Maha Kumbh Mela: ಮಹಾಕುಂಭ ಮೇಳದಲ್ಲಿ ಒಂದೇ ದಿನಕ್ಕೆ ₹7,000 ಸಂಪಾದಿಸಿದ ಯುಟ್ಯೂಬರ್
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವು ಕೋಟ್ಯಂತರ ಭಕ್ತರ ಆಗಮನಕ್ಕೆ ಸಾಕ್ಷಿಯಾಗಿದೆ. ಎಲ್ಲರೂ ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬರುತ್ತಿದ್ದರೆ, ಹಲವರು ತಮ್ಮದೇ ವ್ಯಾಪಾರಗಳ ಮೂಲಕ ಕೈತುಂಬಾ ಹಣ ಸಂಪಾದಿಸುವ ಮಾರ್ಗ ಕಂಡುಕೊಂಡಿದ್ದಾರೆ. ಯೂಟ್ಯೂಬರ್ವೊಬ್ಬ ಮಹಾಕುಂಭಮೇಳದಲ್ಲಿ ಒಂದು ದಿನದ ಮಟ್ಟಿಗೆ ಬಿಸಿನೆಸ್ ಶುರು ಮಾಡಿ, ಬರೋಬ್ಬರಿ ಸಾವಿರಾರು ರೂಪಾಯಿಗಳನ್ನು ಸಂಪಾದಿಸಿದ್ದಾನೆ.
ಹೌದು, ಇನ್ಸ್ಟಾಗ್ರಾಂನಲ್ಲಿ ಈ ವೀಡಿಯೊ ವೈರಲ್ ಆಗಿದೆ. ಈ ವಿಡಿಯೋ ಈಗಾಗಲೇ ಐದು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ಕೆಲವರು ತಿಂಗಳಿಡೀ ದುಡಿಯುವುದನ್ನು ಈತ ಒಂದೇ ದಿನ ಸಂಪಾದಿಸಿದ್ದಾನಲ್ಲ? ಭೇಷ್ ಎಂದಿದ್ದಾರೆ.ಈ ವಿಡಿಯೋ ಅನ್ನು ಇನ್ಸ್ಟಾಗ್ರಾಂನಲ್ಲಿ madcap_alive ಎನ್ನುವ ಅಕೌಂಟ್ನಲ್ಲಿ ಪೋಸ್ಟ್ ಮಾಡಲಾಗಿದೆ.

ಈ ವೈರಲ್ ವೀಡಿಯೊದಲ್ಲಿ ತೋರಿಸಿರುವಂತೆ ಯೂಟ್ಯೂಬರ್ ಒಂದು ಸಣ್ಣ ಚಹಾ ಅಂಗಡಿಯನ್ನು ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ರಾಜ್ನಲ್ಲಿ ತೆರೆದಿದ್ದಾನೆ. ಚಹಾ ಮಾಡಿಕೊಂಡು ಒಂದು ಫ್ಲಾಸ್ಕ್ ತೆಗೆದುಕೊಂಡ ಮಧ್ಯಾಹ್ನ 2 ಗಂಟೆವರೆಗೆ ಬಿಡುವಿಲ್ಲದೆ ಮಾರಾಟ ಮಾಡಿದ್ದಾನೆ.
ಮಧ್ಯಾಹ್ನದ ವೇಳೆಗೆ ಬಿಸಿಲು ಹೆಚ್ಚಿದ್ದರಿಂದ ಗ್ರಾಹಕರ ಸಂಖ್ಯೆ ಕೂಡ ತಗ್ಗಿತ್ತು. ಈ ವೇಳೆ ಯೂಟ್ಯೂಬರ್ ತನ್ನ ಶಾಪ್ ಬಳಿಗೆ ಬಂದು ವಿಶ್ರಾಂತಿ ಪಡೆಯುತ್ತಾನೆ. ಬಳಿಕ ನೀರಿನ ಬಾಟಲ್ಗಳನ್ನು ಕೂಡ ಈತ ಮಾರಾಟ ಮಾಡಿದ್ದಾನೆ. ಒಟ್ಟಾರೆ ಈತನ ವ್ಯಾಪಾರ ಜೋರಾಗಿಯೇ ನಡೆದಿದೆ. ಬಳಿಕ ಸಂಜೆಯಾಗುತ್ತಿದ್ದಂತೆ ಮತ್ತೆ ಚಹಾ ಮಾಡಿಕೊಂಡು ಮತ್ತೆ ಅಲ್ಲಿನ ಪ್ರದೇಶಗಳಲ್ಲಿ ಮಾರಾಟ ಮಾಡಿದ್ದಾನೆ.
ಮಹಾಕುಂಭ ಮೇಳಕ್ಕೆ ಬಂದಿದ್ದವರು ನಾ ಮುಂದು ತಾ ಮುಂದು ಎನ್ನುವಂತೆ ಚಹಾ ಮತ್ತು ನೀರಿನ ಬಾಟಲಿಗಳನ್ನು ಖರೀದಿಸಿದ್ದಾರೆ. ದಿನವಿಡೀ ಈತ ವ್ಯಾಪಾರದ ಮೂಲಕ 7000 ರೂಪಾಯಿ ಸಂಪಾದಿಸಿದ್ದಾನೆ. ಬಂಡವಾಳವೆಲ್ಲ ಹೋಗಿ 5000 ರೂಪಾಯಿ ಲಾಭ ಗಳಿಸಿದ್ದಾನೆ. ಈ ವಿಡಿಯೋ ವೈರಲ್ ಆಗಿದ್ದು, ಸ್ವಲ್ಪ ದಿನದ ಮಟ್ಟಿಗೆ ಊರು ಬಿಟ್ಟು ಪ್ರಯಾಗ್ರಾಜ್ಗೆ ಹೋಗಿ ನಾವೇಕೆ ಹಣ ಸಂಪಾದಿಸಬಾರದು? ಎಂದು ಪ್ಲ್ಯಾನ್ ಹಾಕುತ್ತಿದ್ದಾರೆ.
ಈ ಹಿಂದೆ ವ್ಯಕ್ತಿಯೊಬ್ಬ ಭಕ್ತರು ಸಂಗಮದಲ್ಲಿ ಹಾಕುವ ನಾಣ್ಯಗಳನ್ನು ಮ್ಯಾಗ್ನೆಟ್ ಸಹಾಯದಿಂದ ಸಂಗ್ರಹಿಸಿ ದಿನಕ್ಕೆ 5000 ರೂಪಾಯಿ ಸಂಪಾದನೆ ಮಾಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿತ್ತು. ಹೀಗೆ ಮಹಾಕುಂಭ ಮೇಳವು ಹಲವರ ಬದುಕಿಗೆ ಮಾರ್ಗಗಳನ್ನು ತೋರಿದೆ. ಇಲ್ಲಿ ಚಳಿ ಹೆಚ್ಚಿರುವ ಕಾರಣ ಚಹಾ ಅಂಗಡಿಗಳಲ್ಲೂ ಕೂಡ ಭಾರಿ ವಹಿವಾಟು ನಡೆಯುತ್ತಿದೆ.
ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ವರದಿಯ ಪ್ರಕಾರ ಉತ್ತರ ಪ್ರದೇಶವು ಈ ಮಹಾಕುಂಭ ಮೇಳದಿಂದ 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಆದಾಯವನ್ನು ಸಂಗ್ರಹಿಸಲಿದೆ. 40 ಕೋಟಿ ಪ್ರವಾಸಿಗರು ಸರಾಸರಿ ಕನಿಷ್ಠ 5,000 ರೂಪಾಯಿ ಖರ್ಚು ಮಾಡಿದರೂ ಭಾರಿ ಮೊತ್ತದ ಆದಾಯ ಬರಲಿದೆ ಎಂದು ಅಂದಾಜಿಸಿದೆ. ಇದೇ ಮಹಾಶಿವರಾತ್ರಿಯಂದು ಮಹಾಕುಂಭ ಮೇಳವು ಸಂಪನ್ನಗೊಳ್ಳಲಿದೆ. ಈ ಹಿನ್ನೆಲೆ ಭಕ್ತರ ಸಂಖ್ಯೆ ಕೂಡ ಅತ್ಯಧಿಕವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications