ದಸರಾ: ಜನಮನ ಗೆದ್ದ ಜನಪದೋತ್ಸವ
ಮೈಸೂರು, ಸೆ. 23:ನಗರದ ಹೃದಯ ಭಾಗದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಗೆಬಗೆಯ ವೇಷಭೂಷಣಗಳೊಂದಿಗೆ ಆರುನೂರಕ್ಕೂ ಹೆಚ್ಚು ಕಲಾವಿದರು ನಮ್ಮ ನಾಡಿನ ಕಲೆ, ಸಂಸ್ಕೃತಿಯನ್ನು ಬಿಂಬಿಸುವಂತಹ ಕಲಾ ಚಟುವಟಿಕೆಗಳನ್ನು ಪ್ರದರ್ಶಿಸಿ ಜನರನ್ನು ತನ್ನ ಕಡೆ ಆಕರ್ಷಿಸುವಂತೆ ಮಾಡಿತ್ತು.
ಸಾಂಸ್ಕೃತಿಕ ನಗರಿ ಮೈಸೂರಿನ ಗತವೈಭವದ ಸಂಸ್ಕೃತಿಯನ್ನು ಸಾರುವ ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ, ಯಕ್ಷಗಾನ, ಭಜನೆ, ರಾಮನಾಮ, ಶಿವನಾಮ, ಸ್ವಾಮಿ ಕುಣಿತ, ಕರಡಿ ಮಜಲು, ಹುಲಿ ವೇಷ ನೃತ್ಯಗಳನ್ನು ಕಲಾವಿದರು ಅಪಾರ ಜನರ ಮುಂದೆ ಪ್ರದರ್ಶಿಸಿ ದಸರಾ ಹಬ್ಬವನ್ನು ವಿಜೃಂಭಣೆಯಿಂದ, ಸಡಗರದಿಂದ ಆಚರಿಸಲು ಮುಂದಾದರು. ಅಲ್ಲದೆ ಇದೇ ವೇಳೆಯಲ್ಲಿ ಪ್ರವಾಸಿಗರು ಕೂಡ ಇದನ್ನು ನೋಡಿ ಸಂತೋಷಗೊಂಡು ತಾವು ಕೂಡ ನೃತ್ಯ ಮಾಡುವುದರೊಂದಿಗೆ ದಸರಾ ಹಬ್ಬ ಕೂಡಾ ನಮ್ಮ ಹಬ್ಬ ಎಂಬುವಂತೆ ಜನಪದೋತ್ಸವದಲ್ಲಿ ಭಾಗವಹಿಸಿದರು.
ಆರುನೂರಕ್ಕೂ ಹೆಚ್ಚು ಕಲಾವಿದರು ವಿವಿಧ ಬಣ್ಣಬಣ್ಣದ ವೇಷಭೂಷಣಗಳೊಂದಿಗೆ ನೃತ್ಯವನ್ನು ಮಾಡಿದಾಗ ಇನ್ನಷ್ಟು ದಸರಾ ಹಬ್ಬದ ಕಳೆ ಹೆಚ್ಚಿತ್ತು. ಅಲ್ಲದೆ ಹೊರರಾಜ್ಯದ ಅಪಾರಜನತೆ ಕೂಡಾ ಇದರಲ್ಲಿ ಭಾಗವಹಿಸಿದರು ಹಾಗೂ ಕರ್ನಾಟಕ ಕಲೆ, ಸಂಸ್ಕೃತಿಯ ವೈಭವವನ್ನು ಸಾರುವ ಜನಪದೋತ್ಸವ ಕಾರ್ಯಕ್ರಮದ ಕಲಾ ಮೆರವಣಿಗೆ ದೇವರಾಜ ಅರಸು ರಸ್ತೆ ಮೂಲಕ ಕಲಾಮಂದಿರದವರೆಗೆ ಸಂಜೆ 6.00ರಿಂದ ಜನಪದ ಕಲಾರಂಗದಲ್ಲಿ ಜಾನಪದ ಕಲಾಮೇಳ ಆರಂಭವಾಯಿತು. ಇದನ್ನು ಕೂಡಾ ಅಪಾರ ಜನಸಂಖ್ಯೆ ನೋಡಿ ಸಂತೋಷ, ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಣೆ ಮಾಡಿದರು.
ಸೆ.26 ರವರೆಗೂ ನಡೆಯಲಿರುವ ಈ ಜಾನಪದ ಹಬ್ಬದ ಉದ್ಘಾಟನೆಗೆ ಸಚಿವ ಸಿಎಂ ಉದಾಸಿ, ಆನಂದ್ ಅಸ್ನೋಟಿಕರ್ ಆಗಮಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ ಅತಿಥಿಗಳನ್ನು ಸ್ವಾಗತಿಸಿದರು.
(ದಟ್ಸ್ ಕನ್ನಡ ವಾರ್ತೆ)
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications