ದೀಪಿಕಾ ಪಡುಕೋಣೆಯಿಂದ ಯುವ ದಸರಾ ಉದ್ಘಾಟನೆ
ಮೈಸೂರು, ಸೆ. 14 : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಯುವ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಪ್ರಕಾಶ್ ರೈ ಮತ್ತು ನಟಿ ಉಮಾಶ್ರೀ ಅವರು ಉಪಸ್ಥಿತರಿರುವರು ಎಂದರು.
ಖವ್ವಾಲಿ ಗೀತೆ ಗಾಯನ
ಸೆಪ್ಟೆಂಬರ್ 15 ರಂದು ಮೈಸೂರು ಸೇಂಟ್ ಫಿಲೊಮಿನಾಸ್ ಚರ್ಚ್ ಮುಂಭಾಗ ಸಂಜೆ 6 ಗಂಟೆಯಿಂದ ಸಾಮಾಜಿಕ ಧಾರ್ಮಿಕ ಸೌಹಾರ್ದತೆಗಾಗಿ ಕ್ರಿಶ್ಚಿಯನ್ ಸಹೋದರರಿಂದ ಕೆರೋಲ್ ಸಿಂಗಿಂಗ್ ಧಾರ್ಮಿಕ ಹಾಗೂ ದೇಶಭಕ್ತಿಗೀತೆಗಳ ಕಾರ್ಯಕ್ರಮ, ಬೋಗಾದಿ ಕೃಪಾಲಯದ ಅಂಧ ಮಕ್ಕಳಿಂದ ಹಾಗೂ ಗಿರಿಜನರಿಂದ ಗೀತ ಗಾಯನ ಹಾಗೂ ಸುಪ್ರಸಿದ್ಧ ಭಾರತ್ ಸರಗಮ್ ಕವ್ವಾಲಿ ತಂಡದಿಂದ 'ಖವ್ವಾಲಿ' ಗೀತ ಗಾಯನ ಏರ್ಪಡಿಸಲಾಗಿದೆ.
ಮೈಸೂರಿನ ಪೋಲೀಸ್ ಆಯುಕ್ತ ಸುನೀಲ್ ಅಗರವಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ದಸರಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ಶಿವಕುಮಾರ್ ತಿಳಿಸಿದ್ದಾರೆ. ಸೆಪ್ಟೆಂಬರ್ 15 ರಂದೇ ಕುವೆಂಪು ನಗರದ ಸೌಗಂಧಿಕಾ ಉದ್ಯಾನವನದಲ್ಲಿ "ಮನೆಮನೆಗೆ ಜಾನಪದ ಸಂಗೀತ" ಕಾರ್ಯಕ್ರಮ ಸಂಜೆ 6 ಗಂಟೆಗೆ ನಡೆಯಲಿದೆ.
ಸೆಪ್ಟೆಂಬರ್ 17 ರಂದು ಮೈಸೂರು ನಗರದಾದ್ಯಂತ ಬೆಳಗಿನಿಂದ ಸಂಜೆಯವರೆಗೂ ಏಕಕಾಲಕ್ಕೆ 100 'ರಾಜನಗಾರಿ' ಕಲಾವಿದರು ನಗಾರಿ ಬಾರಿಸುತ್ತಾ ರಸ್ತೆಗಳಲ್ಲಿ ಸಾಗಿ ದಸರಾ ಆಗಮನ ಸಾರಿ ಹೇಳುವ ಮೂಲಕ ಜನಕ್ಕೆ ಮುದ ನೀಡಲಿದ್ದಾರೆ. ಇದನ್ನು ಮೈಸೂರು ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಉದ್ಘಾಟಿಸುವರು.
ಸೆಪ್ಟೆಂಬರ್ 18 ರಂದು ನಗರದ ಬೃಹತ್ ಮತ್ತು ಪ್ರಮುಖ ವೃತ್ತಗಳಲ್ಲಿ ಬೃಹತ್ ದಸರಾ ಗೊಂಬೆಗಳನ್ನು ರಾರಾಜಿಸುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅದೇ ದಿನ ಅರಮನೆ ಬಳಿ ಏಕಕಾಲಕ್ಕೆ 500 ಜನಪದ ಕಲಾವಿದರು ರಂಗುರಂಗಿನ ಬಟ್ಟೆ ತೊಟ್ಟು ಕಲಾಪ್ರದರ್ಶನ ನೀಡುವರು ಎಂದು ಕೆ ಶಿವಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಕಳೆದ ಆಗಸ್ಟ್ 30 ರಿಂದ ಪ್ರತೀ ಭಾನುವಾರ ರಾಜ್ಯ ಪ್ರಮುಖ ಪ್ರವಾಸಿ ತಾಣಗಳು, ಉಡುಪಿ ಕೃಷ್ಣ ದೇವಾಲಯ, ಮಲ್ಪೆ ಸಮುದ್ರ ತಡಿ, ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಶ್ರೀರಂಗಪಟ್ಟಣ, ಬಿಜಾಪುರ, ಹುಬ್ಬಳ್ಳಿಗಳಲ್ಲಿ ಕಲಾವಿದರು ತಮ್ಮ ಕಲಾಪ್ರದರ್ಶನದ ಮೂಲಕ ಪ್ರವಾಸಿಗರಿಗೆ ದಸರಾ ಪ್ರಚಾರ ಮಾಡುತ್ತಿದ್ದಾರೆ. ಕಳೆದ ಸೆಪ್ಟೆಂಬರ್ 6 ರಂದು ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ, ಲಾಲ್ ಬಾಗ್ ಹಾಗೂ ಕಬ್ಬನ್ ಪಾರ್ಕ್ಗಳಲ್ಲಿ ಸಹ ಜನಪದ ಕಲಾವಿದರು ದಸರಾ ಪ್ರಚಾರ ನೀಡಿ ಜನರನ್ನು ಬಹುವಾಗಿ ಆಕರ್ಷಿಸುತ್ತಿರುವುದನ್ನು ಮಾಧ್ಯಮಗಳು ವರದಿ ಮಾಡುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
(ದಟ್ಸ್ ಕನ್ನಡ ವಾರ್ತೆ)
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications