ಮೈಸೂರು ದಸರಾ ಕುಸ್ತಿಗೆ ಗರಡಿಮನೆಗಳು ಸಜ್ಜು

ಹಾಗೆನೋಡಿದರೆ ದಸರಾ ಸಂದರ್ಭ ನಡೆಯುವ ವಿವಿಧ ಕಾರ್ಯಕ್ರಮಗಳ ನಡುವೆ ಕುಸ್ತಿಗೂ ಮಹತ್ವದ ಸ್ಥಾನವಿದೆ. ಕುಸ್ತಿ ಪಂದ್ಯಾವಳಿಗಳಿಗೆ ರಾಜಮಹಾರಾಜರ ಕಾಲದ ಇತಿಹಾಸವಿದೆ. ರಾಜರ ಕಾಲದಲ್ಲಿ ಪೈಲ್ವಾನ್ರನ್ನು ಕರೆಸಿ ಪ್ರತಿ ವಾರವೂ ಕುಸ್ತಿ ನಡೆಸಲಾಗುತ್ತಿತ್ತು. ಅಲ್ಲದೆ, ದಸರಾ ಸಂದರ್ಭ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುತ್ತಿದ್ದ ವಜ್ರಮುಷ್ಠಿ ಕಾಳಗ ಖ್ಯಾತಿ ಪಡೆದಿತ್ತು. ಪೈಲ್ವಾನರಿಗೆ ರಾಜರೇ ಆಶ್ರಯ ನೀಡಿ ಪ್ರೋತ್ಸಾಹಿಸುತ್ತಿದ್ದರು. ಹೀಗಾಗಿ ನಗರದಾದ್ಯಂತ ಗರಡಿಮನೆಗಳು ಹುಟ್ಟಿಕೊಂಡಿದ್ದವು.
ಮುಂಜಾನೆ ಚುಮುಚುಮು ಚಳಿಯಲ್ಲಿಯೇ ಗರಡಿ ಮನೆಗೆ ಹೋಗಿ ಅಭ್ಯಾಸ ನಡೆಸುತ್ತಿದ್ದರು. ದಸರಾ ಸಂದರ್ಭ ನಡೆಯುವ ಕುಸ್ತಿ ಪಂದ್ಯದಲ್ಲಿ ತನ್ನ ಬಲ ಪ್ರದರ್ಶಿಸಿ ಜಯಶಾಲಿಯಾದ ಪೈಲ್ವಾನರಿಗೆ ದಸರಾ ಕೇಸರಿ, ದಸರಾ ಕಂಠೀರವ, ದಸರಾ ಕುಮಾರ ಪ್ರಶಸ್ತಿ ನೀಡಲಾಗುತ್ತಿತ್ತು.
ಗರಡಿಗಳ ಆಗರ: ರಾಜರ ಕಾಲದ ನಂತರದ ದಿನಗಳನ್ನು ನೋಡಿದರೆ ಗರಡಿಮನೆಗಳು ತಮ್ಮ ಅಸ್ತಿತ್ವ ಕಳೆದು ಕೊಳ್ಳುತ್ತಿರುವುದನ್ನು ನಾವು ಕಾಣಬಹುದು. ಇತ್ತೀಚೆಗಿನ ವೈಜ್ಞಾನಿಕ ಜಿಮ್ಗಳು ಗರಡಿಮನೆಗಳ ಮೇಲೆ ಪರಿಣಾಮ ಬೀರುತ್ತಿವೆಯೇನೋ ಎಂಬ ಸಂಶಯ ನಮ್ಮನ್ನು ಕಾಡುತ್ತಿದೆ. ಆದರೆ ನಗರಕ್ಕೊಂದು ಸುತ್ತು ಹೊಡೆದರೆ ಸುಮಾರು ನೂರಕ್ಕೂ ಹೆಚ್ಚು ಗರಡಿಮನೆಗಳು ಕಾಣಸಿಗುತ್ತವೆ.
ಸುಣ್ಣದಕೇರಿ ನಾಲಾ ಬೀದಿಯ ಗೋಪಾಲಸ್ವಾಮಿ ಗರಡಿ, ಬಸವೇಶ್ವರ ರಸ್ತೆಯ ಮಹಾಲಿಂಗೇಶ್ವರ ಮಠದ ಗರಡಿ, ಕೆ.ಜಿ.ಕೊಪ್ಪಲು, ಪಡುವಾರಹಳ್ಳಿಯ ಹತ್ತೂ ಜನರ ಗರಡಿ, ಹುಲ್ಲಿನ ಬೀದಿಯ ಈಶ್ವರರಾಯನ ಗರಡಿ, ಫಕೀರ್ ಅಹಮ್ಮದ್ ಸಾಹೇಬರ ಗರಡಿ ಹೀಗೆ ಗರಡಿ ಮನೆಗಳ ಹೆಸರು ಮುಂದುವರೆಯುತ್ತಾ ಹೋಗುತ್ತದೆ. ಇಂತಹ ಗರಡಿಮನೆಗಳಿಂದ ಬೆಟ್ಟದ ಚಿಕ್ಕಣ್ಣ, ಪೈ.ಪಾಪಣ್ಣ, ಪೈ.ಶಂಕರ್ ಚಕ್ರವರ್ತಿ, ಚಿನ್ನ, ಅನಂತ್ ಅವರಂತಹ ನೂರಾರು ಪೈಲ್ವಾನ್ಗಳು ಪ್ರತಿಭೆ ಪ್ರದರ್ಶಿಸಿ ಮೈಸೂರಿನ ಖ್ಯಾತಿಯನ್ನು ಇಮ್ಮಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾವು ಪೈಲ್ವಾನರ ಬಗ್ಗೆ ತಿಳಿಯುತ್ತಾ ಹೋದರೆ ಕುತೂಹಲ ಮೂಡುತ್ತದೆ. ಪೈಲ್ವಾನರ ನಿತ್ಯದ ದಿನಚರಿ, ಅವರ ಊಟ, ತಾಲೀಮು ಎಲ್ಲವೂ ವಿಭಿನ್ನವಾಗಿರುತ್ತದೆ. ದೇಹವನ್ನು ವ್ಯಾಯಾಮ, ಕಸರತ್ತಿನ ಮೂಲಕ ದಂಡಿಸುತ್ತಾರೆ. ಮುಂಜಾನೆ ಎದ್ದು ಗರಡಿಮನೆಗೆ ಹೋಗುವ ಪೈಲ್ವಾನರು ಅಲ್ಲಿರುವ ಪರಿಕರಗಳಾದ ಕಲ್ಲುಗುಂಡು, ಬಳೆ, ಗದೆ, ಕೊಂತ, ಕಂಬಕಟ್ಟೋದು, ಮಣ್ಣಿನಲ್ಲಿ ಪರಸ್ಪರ ಕುಸ್ತಿ ಅಭ್ಯಾಸ ನಡೆಸುವುದಲ್ಲದೆ, ಈ ಸಂದರ್ಭ ಹುಲಿಹೆಜ್ಜೆ, ಡೇಕ್ನಿ, ಕಟಾಪ್, ಹನುಮಾನ್ ದಂಡೆ, ಸುತ್ತಂಡೆ, ಚಪ್ಪಡಿದಂಡೆ, ಬಸ್ಕಿ ಮುಂತಾದ ಕಸರತ್ತುಗಳನ್ನು ಸಹ ನಡೆಸುತ್ತಾರೆ.
ಗರಡಿಮನೆಯಿಂದ ತಾಲೀಮು ನಡೆಸಿ ಬರುವ ಪೈಲ್ವಾನರು ಮನೆಗೆ ಬರುತ್ತಿದ್ದಂತೆಯೇ ಲೀಟರ್ಗಟ್ಟಲೆ ಬಾದಾಮಿ ಬೀಜಗಳ ಮಿಶ್ರಣ ಮಾಡಿದ ಹಾಲು, ಬೆಲ್ಲ ಮತ್ತು ರವೆಯಿಂದ ಮಾಡಿದ ಸಿಹಿ ತಿನಿಸು, ಬೆಣ್ಣೆ ಮುಂತಾದ ಪೌಷ್ಠಿಕ ಆಹಾರಗಳನ್ನು ಸೇವನೆ ಮಾಡುತ್ತಾರೆ. ಮಧ್ಯಾಹ್ನ ಚಪಾತಿ, ರಾಗಿ ಮುದ್ದೆ, ಅನ್ನ ಸಾರು, ಹಾಲು, ಬೆಣ್ಣೆ, ಹಣ್ಣು ಹೀಗೆ ಸಾಗುತ್ತದೆ. ಮೊದಲೆಲ್ಲಾ ಪೈಲ್ವಾನ್ ಇದ್ದಾರೆಂದರೆ ಅದು ಊರಿಗೆ ಹೆಮ್ಮೆಯ ಸಂಗತಿಯಾಗಿರುತ್ತಿತ್ತು, ಅಲ್ಲದೆ, ಎಲ್ಲಾ ರೀತಿಯ ಪ್ರೋತ್ಸಾಹ ನೀಡಿ ಕಳುಹಿಸಲಾಗುತ್ತಿತ್ತು.
ಪ್ರಸ್ತುತ ದಿನಗಳಲ್ಲಿ ಗರಡಿಮನೆಗಳಿಗೆ ತೆರಳುವವರ ಸಂಖ್ಯೆ ಕಡಿಮೆಯಾಗಿರಬಹುದು ಆದರೆ ಅದರ ಘನತೆ ಗೌರವ ಕಡಿಮೆಯಾಗಿಲ್ಲ ಎನ್ನಬಹುದು ಹಾಗಾಗಿ ಇಂದಿಗೂ ದಸರಾದಲ್ಲಿ ಕುಸ್ತಿ ಪಂದ್ಯಾವಳಿಗೆ ತನ್ನದೇ ಆದ ಸ್ಥಾನಮಾನವಿದೆ. ಈ ಬಾರಿ ಕುಸ್ತಿ ಪಂದ್ಯಾವಳಿ ಅಕ್ಟೋಬರ್ 8 ರಿಂದ ಪ್ರಾರಂಭವಾಗಲಿದೆ. ಅ.8 ರಿಂದ 10 ರವರೆಗೆ 29ನೇ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ನಡೆಯಲಿದೆ.
ಅ.11 ರಂದು 3ನೇ ರಾಜ್ಯಮಟ್ಟದ ಮಹಿಳಾ ಕುಸ್ತಿ ಪಂದ್ಯಾವಳಿ ಹಾಗೂ 16 ವರ್ಷ ಕೆಳಗಿನ ಬಾಲಕ ಮತ್ತು ಬಾಲಕಿಯರ ಕುಸ್ತಿ ಪಂದ್ಯಾವಳಿ, ಅ.12 ಮತ್ತು 13 ರಂದು 5ನೇ ರಾಷ್ಟ್ರಮಟ್ಟದ ಪುರುಷರ ಮಹಿಳೆಯರ ಕುಸ್ತಿ ಅಲ್ಲದೆ, ದಸರಾ ಕಿಶೋರ, ದಸರಾ ಕುಮಾರ, ದಸರಾ ಕೇಸರಿ, ದಸರಾ ಕಂಠೀರವ ಪ್ರಶಸ್ತಿಗೆ ಪಂದ್ಯಾವಳಿ ನಡೆಯಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications