ಎಲೆಕ್ಷನ್ ಗೆ ಮುನ್ನವೇ ಅಪ್ಪಳಿಸಲಿದೆ ದೇವೇಗೌಡರ 'ಅಗ್ನಿ ದಿವ್ಯ'
ದೇವೇಗೌಡರ ಆತ್ಮಚರಿತ್ರೆಗೆ 'ಅಗ್ನಿ ದಿವ್ಯ' ಎಂದು ಹೆಸರಿಡಲು ನಿರ್ಧರಿಸಿದ್ದೀವಿ. ಈ ಫೆಬ್ರವರಿಯ ಮೊದಲ ವಾರದಲ್ಲಿ ಬಿಡುಗಡೆ ಮಾಡಬೇಕು. ಎರಡನೇ ವಾರದೊಳಗೆ ಎಲ್ಲರಿಗೂ ಅದು ತಲುಪಬೇಕು ಎಂದರು ಕಡೂರು ಶಾಸಕ- ದೇವೇಗೌಡರ ಆತ್ಮಚರಿತೆಯಲ್ಲಿ ಸಾರ್ವಜನಿಕ ಬದುಕಿನ ಭಾಗಕ್ಕೆ ಅಕ್ಷರ ರೂಪ ನೀಡಿರುವ ವೈಎಸ್ ವಿ ದತ್ತ.
ದೇವೇಗೌಡರ ಆತ್ಮಚರಿತ್ರೆಯ ಬಗ್ಗೆ ವಿವರಗಳನ್ನು ಕಲೆ ಹಾಕುವ ದೃಷ್ಟಿಯಿಂದ ಒನ್ಇಂಡಿಯಾ ಕನ್ನಡವು ವೈಎಸ್ ವಿ ದತ್ತ ಅವರ ಸಂದರ್ಶನ ಮಾಡಿದೆ. ಆತ್ಮಚರಿತ್ರೆಯ ಮುಖ್ಯಾಂಶಗಳೇನು? ವಿವರಗಳನ್ನು ಅಕ್ಷರಕ್ಕೆ ಇಳಿಸಿದವರು ದತ್ತ ಒಬ್ಬರೇನಾ? ಪ್ರಕಾಶಕರು ಯಾರು, ಎಷ್ಟು ಪುಟಗಳಾಗಿವೆ ಇತ್ಯಾದಿ ಪ್ರಶ್ನೆಗಳನ್ನು ಕೇಳಲಾಯಿತು.
ಎಲ್ಲಕ್ಕೂ ತುಂಬ ಸಮಾಧಾನದಿಂದ ದತ್ತ ಅವರು ಉತ್ತರಿಸಿದ್ದಾರೆ. ಆತ್ಮಚರಿತ್ರೆಯ ಬಗ್ಗೆ ತುಂಬ ಮುಖ್ಯ ಎನಿಸಿದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಭಾಗವೊಂದರ ಮಾಹಿತಿಯನ್ನು ಕೂಡ ಹೇಳಿದ್ದಾರೆ. ಅದನ್ನು ಪ್ರತ್ಯೇಕವಾದ ಮತ್ತೊಂದು ಲೇಖನದಲ್ಲಿ ತಿಳಿಸಲಾಗಿದೆ. ಸದ್ಯಕ್ಕೆ ಆತ್ಮಚರಿತ್ರೆಯ ಪ್ರಶ್ನೋತ್ತರಗಳನ್ನು ಓದಿಕೊಂಡು ಬಿಡಿ.

ಪ್ರಶ್ನೆ: ದೇವೇಗೌಡರ ಆತ್ಮಚರಿತ್ರೆ ಬಗ್ಗೆ ತಿಳಿಸಿ
ವೈಎಸ್ ವಿ ದತ್ತ: ದೇವೇಗೌಡರ ಸಾರ್ವಜನಿಕ ಬದುಕಿನ ಬಗ್ಗೆ ಅವರು ತಿಳಿಸಿದ ಘಟನೆ, ಸಂಗತಿಗಳಿಗೆ ಅಕ್ಷರ ರೂಪ ನೀಡುವ ಕೆಲಸ ಮಾಡಿದ್ದೀನಿ. ಅರವತ್ತು ವರ್ಷಗಳ ಸುದೀರ್ಘ ಸಾರ್ವಜನಿಕ ಬದುಕಿನ ನೆನಪು-ಘಟನೆಗಳನ್ನು ಅವರು ಹೆಕ್ಕಿ-ಹೆಕ್ಕಿ ಹೇಳಿದ್ದಾರೆ. ಇನ್ನು ದೇವೇಗೌಡರ ಬಾಲ್ಯ-ವಿದ್ಯಾಭ್ಯಾಸ- ಕೌಟುಂಬಿಕ ಜೀವನದ ಬಗ್ಗೆ ಗೌಡರ ಮಗಳು ಡಾ.ಶೈಲಜಾ ಅಕ್ಷರ ರೂಪ ನೀಡಿದ್ದಾರೆ.

ಪ್ರಶ್ನೆ: ಈ ವರೆಗೆ ಎಷ್ಟು ಪುಟ ಆಗಿದೆ? ಪುಸ್ತಕದ ಮುದ್ರಕರು ಯಾರು ಎಂಬುದು ಅಂತಿಮವಾಗಿದೆಯಾ?
ವೈಎಸ್ ವಿ ದತ್ತ: ಪುಸ್ತಕ ಪೂರ್ತಿ ಆಗಿದೆ. ಒಟ್ಟು ಸೇರಿ ಐನೂರು ಪುಟಗಳಾಗಬಹುದು. ಆದರೆ ಮುದ್ರಕರು ಇನ್ನೂ ಅಂತಿಮವಾಗಿಲ್ಲ. ಯಾರಾದರೂ ಪಬ್ಲಿಷ್ ಮಾಡುವುದಕ್ಕೆ ಬಂದರೆ ಯೋಚನೆ ಮಾಡ್ತೀವಿ. ಆದರೆ ದೇವೇಗೌಡರಿಗೆ ಅದನ್ನು ತಾವೇ ಸ್ವತಃ ಪಬ್ಲಿಷ್ ಮಾಡಿಸಬೇಕು ಅಂತಿದೆ. ಪಬ್ಲಿಷರ್ಸ್ ಮುಂದೆ ಬಂದರೆ ಅವರಿಗೇ ಕೊಡ್ತೀವಿ. ಆದರೆ ಯಾರು ಬರಲಿ, ಬಾರದಿರಲಿ. ಅದನ್ನು ಜನರಿಗೆ ಮುಟ್ಟಿಸುತ್ತೇವೆ.

ಪ್ರಶ್ನೆ: ಸದ್ಯಕ್ಕೆ ಆತ್ಮಚರಿತ್ರೆಯ ಕೆಲಸ ಯಾವ ಹಂತದಲ್ಲಿದೆ?
ವೈಎಸ್ ವಿ ದತ್ತ: ಅಗ್ನಿದಿವ್ಯ ಎಂಬ ಹೆಸರಿಟ್ಟಿದ್ದೀವಿ. 1933ರಲ್ಲಿ ದೇವೇಗೌಡರು ಹುಟ್ಟಿದ್ದು. 1957ರಲ್ಲಿ ಸಾರ್ವಜನಿಕ ಜೀವನಕ್ಕೆ ಬಂದರು. ಅಲ್ಲಿಂದ 2013ರವರೆಗೆ ಅವರ ಸಾರ್ವಜನಿಕ ಬದುಕು, ಏಳು- ಬೀಳು ಎಲ್ಲವೂ ದಾಖಲಾಗಿದೆ.

ಪ್ರಶ್ನೆ: ಆತ್ಮಚರಿತ್ರೆಯಲ್ಲಿನ ಪ್ರಮುಖ ವಿಚಾರ, ಘಟನೆ ಹೇಳುವುದಕ್ಕೆ ಸಾಧ್ಯವಾ?
ವೈಎಸ್ ವಿ ದತ್ತ: ನೂರಾರು- ಸಾವಿರಾರು ಘಟನೆಗಳಿವೆ. ಒಂದಕ್ಕೊಂದು ತಳಕು ಹಾಕಿಕೊಂಡು, ಮತ್ತೊಂದರಲ್ಲಿ ಹಾಸುಹೊಕ್ಕಾಗಿದೆ. ಹಲವು ಘಟನೆಗಳು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿವೆ. ದೇವೇಗೌಡರಿಗೆ ದೇವರಲ್ಲಿ ಇರುವ ನಂಬಿಕೆ, ಜ್ಯೋತಿಷ್ಯದ ಬಗೆಗಿನ ನಂಬಿಕೆ, ಅವರಿಗೆ ಇಷ್ಟು ಹಠ ಏಕೆ? ಆ ಗುಣ ಅವರಲ್ಲಿ ಕಾಣಿಸಿಕೊಂಡಿದ್ದು ಯಾವಾಗ?
ದೇವೇಗೌಡರು- ರಾಮಕೃಷ್ಣ ಹೆಗಡೆ ಮಧ್ಯದ ವಿಚಾರ, ಸಿದ್ದರಾಮಯ್ಯ ಅವರನ್ನು ಮುಂಚೂಣಿಗೆ ತಂದಿದ್ದು, ಕುಮಾರಸ್ವಾಮಿ ಅವರು ಬಿಜೆಪಿ ಜತೆಗೆ ಸೇರಿ ಸರಕಾರ ರಚನೆ ಮಾಡಿದಾಗ ಮರಣಶಯ್ಯೆ ತಲುಪಿದ್ದು, ಆ ನಂತರ ಜೆಡಿಎಸ್- ಬಿಜೆಪಿ ಮೈತ್ರಿ ಸರಕಾರಕ್ಕೆ ಮಾರ್ಗದರ್ಶನ ಮಾಡಿದ್ದು...ಒಟ್ಟಾರೆ ರಾಜಕಾರಣ ಅಭ್ಯಾಸ ಮಾಡುವವರಿಗೆ, ಕುತೂಹಲಿಗಳಿಗೆ, ಇತಿಹಾಸ ತಜ್ಞರಿಗೆ ಎಲ್ಲರಿಗೂ ಇದೊಂದು ಪಠ್ಯಪುಸ್ತಕದಂತೆ ಆಗುತ್ತದೆ.

ಪ್ರಶ್ನೆ: ಆತ್ಮಚರಿತ್ರೆಗೆ ಅಕ್ಷರ ರೂಪ ನೀಡುತ್ತಾ ನಿಮ್ಮ ಅನುಭವ ಹೇಗಿತ್ತು?
ವೈಎಸ್ ವಿ ದತ್ತ: ದೇವೇಗೌಡರು ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಒಟ್ಟಾರೆಯಾಗಿ ಅಧಿಕಾರ ನಡೆಸಿರುವ ಕಾಲ ಐದು ವರ್ಷವೂ ಮುಟ್ಟಲ್ಲ. ಅವರದೇನಿದ್ದರೂ ಹೋರಾಟದ ಬದುಕು. ಜನರು ಹಾಗೂ ಕಾಲ ಪರೀಕ್ಷೆ ಎಂಬ ಬೆಂಕಿಯಲ್ಲಿ ಎದ್ದು ಬಂದ ವ್ಯಕ್ತಿ ಅವರು. ಆ ಕಾರಣಕ್ಕೆ ಅಗ್ನಿ ದಿವ್ಯ ಎಂಬ ಹೆಸರನ್ನು ಇಟ್ಟಿದ್ದೀವಿ.

ಪ್ರಶ್ನೆ: ದೇವೇಗೌಡರ ಮೇಲೆ ಈಶ್ವರನ ಅನುಗ್ರಹ ತುಂಬ ಹೆಚ್ಚು ಎಂಬ ಮಾತಿದೆಯಲ್ಲಾ?
ವೈಎಸ್ ವಿ ದತ್ತ: ದೇವೇಗೌಡರ ತಂದೆ ಈಶ್ವರನ ಆರಾಧಕರು. ಅವರ ಇಡೀ ಕುಟುಂಬ ಶಿವನ ಆರಾಧಕರು. ದೇವೇಗೌಡರು ಪಂಚೆ ಕಟ್ಟಿ, ಹೆಗಲ ಮೇಲೆ ಟವೆಲ್ ಹಾಕಿಕೊಂಡು ಪಾದಯಾತ್ರೆ ಹೊರಟರೆಂದರೆ ಅದು ಶಿವ ತಾಂಡವವೇ. ಅವರ ಹಠ, ಸಿಟ್ಟು, ಆವೇಶ ಎಲ್ಲವೂ ಶಿವನನ್ನು ನೆನಪಿಸುತ್ತವೆ.

ಪ್ರಶ್ನೆ: ಆತ್ಮಚರಿತ್ರೆಯ ಮುಖ್ಯಭಾಗ ಯಾವುದು ಅಂತ ಹೇಳಬಹುದಾ?
ವೈಎಸ್ ವಿ ದತ್ತ: ಒಟ್ಟು ಮೂರು ಭಾಗ ಇದೆ. ಆ ಪೈಕಿ ದೇವೇಗೌಡರು ಬರೆದ ಪತ್ರಗಳು, ಹೊರಡಿಸಿದ ಆದೇಶ ಮತ್ತಿತರ ವಿವರಗಳ ಸವಿಸ್ತಾರವಾದ ಭಾಗ ಇದೆ. ಯಾರೂ ಅವರ ಬಗ್ಗೆ ಆರೋಪ ಮಾಡಬಾರದು. ಸಾಕ್ಷಿ ಇಲ್ಲದೆ ಗೌಡರು ಏನೋ ಬರೆದರು ಎಂದು ದೂರಬಾರದು. ಆ ಕಾರಣಕ್ಕೆ ಸಾಕ್ಷ್ಯ ಸಹಿತ ಬರೆಯಲಾಗಿದೆ.

ಪ್ರಶ್ನೆ: ನೀವು ಆತ್ಮಚರಿತ್ರೆ ಶುರು ಮಾಡಿದ್ದು ಹಾಗೂ ಪೂರ್ಣಗೊಂಡಿದ್ದು ಯಾವಾಗ?
ವೈಎಸ್ ವಿ ದತ್ತ: ಒಂದೂವರೆ ವರ್ಷದ ಹಿಂದೆ ಈ ಬಗ್ಗೆ ಹೇಳಿದರು. ನಾನು ಬರೆಯಲು ಆರಂಭಿಸಿದ್ದು ಆಗಸ್ಟ್ 2017ರಲ್ಲಿ. ಪೂರ್ತಿ ಆಗಿದ್ದು ಡಿಸೆಂಬರ್ 2017ರಲ್ಲಿ. ಅಂಥ ಮಹನೀಯರ ಆತ್ಮಚರಿತ್ರೆಗೆ ಅಕ್ಷರ ರೂಪ ನೀಡುವ ಅವಕಾಶ ಸಿಕ್ಕಿದ್ದು ನನ್ನ ಸುಯೋಗ. ಅವರ ಅದ್ಭುತವಾದ ನೆನಪಿನ ಶಕ್ತಿ, ನಲವತ್ತು ವರ್ಷಗಳ ನಮ್ಮಿಬ್ಬರ ಒಡನಾಟ ಎಲ್ಲವೂ ಸಹಾಯಕ್ಕೆ ಬಂದಿದೆ.

ಪ್ರಶ್ನೆ: ಕರ್ನಾಟಕ ವಿಧಾನಸಭೆ ಎಲೆಕ್ಷನ್ ಗೂ ಮುನ್ನವೇ ಬಿಡುಗಡೆ ಮಾಡುವ ಉದ್ದೇಶ ಇದೆಯಾ?
ವೈಎಸ್ ವಿ ದತ್ತ: ಶತಾಯಗತಾಯ ಫೆಬ್ರವರಿ ಮೊದಲ ವಾರದಲ್ಲಿ ಬಿಡುಗಡೆ ಮಾಡುವುದು ನಮ್ಮ ಉದ್ದೇಶ. ಈ ಚುನಾವಣೆಗೆ ಮುನ್ನವೇ ಜನರಿಗೆ ತಲುಪಿಸಬೇಕು. ನಾವು ರಾಜಕೀಯವಾಗಿ ತುಂಬ ಸಂಕೀರ್ಣ ಕಾಲಘಟ್ಟದಲ್ಲಿ ಇದ್ದೀವಿ. ದೇವೇಗೌಡರ ಹೋರಾಟ, ರಾಜ್ಯದ ಬಗೆಗಿನ ಪ್ರೀತಿ ಜನರಿಗೆ ತಿಳಿಯಬೇಕು. ನೂರಕ್ಕೆ ನೂರು ಫೆಬ್ರವರಿಯಲ್ಲಿ ಬಿಡುಗಡೆ ಮಾಡೇ ಮಾಡ್ತೀವಿ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications