Year Ender 2024: 2024ರಲ್ಲಿ ಸ್ವಿಗ್ಗಿಯಲ್ಲಿ ಅತೀ ಹೆಚ್ಚು ಆರ್ಡರ್ ಮಾಡಿದ ಖಾದ್ಯಗಳು
ಮೊನ್ನೆ ಮೊನ್ನೆಯಷ್ಟೇ 2024ನ್ನು ಸ್ವಾಗತಿಸಿದ್ದ ನಾವು ಆಗಲೇ 12 ತಿಂಗಳನ್ನು ಸಂಪೂರ್ಣವಾಗಿ ಮುಗಿಸಿ 2025ನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದೇವೆ. ಕಣ್ಣು ಮುಚ್ಚಿ ತೆಗೆಯುವಷ್ಟರಲ್ಲಿ ಒಂದು ವರ್ಷವೇ ಕಳೆದು ಹೋಗಿದ್ದು, ಹೊಸ ವರ್ಷಾರಂಭಕ್ಕೆ ಇನ್ನೇನು ಒಂದೇ ದಿನ ಬಾಕಿ ಇದೆ. 2025 ಎಲ್ಲರ ಜೀವನದಲ್ಲಿ ಹೊಸತನ ತರಲಿ ಎನ್ನುವ ಆಶಯದೊಂದಿಗೆ 2024ರ ಕೆಲವು ಕುತೂಹಲಕರವಾದ ಮಾಹಿತಿಗಳು ಇಲ್ಲಿದೆ.
ಇತ್ತೀಚಿಗೆ ಎಲ್ಲವೂ ಆನ್ಲೈನ್ ಆರ್ಡರ್ ಮಯ. ಅದರಲ್ಲೂ ಹೆಚ್ಚಾಗಿ ಆಹಾರಗಳು. ಕೊರೊನಾ ನಂತರ ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆನ್ಲೈನ್ ಆರ್ಡರ್ಗಳಿಂದ ಝೋಮೇಟೋ, ಸ್ವಿಗ್ಗಿ ಸೇರಿದಂತೆ ಇತರ ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆಗಳು ಯಶಸ್ವಿಯಾಗಿ ಸಾಗುತ್ತಿದೆ. ಈ ವರ್ಷ ಅಂದರೆ 2024ರಲ್ಲಿ ತಮ್ಮ ಆ್ಯಪ್ ಮೂಲಕ ಜನರು ಅತಿ ಹೆಚ್ಚು ಆರ್ಡರ್ ಮಾಡಿದ ಆಹಾರ ಪದಾರ್ಥಗಳ ವರದಿಯನ್ನು ಸ್ವಿಗ್ಗಿ ಬಿಡುಗಡೆ ಮಾಡಿದೆ.

2024ರ ಸ್ವಿಗ್ಗಿ ವರದಿಯ ಪ್ರಕಾರ, ಬಿರಿಯಾನಿ ಹಾಗೂ ದೋಸೆ ಜನರು ಅತಿ ಹೆಚ್ಚು ಆರ್ಡರ್ ಮಾಡಿದ ಖಾದ್ಯ ಎಂದು ತಿಳಿದು ಬಂದಿದೆ. ಬಿರಿಯಾನಿ ಸತತ ಒಂಬತ್ತು ವರ್ಷಗಳಿಂದ ಮೊದಲ ಸ್ಥಾನದಲ್ಲಿದ್ದು, ಈ ವರ್ಷ 83 ಮಿಲಿಯನ್ ಆರ್ಡರ್ಗಳೊಂದಿಗೆ ಬಿರಿಯಾನಿ ತನ್ನ ಅಗ್ರಸ್ಥಾನ ಉಳಿಸಿಕೊಂಡಿದೆ. ವರ್ಷಕ್ಕೆ 83 ಮಿಲಿಯನ್ ಆರ್ಡರ್ ಅಂದರೆ ಪ್ರತಿ ಸೆಕೆಂಡಿಗೆ ಸುಮಾರು ಎರಡು ಬಿರಿಯಾನಿ ಆರ್ಡರ್ಗಳನ್ನು ಸ್ವಿಗ್ಗಿ ಪಡೆದುಕೊಂಡಿದೆ.
ದಕ್ಷಿಣ ಭಾರತದ ಜನಪ್ರಿಯ ಖಾದ್ಯ ದೋಸೆ 2024ರ ಸ್ವಿಗ್ಗಿ ವರದಿಯ ಎರಡನೇ ಸ್ಥಾನದಲ್ಲಿದೆ. ಈ ವರ್ಷ 23 ಮಿಲಿಯನ್ ದೋಸೆ ಆರ್ಡರ್ಗಳನ್ನು ಸ್ವಿಗ್ಗಿ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಮಾತ್ರವೇ 2.5 ಮಿಲಿಯನ್ ಮಸಾಲೆ ದೋಸೆ ಆರ್ಡರ್ ಆಗಿರುವುದು ವರದಿಯಲ್ಲಿ ತಿಳಿದು ಬಂದಿದೆ. ಇಡ್ಲಿ ಕೂಡ ಅಗ್ರಸ್ಥಾನದಲ್ಲೇ ಇದ್ದು, ದೇಶಾದ್ಯಂತ 7.8 ಮಿಲಿಯನ್ ಆರ್ಡರ್ಗಳನ್ನು ಹೊಂದಿದೆ.

ಇನ್ನು ಈ ವರ್ಷ ಚಿಕನ್ ರೋಲ್ 2.48 ಮಿಲಿಯನ್, ಚಿಕನ್ ಮೊಮೊಸ್ 1.63 ಮಿಲಿಯನ್, ಚಿಕನ್ ಬರ್ಗರ್ಗಳು 1.84 ಮಿಲಿಯನ್ ಆರ್ಡರ್ಗಳನ್ನು ಸ್ವಿಗ್ಗಿ ಪಡೆದುಕೊಂಡಿದೆ. ದೆಹಲಿಯಲ್ಲಿ ಛೋಲೆ ಭಟೂರೆ, ಪಂಜಾಬ್ನಲ್ಲಿ ಪರೋಟ, ಕೋಲ್ಕತ್ತಾದಲ್ಲಿ ಕಚೋರಿಗಳನ್ನು ಸ್ವಿಗ್ಗಿ ಆ್ಯಪ್ ಮೂಲಕ ಹೆಚ್ಚು ಆರ್ಡರ್ ಮಾಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications