ಚಿನ್ನದ ಅಂಬಾರಿ ಯಾರ ಹೆಗಲೇರಲಿದೆ?

ಕಳೆದ ವರ್ಷವೇ ಬಲರಾಮನ ಶಕ್ತಿ ಕುಂದಿದ್ದು, ಜಂಬೂ ಸವಾರಿಗೆ ಬೇರೆ ಆನೆಯ ವ್ಯವಸ್ಥೆ ಮಾಡುವಂತೆ ಒತ್ತಡಗಳು ಬಂದಿತ್ತು. ಆದರೆ ಎಲ್ಲವನ್ನು ಸುಳ್ಳುಮಾಡಿದ ಬಲರಾಮ ಅಂಬಾರಿ ಹೊರುವ ಮೂಲಕ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದನು. ಆದರೆ ಈಗ ಬಲರಾಮನ ಬಲಗಣ್ಣು ಪೊರೆ ಬಂದಿದೆ ಎಂಬ ಅಂಶ ಬಯಲಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. ಆದರೆ ಇದರಿಂದ ಈ ವರ್ಷದ ಜಂಬೂ ಸವಾರಿಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂಬುವುದು ಸಂಬಂಧಿಸಿದ ಅಧಿಕಾರಿಗಳ ಅಭಿಪ್ರಾಯವಾಗಿದೆ.
ಬಲರಾಮನ ಬಗ್ಗೆ ಒಂದಷ್ಟು: ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತು ಮುನ್ನಡೆಯುವ ಬಲರಾಮನಿಗೆ ಈಗ 52 ವರ್ಷ. ಸೌಮ್ಯ ಸ್ವಭಾವದ ಈತ 2.70ಮೀಟರ್ ಎತ್ತರ ಇದ್ದಾನೆ. ಹದಿನಾರು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದು, ಕಳೆದ ಹನ್ನೆರಡು ವರ್ಷದಿಂದ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ ನಿರ್ವಹಿಸಿದ್ದಾನೆ.
ಬಲರಾಮನನ್ನು 1987ರಲ್ಲಿ ಕೊಡಗು ಜಿಲ್ಲೆಯ ಕಟ್ಟೆಪುರ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. ಬಹುಶಃ ಆ ಸಂದರ್ಭದಲ್ಲಿ ಕಾಡಿನಲ್ಲಿ ಓಡಾಡಿಕೊಂಡಿದ್ದಾಗ ಗಿಡಗಂಟಿ ಕಣ್ಣಿಗೆ ಚುಚ್ಚಿದ್ದರಿಂದ ಗಾಯವಾಗಿತ್ತು. ಆದರೆ ಸೆರೆಹಿಡಿದ ಬಳಿಕ ಆನೆಶಿಬಿರದಲ್ಲಿ ಕಣ್ಣಿನಿಂದ ನೀರು ಬರುತ್ತಿದ್ದುದನ್ನು ಗಮನಿಸಿದ ವೈದ್ಯರು ಅದಕ್ಕೆ ಔಷಧಿ ಹಾಕಿ ಉಪಚಾರ ಮಾಡಿದ್ದರು.
ಈಗ ವಯಸ್ಸಾಗುತ್ತಿರುವುದರಿಂದ ಕಣ್ಣಿನಲ್ಲಿ ಪೊರೆ ಬೆಳೆಯತೊಡಗಿದ್ದು, ಇದರಿಂದ ದೃಷ್ಟಿ ಮಂದವಾಗತೊಡಗಿದೆ. ಅಲ್ಲದೆ ಶಸ್ತ್ರಚಿಕಿತ್ಸೆ ಮೂಲಕ ಪೊರೆ ತೆಗೆಯೋಣ ಎಂದರೆ ಅಂತಹ ಸೌಲಭ್ಯವೇ ಇಲ್ಲ ಎಂಬ ಮಾತು ಕೂಡ ಕೇಳಿ ಬಂದಿದೆ. ದೃಷ್ಟಿ ಸ್ವಲ್ಪ ಮಂದವಾದರೂ ಬಲರಾಮ ದೃಢಕಾಯನಾಗಿದ್ದು ಅಂಬಾರಿ ಹೊರುವ ಸಾಮರ್ಥ್ಯ ಹೊಂದಿದ್ದಾನೆ ಎಂಬುವುದು ಇದನ್ನು ಲಾಲನೆ ಪೋಷಣೆ ಮಾಡುವ ಮಾವುತ ಸಣ್ಣಯ್ಯ ಹಾಗೂ ಚಿಕಿತ್ಸೆ ನೀಡುತ್ತಿರುವ ಪಶುವೈದ್ಯಾಧಿಕಾರಿ ಡಾ.ನಾಗರಾಜು ಅವರ ಅಭಿಪ್ರಾಯವಾಗಿದೆ.
ದ್ರೋಣನ ನಂತರ ದಸರಾದಲ್ಲಿ ಅಂಬಾರಿ ಹೊತ್ತು ತನ್ನ ಜವಾಬ್ದಾರಿಗೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸಿದ ಬಲರಾಮನ ನಂತರ ಈ ಜವಾಬ್ದಾರಿ ಯಾರು ವಹಿಸಿಕೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ಕೆ.ಗುಡಿ ಅರಣ್ಯ ಪ್ರದೇಶದ ಗಜೇಂದ್ರನಿಗೆ ಬಹುಶಃ ಚಿನ್ನದ ಅಂಬಾರಿ ಹೊರುವ ಅವಕಾಶ ಲಭ್ಯವಾಗುವ ಎಲ್ಲ ಲಕ್ಷಣಗಳು ಕಂಡುಬಂದಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications