ಯೋಗಸಿರಿ 'ಯೋಗಶ್ರೀ'ಯ ವನಿತಕ್ಕಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ!
ಪ್ರಶಸ್ತಿಯೊಂದು ಅರ್ಹರಿಗೆ ಸಂದಾಗ ಅದರ ಮೌಲ್ಯ, ಗೌರವ ಹೆಚ್ಚುತ್ತದೆ. ಯೋಗಕ್ಕಾಗಿ, ಸಾಮಾಜಿಕ ಕಾರ್ಯಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡ ವನಿತಕ್ಕಾ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪುರಸ್ಕಾರ ಸಂದಿರುವುದು ನಿಜಕ್ಕೂ ಸಂತಸದ ವಿಚಾರ.
ಬೆಂಗಳೂರಿನ ಗಿರಿನಗರದ 'ಯೋಗಶ್ರೀ' ಹಾಗೂ ಪಂಚವಟಿ ಯೋಗ ಕೇಂದ್ರದ ನಿರ್ದೇಶಕಿ, ಮಾರ್ಗದರ್ಶಕರಾಗಿರುವ ಸೋದರಿ ವನಿತಾ ದಿನನಿತ್ಯ ಸರಾಸರಿ ೮೦೦ ಮಂದಿ ಎಲ್ಲ ವಯಸ್ಸಿನ ಯೋಗಾಭ್ಯಾಸಿಗಳಿಗೆ ಜಾತಿ ಮತ ಪಂಥ ಭೇದವಿಲ್ಲದೆ ಯೋಗಾಭ್ಯಾಸ ನೀಡುತ್ತಿದ್ದಾರೆ. ಚರಿತ್ರೆ ಹಾಗೂ ಸಮಾಜ ಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ವನಿತಕ್ಕಾ ಶಿಶು ಶಿಕ್ಷಣ ತರಬೇತಿ ಹಾಗೂ ಮಕ್ಕಳ ಮನಶಾಸ್ತ್ರ ಅಧ್ಯಯನ ದಲ್ಲಿ ವಿಶೇಷ ಅನುಭವ ಹೊಂದಿದ್ದಾರೆ.
ಯೋಗಗುರು ಮಲ್ಲಾಡಿಹಳ್ಳಿ ಶ್ರೀ ರಾಘವೇಂದ್ರ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ನುರಿತ ಯೋಗಪಟುವಾಗಿ ರೂಪುಗೊಂಡ ವನಿತಕ್ಕಾ ನಂತರ ಅಜಿತಕುಮಾರ್, ಸ್ವಾಮಿ ಆತ್ಮಾನಂದಪುರಿ ಹಾಗೂ ಬಿ. ಕೆ. ಎಸ್. ಐಯ್ಯಂಗಾರ್ ಅವರಲ್ಲಿ ಯೋಗ ತರಬೇತಿ ಪಡೆದರು. ಯೋಗದ ಜತೆ ಜತೆಗೇ ಪ್ರಾಣ ಚಿಕಿತ್ಸೆ, ರೇಖೀ ಚಿಕಿತ್ಸೆ, ಪ್ರಕೃತಿ ಚಿಕಿತ್ಸೆ, ಹೋಮಿಯೋಪತಿ, ಮನೆಮದ್ದು ಮುಂತಾದ ವಿಷಯಗಳಲ್ಲಿ ಪರಿಣಿತಿ ಗಳಿಸಿದರು.

1985 ರಲ್ಲಿ ಮಾ. ಅಜಿತ್ ರಿಂದ ಪ್ರೇರಣೆ ಪಡೆದು ಹಿಂದೂ ಸೇವಾ ಪ್ರತಿಷ್ಠಾನ ದಲ್ಲಿ ತೊಡಗಿಸಿಕೊಂಡ ವನಿತಕ್ಕಾ ಸುಮಾರು 14 ವರ್ಷಗಳ ಕಾಲ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಯೋಗ ಹಾಗೂ ಮನೆಮದ್ದು ಶಿಬಿರಗಳನ್ನು ನಡೆಸಿದ್ದಾರೆ. ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಇವರಿಂದ ಯೋಗ ಹಾಗೂ ಮನೆಮದ್ದಿನ ಶಿಕ್ಷಣ ಪಡೆದಿದ್ದಾರೆ. ಸ್ವಂತ ಕೌಟುಂಬಿಕ ಜೀವನದ ಬಗ್ಗೆ ಯೋಚಿಸದೆ ಚಿಕ್ಕ ವಯಸ್ಸಿನಿಂದಲೂ ಕಳೆದ ೪೦ ವರ್ಷಗಳಿಂದ ಸೋದರಿ ವನಿತಾ ಸಾಮಾಜಿಕ ಹಾಗೂ ಯೋಗ ಕ್ಷೇತ್ರಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಇವರ ಯೋಗ ಹಾಗೂ ಮನೆ ಮದ್ದು ಶಿಕ್ಷಣ ದಿಂದ ಉಪಯೋಗ ಪಡೆದವರಲ್ಲಿ ಎಲ್ಲಾ ವರ್ಗದವರೂ, ಸ್ತ್ರೀ ಪುರುಷರೂ ಮಕ್ಕಳು, ವೃದ್ಧರೂ, ಮಾನಸಿಕ ಹಾಗೂ ದೈಹಿಕ ತೊಂದರೆ ಇರುವವರು, ಖೈದಿಗಳೂ ಇರುವುದು ವಿಶೇಷ.
ಇವರಿಂದ ತರಬೇತಿ ಪಡೆದ ಸಾವಿರಾರು ಮಂದಿ ಇಂದು ರಾಜ್ಯದ ಅನೇಕ ಊರುಗಳಲ್ಲಿ ಯೋಗ ಹಾಗೂ ಮನೆಮದ್ದು ಪರಿಣಿತರಾಗಿ ಶಿಕ್ಷಣ ನೀಡುತ್ತಾ ಲಕ್ಷಾಂತರ ಜನರ ಬಾಳಿಗೆ ಬೆಳಕಾಗುತ್ತಿದ್ದಾರೆ. ಸಾವಿರಾರು ಮಂದಿ ಯೋಗದ ಮೂಲಕ ಹೊಸ ಬದುಕು ಕಂಡುಕೊಂಡಿದ್ದಾರೆ. ತಮ್ಮಿಡೀ ಬದುಕನ್ನು ಸಮಾಜ ಹಾಗೂ ಯೋಗದ ಅಭಿವೃದ್ಧಿಗೆ ಮೀಸಲಾಗಿರಿಸಿರುವ ಸೋದರಿ ವನಿತಾ ತಮ್ಮೆಲ್ಲಾ ಶಿಷ್ಯ , ಅಭಿಮಾನಿ ಆಪ್ತರ ಪಾಲಿಗೆ 'ವನಿತಕ್ಕಾ' ಆಗಿ ಮಾರ್ಗದರ್ಶನ ಮಾಡುತ್ತಿದ್ದಾರೆ.

ಬೆಂಗಳೂರಿನ ಗಿರಿನಗರದ 'ಯೋಗಶ್ರೀ' ಹಾಗೂ ಪಂಚವಟಿ ಯೋಗ ಕೇಂದ್ರಗಳು ವನಿತಕ್ಕ ಅವರ ನಿಸ್ವಾರ್ಥ ಸೇವೆಯ ದೀಪಗಳಾಗಿ ಯೋಗ ಕ್ಷೇತ್ರದ ದೀವಿಗೆಗಳಾಗಿ ಸಮಾಜಕ್ಕೆ ಹೊಸ ದಾರಿ ತೋರುತ್ತಿವೆ. ತಮ್ಮ ಬದುಕನ್ನು ಯೋಗಕ್ಕೆ ಮುಡುಪಾಗಿಟ್ಟ, ಯೋಗದ ಮೂಲಕ ಇತರರ ಬದುಕು ಬದಲಿಸಿದ ವನಿತಕ್ಕಾ ಅವರಿಗೆ ಈ ಗೌರವ ಸಲ್ಲುತ್ತಿರುವುದು ನಿಜಕ್ಕೂ ಹೆಮ್ಮೆಯ, ಖುಷಿಯ ವಿಚಾರ. 2014 ರಲ್ಲಿ ನಮ್ಮ 'ಸಮಾಜ ಸೇವಕರ ಸಮಿತಿ'ಯ ಪರವಾಗಿ ಆಗಸ್ಟ್ 1 ರ ಸಮಾಜ ಸೇವಕರ ದಿನದಂದು ವನಿತಕ್ಕಾ ಅವರನ್ನು ಗೌರವಿಸುವ ಭಾಗ್ಯ ನಮ್ಮದಾಗಿತ್ತು. ವೈಯಕ್ತಿಕವಾಗಿ ಅವರ ಯೋಗ ತರಗತಿಯ ವಿದ್ಯಾರ್ಥಿಯಾಗಿರುವ ಹಾಗೂ ಹಲವು ವರ್ಷಗಳಿಂದ ಅವರ ಸಾಮಾಜಿಕ ಕಾರ್ಯವನ್ನು ಹತ್ತಿರದಿಂದ ಕಂಡಿರುವ ನನಗೆ ವನಿತಕ್ಕಾ ಅವರಿಗೆ ಈ ಗೌರವ ಸಲ್ಲುತ್ತಿರುವುದು ಬಹಳ ಸಂತಸ ತಂದಿದೆ. ಅಭಿನಂದನೆಗಳು ವನಿತಕ್ಕಾ.
ಹಾಗೆಯೇ ಯೋಗವನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಕಳೆದ ಹಲವು ದಶಕಗಳಿಂದ ನಿಸ್ವಾರ್ಥವಾಗಿ ಶ್ರಮಿಸುತ್ತಿರುವ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಸಂಸ್ಥೆಗೂ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಬಹಳ ಖುಷಿಯ ವಿಚಾರ. SPYSS ಅವರಿಗೂ ಅಭಿನಂದನೆಗಳು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications