ದೀಪಿಕಾ ಪಡುಕೋಣೆಯಿಂದ ಯುವ ದಸರಾ ಉದ್ಘಾಟನೆ
ಮೈಸೂರು, ಸೆ. 14 : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಯುವ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಪ್ರಕಾಶ್ ರೈ ಮತ್ತು ನಟಿ ಉಮಾಶ್ರೀ ಅವರು ಉಪಸ್ಥಿತರಿರುವರು ಎಂದರು.
ಖವ್ವಾಲಿ ಗೀತೆ ಗಾಯನ
ಸೆಪ್ಟೆಂಬರ್ 15 ರಂದು ಮೈಸೂರು ಸೇಂಟ್ ಫಿಲೊಮಿನಾಸ್ ಚರ್ಚ್ ಮುಂಭಾಗ ಸಂಜೆ 6 ಗಂಟೆಯಿಂದ ಸಾಮಾಜಿಕ ಧಾರ್ಮಿಕ ಸೌಹಾರ್ದತೆಗಾಗಿ ಕ್ರಿಶ್ಚಿಯನ್ ಸಹೋದರರಿಂದ ಕೆರೋಲ್ ಸಿಂಗಿಂಗ್ ಧಾರ್ಮಿಕ ಹಾಗೂ ದೇಶಭಕ್ತಿಗೀತೆಗಳ ಕಾರ್ಯಕ್ರಮ, ಬೋಗಾದಿ ಕೃಪಾಲಯದ ಅಂಧ ಮಕ್ಕಳಿಂದ ಹಾಗೂ ಗಿರಿಜನರಿಂದ ಗೀತ ಗಾಯನ ಹಾಗೂ ಸುಪ್ರಸಿದ್ಧ ಭಾರತ್ ಸರಗಮ್ ಕವ್ವಾಲಿ ತಂಡದಿಂದ 'ಖವ್ವಾಲಿ' ಗೀತ ಗಾಯನ ಏರ್ಪಡಿಸಲಾಗಿದೆ.
ಮೈಸೂರಿನ ಪೋಲೀಸ್ ಆಯುಕ್ತ ಸುನೀಲ್ ಅಗರವಾಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ದಸರಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ಶಿವಕುಮಾರ್ ತಿಳಿಸಿದ್ದಾರೆ. ಸೆಪ್ಟೆಂಬರ್ 15 ರಂದೇ ಕುವೆಂಪು ನಗರದ ಸೌಗಂಧಿಕಾ ಉದ್ಯಾನವನದಲ್ಲಿ "ಮನೆಮನೆಗೆ ಜಾನಪದ ಸಂಗೀತ" ಕಾರ್ಯಕ್ರಮ ಸಂಜೆ 6 ಗಂಟೆಗೆ ನಡೆಯಲಿದೆ.
ಸೆಪ್ಟೆಂಬರ್ 17 ರಂದು ಮೈಸೂರು ನಗರದಾದ್ಯಂತ ಬೆಳಗಿನಿಂದ ಸಂಜೆಯವರೆಗೂ ಏಕಕಾಲಕ್ಕೆ 100 'ರಾಜನಗಾರಿ' ಕಲಾವಿದರು ನಗಾರಿ ಬಾರಿಸುತ್ತಾ ರಸ್ತೆಗಳಲ್ಲಿ ಸಾಗಿ ದಸರಾ ಆಗಮನ ಸಾರಿ ಹೇಳುವ ಮೂಲಕ ಜನಕ್ಕೆ ಮುದ ನೀಡಲಿದ್ದಾರೆ. ಇದನ್ನು ಮೈಸೂರು ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಉದ್ಘಾಟಿಸುವರು.
ಸೆಪ್ಟೆಂಬರ್ 18 ರಂದು ನಗರದ ಬೃಹತ್ ಮತ್ತು ಪ್ರಮುಖ ವೃತ್ತಗಳಲ್ಲಿ ಬೃಹತ್ ದಸರಾ ಗೊಂಬೆಗಳನ್ನು ರಾರಾಜಿಸುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಅದೇ ದಿನ ಅರಮನೆ ಬಳಿ ಏಕಕಾಲಕ್ಕೆ 500 ಜನಪದ ಕಲಾವಿದರು ರಂಗುರಂಗಿನ ಬಟ್ಟೆ ತೊಟ್ಟು ಕಲಾಪ್ರದರ್ಶನ ನೀಡುವರು ಎಂದು ಕೆ ಶಿವಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಕಳೆದ ಆಗಸ್ಟ್ 30 ರಿಂದ ಪ್ರತೀ ಭಾನುವಾರ ರಾಜ್ಯ ಪ್ರಮುಖ ಪ್ರವಾಸಿ ತಾಣಗಳು, ಉಡುಪಿ ಕೃಷ್ಣ ದೇವಾಲಯ, ಮಲ್ಪೆ ಸಮುದ್ರ ತಡಿ, ಬೇಲೂರು, ಹಳೇಬೀಡು, ಶ್ರವಣಬೆಳಗೊಳ, ಶ್ರೀರಂಗಪಟ್ಟಣ, ಬಿಜಾಪುರ, ಹುಬ್ಬಳ್ಳಿಗಳಲ್ಲಿ ಕಲಾವಿದರು ತಮ್ಮ ಕಲಾಪ್ರದರ್ಶನದ ಮೂಲಕ ಪ್ರವಾಸಿಗರಿಗೆ ದಸರಾ ಪ್ರಚಾರ ಮಾಡುತ್ತಿದ್ದಾರೆ. ಕಳೆದ ಸೆಪ್ಟೆಂಬರ್ 6 ರಂದು ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ, ಲಾಲ್ ಬಾಗ್ ಹಾಗೂ ಕಬ್ಬನ್ ಪಾರ್ಕ್ಗಳಲ್ಲಿ ಸಹ ಜನಪದ ಕಲಾವಿದರು ದಸರಾ ಪ್ರಚಾರ ನೀಡಿ ಜನರನ್ನು ಬಹುವಾಗಿ ಆಕರ್ಷಿಸುತ್ತಿರುವುದನ್ನು ಮಾಧ್ಯಮಗಳು ವರದಿ ಮಾಡುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.
(ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications