ದಸರಾ ವಿಶೇಷ : ವೈವಿಧ್ಯಮಯ ಚಲನಚಿತ್ರೋತ್ಸವ
ಮೈಸೂರು, ಸೆ. 16 : ಈ ಬಾರಿಯ ದಸರಾ ಚಲನಚಿತ್ರೋತ್ಸವ ಹಲವು ವೈವಿಧ್ಯಗಳಿಂದ ಕೂಡಿದ್ದು, ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಚಲನಚಿತ್ರೋತ್ಸವ ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಜ್ಯೋತಿ ಬೆಳಗಿಸಲಿದ್ದಾರೆ.
ಸೆ 19 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದ್ದು, ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶೋಭ ಕರಂದ್ಲಾಜೆ ಉಪಸ್ಥಿತರಿರುವರು. ಚಾಮರಾಜ ಕ್ಷೇತ್ರದ ಶಾಸಕ ಹೆಚ್ ಎಸ್ ಶಂಕರಲಿಂಗೇಗೌಡ ಅಧ್ಯಕ್ಷತೆ ವಹಿಸುವರು ಎಂದು ದಸರಾ ಚಲನಚಿತ್ರ ಉಪಸಮಿತಿ ಅಧ್ಯಕ್ಷ ಪ್ರತಾಪ್ ಅವರು ಇಂದು ನಗರದ ವಾರ್ತಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ ಜಯಮಾಲ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿ ಎಸ್ ನಾಗಾಭರಣ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಜಗ್ಗೇಶ್, ನಟಿ ತಾರಾ, ದುನಿಯಾ ಖ್ಯಾತಿಯ ವಿಜಯ್, ಶುಭಾ ಪೂಂಜಾ, ರಾಧಿಕಾ ಪಂಡಿತ್, ಮಂಡ್ಯ ರಮೇಶ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಇವರುಗಳಲ್ಲದೆ ಕಂಠೀರವ ಸ್ಟುಡಿಯೋ ಅಧ್ಯಕ್ಷ ಗಿರೀಶ್ ಮಟ್ಟಣ್ಣನವರ್, ಸಹಕಾರ ಸಚಿವ ಲಕ್ಷ್ಮಣ ಸವದಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಜಿಲ್ಲೆಯ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ಇತರೆ ಜನಪ್ರತಿನಿಧಿಗಳು, ಮತ್ತಿತರ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರತಾಪ್ ಹೇಳಿದರು. ನಂತರ ಚಲನಚಿತ್ರೋತ್ಸವದಲ್ಲಿ ವಿವಿದ ಚಿತ್ರಪ್ರದರ್ಶನಗಳ ವಿವರ ನೀಡಿದರು.
(ದಟ್ಸ್ ಕನ್ನಡ ವಾರ್ತೆ)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications