ಸೆ.20 ರಿಂದ ದಸರಾ ಸೈಕ್ಲಿಂಗ್ ಸ್ಪರ್ಧೆ
ಬೆಂಗಳೂರು, ಸೆ. 18 : ನಾಡಹಬ್ಬ ದಸರಾ ಪ್ರಯುಕ್ತ ಸೈಕ್ಲಿಂಗ್ ಉಪ ಸಮಿತಿ ವತಿಯಿಂದ ಸೈಕಲ್ ಸ್ಪರ್ಧೆ ಮತ್ತು ರೇಸ್ಗಳನ್ನು ಸೆ. 20 ರಿಂದ 22 ರವರೆಗೆ ಏರ್ಪಡಿಸಲಾಗಿದೆ.
ಸೆ. 20 ರಂದು ಬೆಳಗ್ಗೆ 9 ಗಂಟೆಗೆ ದಸರಾ ಹೆರಿಟೇಜ್ ಸೈಕಲ್ ಸ್ಪರ್ಧೆಯನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಮಾಡುವರು. ಇದರಲ್ಲಿ ಸಾರ್ವಜನಿಕರು ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಸುಮಾರು 5000 ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ದಸರಾ ಹೆರಿಟೇಜ್ ಸೈಕಲ್ ಸ್ಪರ್ಧೆಯು ಮಹಾರಾಜ ಕಾಲೇಜು ಮೈದಾನದ ಮುಂಬಾಗದ ರಸ್ತೆಯಲ್ಲಿ ಆರಂಭವಾಗಿ ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಗನ್ ಹೌಸ್ ವೃತ್ತ, ನಂಜನಗೂಡು ರಸ್ತೆ, ರೇಸ್ ಕೋರ್ಸ್ ರಸ್ತೆ, ಪ್ರಾಣಿ ಸಂಗ್ರಹಾಲಯ, ರೀಜೆನ್ಸಿ ಟಾಕೀಸ್ ರಸ್ತೆ, ಶಾಂತವೇರಿ ಗೋಪಾಲಗೌಡ ಆಸ್ಪತ್ತೆ ವೃತ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಯ ವೃತ್ತ, ಪೊಲೀಸ್ ಆಕಾಡೆಮಿ ರಸ್ತೆ, ಫೈವ್ ಲೈಟ್ ವೃತ್ತ, ಸಂತ ಫಿಲೋಮಿನ್ ಚರ್ಚ್, ಅಶೋಕ ರಸ್ತೆ, ಪುರಭವನ, ಕೆ.ಆರ್.ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಹಾದು ಹೋಗಿ ಮೈಸೂರು ವಿಶ್ವವಿದ್ಯಾನಿಲಯದ ಓವಲ್ಗ್ರೌಂಡ್ನಲ್ಲಿ ಅಂತ್ಯಗೊಳ್ಳಲಿದೆ.
ಸೆ. 21 ರಂದು ಬೆಳಗ್ಗೆ 7 ಗಂಟೆಗೆ ಪುರುಷರ ಮುಕ್ತ ಸೈಕಲ್ ಚಾಂಪಿಯನ್ಷಿಪ್ ಮೈಸೂರು-ನಂಜನಗೂಡು ರಸ್ತೆಯ ಎ.ಪಿ.ಎಂ.ಸಿ. ಹತ್ತಿರವಿರುವ ರಿಂಗ್ ರೋಡ್ ಜಂಕ್ಷನ್ನಲ್ಲಿ ಆರಂಭಗೊಳ್ಳಲಿದೆ. ಈ ರೇಸ್ ಮೈಸೂರು ಹೊರ ವರ್ತುಲ ರಸ್ತೆಯಲ್ಲಿ ಹೆಚ್.ಡಿ.ಕೋಟೆ ರಸ್ತೆ, ಹುಣಸೂರು ರಸ್ತೆ, ಬೆಂಗಳೂರು ರಸ್ತೆಯ ರಿಂಗ್ ರೋಡ್ ಜಂಕ್ಷನ್ಗಳ ಮೂಲಕ ಹಾಯ್ದು ಹೋಗಿ ಮೈಸೂರು-ಬನ್ನೂರು ರಸ್ತೆಯ ರಿಂಗ್ರೋಡ್ ಜಂಕ್ಷನ್ನಲ್ಲಿ ಅಂತ್ಯಗೊಳ್ಳಲಿದೆ.
ಅದೇ ದಿನದಂದು ಬೆಳಿಗ್ಗೆ 10 ಗಂಟೆಗೆ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ತ್ರಿಚಕ್ರ ಸೈಕಲ್ ರೇಸ್, 2 ಗಂಟೆಗೆ ಅಂಗವಿಕಲರ ತ್ರಿಚಕ್ರ ಸೈಕಲ್ ರೇಸ್ ಹಾಗೂ ಸೆ 22 ರಂದು ಬೆಳಗ್ಗೆ 9 ಗಂಟೆಗೆ 5 ರಿಂದ 10 ವರ್ಷ ವಯಸ್ಸಿನ ಮಕ್ಕಳ ಸೈಕಲ್ ರೇಸ್ ನಡೆಯಲಿದೆ. ಈ ಮೂರು ರೇಸ್ಗಳು ಮಹಾರಾಜ ಕಾಲೇಜು ಮೈದಾನದ ಮುಂದಿನ ಜೋಡಿ ರಸ್ತೆಯಲ್ಲಿ ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸೈಕಲ್ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಗುವುದು.
(ದಟ್ಸ್ ಕನ್ನಡ ವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications