ಮಹಾನವಮಿಯಂದು ಸರಸ್ವತಿ ದೇವಿ ಆರಾಧನೆ

ಮಾಹಿತಿ : ಹಂಸಾನಂದಿ
ಮೈಸೂರು ವಾಸುದೇವಾಚಾರ್ಯರು(1865-1961) 20ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು 300ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು ಮತ್ತು ಸಂಸ್ಕೃತದಲ್ಲಿ ಮಾಡಿದ್ದಾರೆ. ಕಚೇರಿಗಳಲ್ಲಿ ಕೇಳಬಹುದಾದ ರಚನೆಗಳನ್ನೇ ಲೆಕ್ಕಕ್ಕೆ ತೆಗೆದುಕೊಂಡರೆ, ಕರ್ನಾಟಕದ ನೆಲದಲ್ಲಿ ಮೂಡಿಬಂದ ಕೃತಿಗಳಲ್ಲಿ ಇವರದ್ದು ದೊಡ್ಡ ಪಾಲು ಇರುತ್ತದೆ ಎನ್ನಬಹುದು.
ಕನಕಪುರದಲ್ಲಿ ಹುಟ್ಟಿದ ವಾಸುದೇವಾಚಾರ್ಯರು ತಮ್ಮ ಜೀವನದ ಬಹುಪಾಲು ಭಾಗವನ್ನು ಮೈಸೂರಿನ ಒಡೆಯರ ಆಶ್ರಯದಲ್ಲಿ ಕಳೆದರು. ಅಷ್ಟೇ ಅಲ್ಲ, ಮೈಸೂರಿನ ಕೊನೆಯ ದೊರೆ ಜಯಚಾಮರಾಜೇಂದ್ರ ಒಡೆಯರಿಗೆ ಇವರು ಸಂಗೀತಗುರುಗಳು ಕೂಡ. ತಮ್ಮ ರಚನೆಗಳಲ್ಲಿ ವಾಸುದೇವ ಎಂಬ ಅಂಕಿತವನ್ನು ಇಟ್ಟಿರುತ್ತಾರೆ. ಅಭಿನವ ತ್ಯಾಗರಾಜರೆಂದೇ ಪ್ರಸಿದ್ಧರಾದ ವಾಸುದೇವಾಚಾರ್ಯರು ಬರಹಗಾರರು ಕೂಡಾ. ಸಂಗೀತ ಕ್ಷೇತ್ರದಲ್ಲಿ ತಮ್ಮ ಅನುಭವವನ್ನು 'ನಾ ಕಂಡ ಕಲಾವಿದರು' ಎಂಬ ಪುಸ್ತಕದಲ್ಲಿ ದಾಖಲಿಸಿದ್ದಾರೆ.
ಮಹಾನವಮಿಯ ಸರಸ್ವತಿ ಪೂಜೆಯ ಪ್ರಯುಕ್ತ, ಇಂದು ಇವರ ಸಂಸ್ಕೃತ ಭಾಷೆಯಲ್ಲಿರುವ ಹಿಂದೋಳ ರಾಗದ ಕೃತಿ ಮಾಮವತು ಶ್ರೀ ಸರಸ್ವತೀ ಎಂಬ ರಚನೆಯನ್ನು ಇಲ್ಲಿ ಕ್ಲಿಕ್ಕಿಸಿ ಕೇಳಿದರೆ ಚೆನ್ನಾಗಿರುತ್ತೆ. ಅಲ್ಲವೆ? . ಹಾಡಿರುವವರು ಸಂಗೀತಾ ಕೃಷ್ಣ.
ತಿರುವನಂತಪುರದಲ್ಲಿನ ನವರಾತ್ರಿ ಮಂಟಪದಲ್ಲಿ ನವರಾತ್ರಿಯ ಒಂಬತ್ತನೆ ದಿವಸ ಹಾಡುವ ಕೃತಿ, ಪಾಹಿ ಪರ್ವತ ನಂದಿನಿ ಎಂಬ ಆರಭಿ ರಾಗದ ರಚನೆ, ಅದನ್ನು ಮ್ಯೂಸಿಕ್ ಇಂಡಿಯಾ ತಾಣದಲ್ಲಿ ಇಲ್ಲಿ ಕೇಳಬಹುದು. ಇದು ಸ್ವಾತಿ ತಿರುನಾಳ್ ಮಹಾರಾಜರ ನವರಾತ್ರಿ ಕೃತಿಗಳಲ್ಲಿ ಕೊನೆಯದು.
ಪೂರಕ ಓದಿಗೆ
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications