ಮಹಾನವಮಿಯಂದು ಸರಸ್ವತಿ ದೇವಿ ಆರಾಧನೆ

ಮಾಹಿತಿ : ಹಂಸಾನಂದಿ
ಮೈಸೂರು ವಾಸುದೇವಾಚಾರ್ಯರು(1865-1961) 20ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು 300ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು ಮತ್ತು ಸಂಸ್ಕೃತದಲ್ಲಿ ಮಾಡಿದ್ದಾರೆ. ಕಚೇರಿಗಳಲ್ಲಿ ಕೇಳಬಹುದಾದ ರಚನೆಗಳನ್ನೇ ಲೆಕ್ಕಕ್ಕೆ ತೆಗೆದುಕೊಂಡರೆ, ಕರ್ನಾಟಕದ ನೆಲದಲ್ಲಿ ಮೂಡಿಬಂದ ಕೃತಿಗಳಲ್ಲಿ ಇವರದ್ದು ದೊಡ್ಡ ಪಾಲು ಇರುತ್ತದೆ ಎನ್ನಬಹುದು.
ಕನಕಪುರದಲ್ಲಿ ಹುಟ್ಟಿದ ವಾಸುದೇವಾಚಾರ್ಯರು ತಮ್ಮ ಜೀವನದ ಬಹುಪಾಲು ಭಾಗವನ್ನು ಮೈಸೂರಿನ ಒಡೆಯರ ಆಶ್ರಯದಲ್ಲಿ ಕಳೆದರು. ಅಷ್ಟೇ ಅಲ್ಲ, ಮೈಸೂರಿನ ಕೊನೆಯ ದೊರೆ ಜಯಚಾಮರಾಜೇಂದ್ರ ಒಡೆಯರಿಗೆ ಇವರು ಸಂಗೀತಗುರುಗಳು ಕೂಡ. ತಮ್ಮ ರಚನೆಗಳಲ್ಲಿ ವಾಸುದೇವ ಎಂಬ ಅಂಕಿತವನ್ನು ಇಟ್ಟಿರುತ್ತಾರೆ. ಅಭಿನವ ತ್ಯಾಗರಾಜರೆಂದೇ ಪ್ರಸಿದ್ಧರಾದ ವಾಸುದೇವಾಚಾರ್ಯರು ಬರಹಗಾರರು ಕೂಡಾ. ಸಂಗೀತ ಕ್ಷೇತ್ರದಲ್ಲಿ ತಮ್ಮ ಅನುಭವವನ್ನು 'ನಾ ಕಂಡ ಕಲಾವಿದರು' ಎಂಬ ಪುಸ್ತಕದಲ್ಲಿ ದಾಖಲಿಸಿದ್ದಾರೆ.
ಮಹಾನವಮಿಯ ಸರಸ್ವತಿ ಪೂಜೆಯ ಪ್ರಯುಕ್ತ, ಇಂದು ಇವರ ಸಂಸ್ಕೃತ ಭಾಷೆಯಲ್ಲಿರುವ ಹಿಂದೋಳ ರಾಗದ ಕೃತಿ ಮಾಮವತು ಶ್ರೀ ಸರಸ್ವತೀ ಎಂಬ ರಚನೆಯನ್ನು ಇಲ್ಲಿ ಕ್ಲಿಕ್ಕಿಸಿ ಕೇಳಿದರೆ ಚೆನ್ನಾಗಿರುತ್ತೆ. ಅಲ್ಲವೆ? . ಹಾಡಿರುವವರು ಸಂಗೀತಾ ಕೃಷ್ಣ.
ತಿರುವನಂತಪುರದಲ್ಲಿನ ನವರಾತ್ರಿ ಮಂಟಪದಲ್ಲಿ ನವರಾತ್ರಿಯ ಒಂಬತ್ತನೆ ದಿವಸ ಹಾಡುವ ಕೃತಿ, ಪಾಹಿ ಪರ್ವತ ನಂದಿನಿ ಎಂಬ ಆರಭಿ ರಾಗದ ರಚನೆ, ಅದನ್ನು ಮ್ಯೂಸಿಕ್ ಇಂಡಿಯಾ ತಾಣದಲ್ಲಿ ಇಲ್ಲಿ ಕೇಳಬಹುದು. ಇದು ಸ್ವಾತಿ ತಿರುನಾಳ್ ಮಹಾರಾಜರ ನವರಾತ್ರಿ ಕೃತಿಗಳಲ್ಲಿ ಕೊನೆಯದು.
ಪೂರಕ ಓದಿಗೆ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications