ಹದಿನೆಂಟೂ ಸಮಸ್ತರ ಅರಕಲಗೂಡು ದಸರಾ

*ಸಿ.ಜಯಕುಮಾರ್, ಅರಕಲಗೂಡು
ಕಳೆದ 10ವರ್ಷಗಳ ಹಿಂದೆ ತಾಲ್ಲೂಕಿನ ಪಂಚ ಮಠಾಧೀಶರುಗಳು, ಕ್ರೈಸ್ತ,ಮುಸಲ್ಮಾನ ಧರ್ಮಗುರುಗಳು ಒಟ್ಟಾಗಿ ಸೇರಿ ಚಿಂತಿಸಿ ಪ್ರಥಮ ಬಾರಿಗೆ ಸಾರ್ವಜನಿಕ ದಸರಾ ಉತ್ಸಕ್ಕೆ ಇಂಬುಕೊಟ್ಟರು. ತಾಲೂಕಿನಾದ್ಯಂತ ಪಾದಯಾತ್ರೆ ಮಾಡಿ ಜನರನ್ನು ಸಂಘಟಿಸಿದರು. ಎಲ್ಲ ಜಾತಿ, ಧರ್ಮ ವರ್ಗದ ಜನತೆಯನ್ನು ವಿಜಯದಶಮಿಯಂದು ಅರಕಲಗೂಡು ಕೇಂದ್ರ ಸ್ಥಾನದಲ್ಲಿ ಸೇರುವಂತೆ ಮಾಡಿದರು. ಆ ಮೂಲಕ ದಸರಾ ಉತ್ಸವಕ್ಕೊಂದು ಸಾಮಾಜಿಕ ರೂಪ ಕೊಟ್ಟರು. ನಂತರದ ದಿನಗಳಲ್ಲಿ ಜನಮನ್ನಣೆ ಪಡೆದ ಅರಕಲಗೂಡು ದಸರಾ ಸಂಸ್ಕೃತಿಗೆ ಹೊಸ ಅರ್ಥವನ್ನೇ ಕೊಟ್ಟಿತು.
ಅರಕಲಗೂಡು ಸುಕ್ಷೇತ್ರ ದೊಡ್ಡಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಚಿಲುಮೆ ಮಠದ ಶ್ರೀ ಜಯದೇವ ಸ್ವಾಮಿಜಿ, ಅರೆಮಾದನಹಳ್ಳಿ ಮಠದ ವಿಶ್ವಕರ್ಮ ಗುರು ಶ್ರೀ ಶಿವಸುಜ್ಞಾನ ಸ್ವಾಮಿಜಿ, ಶಿರದನಹಳ್ಳಿ ಮಠದ ಶ್ರೀ ಬಸವಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗು ಕ್ರೈಸ್ತ,ಮುಸಲ್ಮಾನ ಧರ್ಮಗುರುಗಳ ಸಾನಿಧ್ಯದಲ್ಲಿ ಜರುಗುವ ದಸರಾ ಉತ್ಸವಕ್ಕೆ ಸಾರ್ವಜನಿಕ ಮುಖಂಡರುಗಳ ನೇತೃತ್ವದಲ್ಲಿ ಪ್ರತಿವರ್ಷ ಸಂಚಾಲಕ ಸಮಿತಿಯೊಂದನ್ನು ರಚಿಸಲಾಗುತ್ತದೆ. ಸಂಚಾಲಕ ಸಮಿತಿಯ ಸದಸ್ಯರುಗಳು ದಸರಾ ಉತ್ಸವಕ್ಕೆ ಬೇಕಾದ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಾರೆ. ವಿಜಯ ದಶಮಿಗೆ ಮುನ್ನ 9 ದಿನಗಳ ನವರಾತ್ರಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ನಂತರ ನವದೇವತೆಯರಿಗೆ ಪೂಜೆ ಪುನಸ್ಕಾರ ಆರಂಭವಾಗುತ್ತದೆ.
ಅರಕಲಗೂಡಿನ ದಸರಾ ಪಟ್ಟಣ ಪ್ರದೇಶಕ್ಕೆ ಮಾತ್ರ ಸೀಮಿತವಾಗಬಾರದೆಂಬ ಉದ್ದೇಶದಿಂದ ಸ್ವಾಮೀಜಿಗಳು ಹಾಗೂ ಧಾರ್ಮಿಕ ಗುರುಗಳು ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರಗಳಿಗೆ ತೆರಳಿ ಧಾರ್ಮಿಕ ಪ್ರವಚನ ನೀಡುತ್ತಾರೆ. ಇನ್ನು ವಿಜಯದಶಮಿ ಉತ್ಸವದ ದಿನ ಮಧ್ಯಾಹ್ನ 3 ಗಂಟೆಗೆ ಗ್ರಾಮದೇವತೆ ದೊಡ್ಡಮ್ಮ ದೇವತೆಗೆ ಪೂಜೆ ಸಲ್ಲಿಸಲಾಗುತ್ತದೆ, ಈ ವೇಳೆಗಾಗಲೇ 18 ಕೋಮಿನ ಜನರ ದೇವಾನುದೇವತೆಗಳನ್ನು ಸಿಂಗರಿಸಿ ಪ್ರತ್ಯೇಕ ವಾಹನಗಳಲ್ಲಿ ತಂದು ಸಾಲಾಗಿ ನಿಲ್ಲಿಸುತ್ತಾರೆ. ಕೋಟೆ ನರಸಿಂಹಸ್ವಾಮಿ ದೇಗುಲದಿಂದ ಆರಂಭವಾಗುವ ಮೆರವಣಿಗೆಗೆ ಸಂಘ-ಸಂಸ್ಥೆಗಳು ಮತ್ತು ವಿವಿಧ ಧರ್ಮೀಯರ ಸ್ಥಬ್ಧ ಚಿತ್ರಗಳು ಜತೆಯಾಗುತ್ತವೆ. ಜಾನಪದಮೇಳ, ಸೋಮನಕುಣಿತ, ಜಟ್ಟಿಮೇಳ, ಕೀಲು ಕುದುರೆ, ಗೊಂಬೆ ಮೇಳ, ಸಂಚಾರಿ ರಸಮಂಜರಿ ತಂಡ ಹೀಗೆ ದಸರಾ ಮೆರವಣಿಗೆ 2ಕಿಮಿ ಉದ್ದದಷ್ಟಾಗುತ್ತದೆ.
ರಂಗುರಂಗಾದ ಮೆರವಣಿಗೆಯ ಮುಂಭಾಗದಲ್ಲಿ ವಾದ್ಯಗೋಷ್ಠಿ. ಇವೆಲ್ಲ ಬಂದು ಸೇರುವ ಹೊತ್ತಿಗೆ ಸಾವಿರಾರು ಸಂಖ್ಯೆಯ ಜನರು ಸೇರುತ್ತಾರೆ. ಹೂವು ಹಾಗು ವಿದ್ಯುದ್ದೀಪಗಳ ಸಾಲು, ತಳಿರು ತೋರಣದಿಂದ ಊರಿನ ಪ್ರಮುಖ ಬೀದಿಗಳು ಕಂಗೊಳಿಸುತ್ತವೆ. ಈ ಸಂದರ್ಭದಲ್ಲಿ ಮಡಿಕೇರಿ ದಸರಾಕ್ಕೆ ತೆರಳುವ ಪ್ರಯಾಣಿಕರು ಸಹಾ ಮಾರ್ಗಮಧ್ಯೆ ನಿಂತು ದಸರ ಉತ್ಸವವನ್ನು ಸವಿಯುತ್ತಾರೆ. ರಾತ್ರಿ 9 ಗಂಟೆಯ ಸುಮಾರಿಗೆ ಉತ್ಸವ ಪಟ್ಟಣದ ಪೂರ್ವ ದಿಕ್ಕಿನಲ್ಲಿರುವ ವಿಜಯದಶಮಿ ಮಂಟಪದ ಬಳಿ ಬಂದು ಸೇರುತ್ತದೆ.
ಅಲ್ಲಿ ಬನ್ನಿ ವೃಕ್ಷಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಿ ಪೂಜಿಸಲ್ಪಟ್ಟ ಬಾಳೇ ಗಿಡವನ್ನು ತಾಲ್ಲೂಕಿನ ತಹಸೀಲ್ದಾರ್ ಡಾ. ಮಧುಕೇಶ್ವರ್ ಸಾಂಕೇತಿಕವಾಗಿ ಕತ್ತರಿಸುತ್ತಾರೆ. ಕದಳಿ ವೃಕ್ಷ ಛೇದನದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆಯೊಂದಿಗೆ ದಸರಾ ಉತ್ಸವಕ್ಕೆ ತೆರೆ ಬೀಳುತ್ತದೆ. ಸರಕಾರದ ಕೃಪಾಶೀರ್ವಾದವಿಲ್ಲದೆ ನಡೆಯುವ ಅರಕಲಗೂಡು ನವರಾತ್ರಿ ಸ್ವಾವಲಂಬನೆ ಮತ್ತು ಸಹಬಾಳ್ವೆಗೆ ಮಾದರಿಯಾಗಿದೆ.
(ಕೃಪೆ :'ಜನತಾಮಾಧ್ಯಮ', ಹಾಸನ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications