀವ ಹಾನಿ ಸಹ ಸಂಭವಿಸುತ್ತಿದೆ. ಈ ಕುರಿತು ಸಂಚಾರಿ ಪೊಲೀಸರು ಅರಿವು ಮೂಡಿಸುತ್ತಲೇ ಇದ್ದಾರೆ. ಆದರೆ ಜನರು ಮಾತ್ರ ಈ ನಿಯಮಗಳನ್ನು ಗಾಳಿಗೆ ತೂರಿ, ತ್ರಿಬಲ್ ರೈಡಿಂಗ್ ಮಾಡುತ್ತಾರೆ.
ಕೆಲವೇ ದಿನಗಳ ಹಿಂದೆ ತ್ರಿಬಲ್ ರೈಡಿಂಗ್ನಿಂದ ಸಂಭವಿಸಿದ ರಸ್ತೆ ಅಪಘಾತದಲ್ಲಿ 19 ವರ್ಷದ ಬಿಬಿಎ ವಿದ್ಯಾರ್ಥಿ ಬಿಜಿಎಸ್ ಫ್ಲೈ ಓವರ್ ಮೇಲೆ ಸಾವನ್ನಪ್ಪಿದ್ದ. ಈ ಅಪಘಾತದಲ್ಲಿ ಮೂವರು ಸಹ ಹೆಲ್ಮೆಟ್ ಧರಿಸಿರಲಿಲ್ಲ. ಅಪಘಾತದಲ್ಲಿ ಒಬ್ಬ ಮೃತಪಟ್ಟರೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ರಾತ್ರಿ 8.30ರ ಸುಮಾರಿಗೆ ಈ ಅಪಘಾತವಾಗಿತ್ತು.
ಪೊಲೀಸರು ತ್ರಿಬಲ್ ರೈಡಿಂಗ್ ಪ್ರಕರಣಗಳ ಕುರಿತು ಮಾತನಾಡಿದ್ದು, ಎಐನಿಂದಾಗಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುವುದು ಸುಲಭವಾಗಿದೆ. ಈಗಾಗಲೇ ನಗರದಲ್ಲಿ ಕ್ಯಾಮರಾಗಳ ಮೂಲಕ ಇಂತಹ ಕೇಸುಗಳನ್ನು ಪತ್ತೆ ಹಚ್ಚಿ, ಫೋಟೋಗಳ ಸಮೇತ ಸವಾರರ ಮನೆಗೆ ನೋಟಿಸ್ ಕಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications