ವಿಶ್ವವಿಖ್ಯಾತ ಜಂಬೂ ಸವಾರಿಗೆ ಮೈಸೂರು ಸಜ್ಜು

ನಾಳೆಯ ವಿಶ್ವವಿಖ್ಯಾತ ಜಂಬೂಸವಾರಿ ವೀಕ್ಷಣೆಗೆ ಕರ್ನಾಟಕ ಮತ್ತು ವಿಶ್ವದ ಎಲ್ಲೆಡೆಯಿಂದ ರಾಜ್ಯದ ಸಾಂಸ್ಕೃತಿಕ ರಾಜಧಾನಿಗೆ ಆಗಮಿಸಿರುವ ಜನತೆ ಕಾತರದಿಂದ ಕಾಯುತ್ತಿದ್ದಾರೆ. ಈ ದಸರಾದ ವಿಶೇಷತೆಯೇನೆಂದರೆ, ಇದು 400ನೇ ಮೈಸೂರು ದಸರಾ. ಒಟ್ಟು 12 ಅಲಂಕೃತ ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸಲಿದ್ದು 4900 ಕಿ.ಗ್ರಾಂ. ತೂಕದ ಬಲರಾಮ ಚಾಮುಂಡೇಶ್ವರಿ ದೇವಿ ಕುಳಿತಿರುವ 750 ಕಿ.ಗ್ರಾಂ. ತೂಕದ ಬಂಗಾರದ ಅಂಬಾರಿಯನ್ನು ಹೊರಲಿದ್ದಾನೆ. (ಚಿತ್ರಪಟ ನೋಡಿರಿ)
ಮಧ್ಯಾಹ್ನ 1.45ಕ್ಕೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳುವ 32 ಸ್ತಬ್ದ ಚಿತ್ರಗಳು ಮುಂದೆ ಸಾಗಿದ ನಂತರ ಅರಮನೆಯ ಒಳಭಾಗದಲ್ಲಿ ಬಲರಾಮನ ಮೇಲಿನ ಅಂಬಾರಿಯಲ್ಲಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಾಗುವುದು. ಬಳಿಕ ಜಂಬೂಸವಾರಿ ಸಯ್ಯಾಜಿರಾವ್ ರಸ್ತೆಯ ಮೂಲಕ ಬನ್ನಿಮಂಟಪ ತಲುಪಲಿದೆ. ಅಲ್ಲಿ ಬನ್ನಿ ಕಡಿಯುವದರೊಂದಿಗೆ ದಸರಾಕ್ಕೆ ತೆರೆ ಬೀಳಲಿದೆ.
ಜಂಬೂಸವಾರಿಯಲ್ಲಿ ಕ್ರಿ.ಶ. 345ರಿಂದ 1900ರವರೆಗಿನ ವಿವಿಧ ಹಂತಗಳ ಇತಿಹಾಸ ಸಾರುವ ಸ್ತಬ್ದ ಚಿತ್ರಗಳು ಅಲ್ಲದೆ, ವಿವಿಧ ಜಿಲ್ಲೆಗಳಿಂದ ಸ್ತಬ್ದ ಚಿತ್ರಗಳು, 72 ಕಲಾತಂಡಗಳು, 5 ರಾಜ್ಯಗಳ 7 ಕಲಾತಂಡಗಳು ಪಾಲ್ಗೊಳ್ಳಲಿವೆ. ಸಂಜೆ ಬನ್ನಿಮಂಟಪದಲ್ಲಿ ಪಂಜಿನ ಕವಾಯಿತು ಪ್ರದರ್ಶನ, ಮೋಟಾರ್ ಸೈಕಲ್ ರೇಸ್, ಲೇಸರ್ ಶೋ ನಡೆಯಲಿದೆ. ಪಂಜಿನ ಕವಾಯತನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಉದ್ಘಾಟಿಸಲಿದ್ದಾರೆ. ಆಕರ್ಷಣೆಯ ಕೇಂದ್ರವಾಗಿರುವ ಮೈಸೂರು ಅರಮನೆ ಸಂಜೆ ವೇಳೆ 1 ಲಕ್ಷ ದೀಪಗಳಿಂದ ಝಗಮಗಿಸಲಿದೆ.
ಬಿಗಿಭದ್ರತೆ : ಜಂಬೂ ಸವಾರಿ ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಸುಸೂತ್ರವಾಗಿ ನಡೆಯಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ದಸರಾ ಹಿನ್ನೆಲೆಯಲ್ಲಿ ಅರಮನೆ ನಗರಿಯಾದ್ಯಂತ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆಗೆ 4000 ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರೊಂದಿಗೆ ಹೆಚ್ಚುವರಿಯಾಗಿ 600ಕ್ಕೂ ಹೆಚ್ಚು ಪೊಲೀಸರು, 25 ಕೆಎಸ್ಆರ್ಪಿ ತುಕಡಿಗಳು, 3 ಡಿಸಿಪಿಗಳು, 12 ಎಸ್ಪಿ ಕೇಡರ್ ಅಧಿಕಾರಿಗಳು ಭದ್ರತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕದ ಜನತೆ ಮತ್ತು ಕನ್ನಡ ಬಾಂಧವರಿಗೆಲ್ಲ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications