ವೀರನಹೊಸಹಳ್ಳಿಯಿಂದ ಮೈಸೂರಿಗೆ ಗಜಪಯಣ

ಮೈಸೂರು ದಸರಾದ ರೂವಾರಿಗಳು ಆನೆಗಳೇ ಆಗಿರುವುದರಿಂದ ಅವುಗಳನ್ನು ಎರಡು ತಂಡವಾಗಿ ವಿವಿಧ ಸಾಕಾನೆ ಶಿಬಿರಗಳಿಂದ ತರಲಾಗುತ್ತಿದ್ದು, ವೀರನಹೊಸಹಳ್ಳಿಯಲ್ಲಿ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಬಲರಾಮ ನೇತೃತ್ವದ ತಂಡಕ್ಕೆ ಸಕಲ ಗೌರವಗಳೊಂದಿಗೆ ಬೀಳ್ಕೊಡುವುದು ಹಿಂದಿನಿಂದಲೂ ನಡೆದು ಬಂದಿದೆ.
ಅದರಂತೆ ಬೆಳಿಗ್ಗೆ 11 ಗಂಟೆಗೆ ಬಲರಾಮ ನೇತೃತ್ವದ ಅಭಿಮನ್ಯು, ಮೇರಿ, ಸರಳ, ಅರ್ಜುನ, ಗಂಗಾರನ್ನೊಳಗೊಂಡ ಗಜಪಡೆಯ ಪಯಣಕ್ಕೆ ಚಾಲನೆ ನೀಡಲಾಯಿತು. ಸಮವಸ್ತ್ರ ಧರಿಸಿದ ಮಾವುತರು ಹಾಗೂ ಗಜಪಡೆಯ ಪಯಣದಲ್ಲಿ ಕಂಸಾಳೆ, ಡೊಳ್ಳುಕುಣಿತ, ವೀರಗಾಸೆಯನ್ನೊಳಗೊಂಡ ಜಾನಪದ ತಂಡಗಳ ಕಲಾ ಪ್ರದರ್ಶನ ಗಮನಸೆಳೆಯಿತು.
ಈ ಸಂದರ್ಭ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಎಚ್.ವಿಶ್ವನಾಥ್, ಗೃಹಮಂಡಳಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ವಸ್ತ್ರದ್, ವಿಧಾನಪರಿಷತ್ ಸದಸ್ಯ ಚಿಕ್ಕಮಾದು, ಜಿ.ಪಂ.ಅಧ್ಯಕ್ಷೆ ಸುನೀತ ವೀರಪ್ಪಗೌಡ, ಸಿಇಓ ಸತ್ಯವತಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ವೀರನಹೊಸಳ್ಳಿಯಿಂದ ಹೊರಟ ಗಜಪಡೆ ಮೈಸೂರನ್ನು ತಲುಪಲಿದ್ದು, ಆಗಸ್ಟ್ 11ರಂದು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು. ಬಳಿಕ ದಸರಾ ತಾಲೀಮು ದಿನನಿತ್ಯ ನಡೆಯಲಿದೆ. ಶ್ರೀರಾಮ, ಕಾಂತಿ, ಕೋಕಿಲ, ಹರ್ಷ, ವಿಕ್ರಮಗಳನ್ನೊಳಗೊಂಡ ಇನ್ನೊಂದು ಗಜಪಡೆಯು ಸೆಪ್ಟಂಬರ್ನಲ್ಲಿ ಮೈಸೂರಿಗೆ ಆಗಮಿಸಲಿವೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications