ಬಲರಾಮ ಗಜೇಂದ್ರ ಅಭಿಮನ್ಯು ಅರ್ಜುನ ಮೇರಿ

ಬಲರಾಮ : ಚಿನ್ನದ ಅಂಬಾರಿ ಹೊತ್ತು ಮುನ್ನಡೆಯುವ ಬಲರಾಮ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿಗೋಡು ಆನೆ ಶಿಬಿರದಿಂದ ಬಂದಿದ್ದು, ಈಗ 53 ವರ್ಷ. ಸೌಮ್ಯ ಸ್ವಭಾವದ ಈತ 2.70 ಮೀಟರ್ ಎತ್ತರ, 3.77 ಮೀ. ಉದ್ದ, ಸುಮಾರು 4900 ಕೆ.ಜಿ. ತೂಕವಿದ್ದಾನೆ. ಹದಿನಾರು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದು, ಕಳೆದ ಹನ್ನೆರಡು ವರ್ಷದಿಂದ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ ನಿರ್ವಹಿಸುತ್ತಿದ್ದಾನೆ. ಬಲರಾಮನನ್ನು 1987ರಲ್ಲಿ ಕೊಡಗು ಜಿಲ್ಲೆಯ ಕಟ್ಟೆಪುರ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.
ಅರ್ಜುನ : ಕಳೆದ 10 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಅರ್ಜುನನಿಗೆ ಈಗ 51 ವರ್ಷ. ಈತನ ಎತ್ತರ 2.80 ಮೀ, ಉದ್ದ 3.75 ಮೀ, 4750 ಕೆ.ಜಿ. ತೂಕವನ್ನು ಹೊಂದಿದ್ದಾನೆ. 1968ರಲ್ಲಿ ಕೊಡಗು ಜಿಲ್ಲೆಯ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಪಿಟ್ ಮೆಥಡ್ನಿಂದ ಸೆರೆಹಿಡಿದಿದ್ದು, ಹಿಂದಿನ ಅಂಬಾರಿ ಆನೆ ದ್ರೋಣನ ನಂತರ ಒಂದು ಬಾರಿ ಚಿನ್ನದ ಅಂಬಾರಿ ಹೊತ್ತ ಅನುಭವವಿದೆ. ಪ್ರಸ್ತುತ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳ್ಳೆ ಆನೆ ಶಿಬಿರದಿಂದ ಈತ ಬಂದಿದ್ದು, ದಸರಾ ಮಹೋತ್ಸವದಲ್ಲಿ ಪತಾಕೆ ಆನೆಯ ಜವಾಬ್ದಾರಿ ವಹಿಸುತ್ತಿದೆ.
ಮೇರಿ : 55 ವರ್ಷ ವಯಸ್ಸಿನ ಹೆಣ್ಣಾನೆ ಮೇರಿ 2.36 ಮೀಟರ್ ಎತ್ತರವಿದ್ದು, 3.34 ಮೀ ಉದ್ದ ಹಾಗೂ 3180 ಕೆ.ಜಿ. ತೂಕವಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ಸುಂಕದಕಟ್ಟೆ ಆನೆ ಶಿಬಿರದಿಂದ ಬಂದಿದೆ. ಇದನ್ನು 1977ರಲ್ಲಿ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ. ಇದುವರೆಗೆ 10 ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದು ಬಲರಾಮನಿಗೆ ಕುಮ್ಕಿ ಆನೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಗಜೇಂದ್ರ : ಚಾಮರಾಜನಗರ ವನ್ಯಜೀವಿ ವಿಭಾಗದ ಕೆ.ಗುಡಿ ಆನೆ ಶಿಬಿರದಿಂದ ಬಂದಿರುವ ಗಜೇಂದ್ರನಿಗೆ ಈಗ 56 ವರ್ಷ. 2.84 ಮೀ. ಎತ್ತರ, 3.80 ಮೀ. ಉದ್ದ ಹಾಗೂ 4570 ಕೆ.ಜಿ. ತೂಕವಿದ್ದಾನೆ. ಈತನನ್ನು 1987ರಲ್ಲಿ ಕೊಡಗು ಜಿಲ್ಲೆಯ ಕಟ್ಟೆಪುರ ಅರಣ್ಯ ಪ್ರದೇಶದಲ್ಲಿ ಅರವಳಿಕೆ ಔಷಧಿ ನೀಡುವ ಮೂಲಕ ಸೆರೆಹಿಡಿಯಲಾಗಿದೆ. ಕಾಡಾನೆಯನ್ನು ಪಳಗಿಸುವುದರಲ್ಲಿ ಸೈ ಎನಿಸಿ ಕೊಂಡಿರುವ ಈತ ಮಹಾರಾಜರ ಅರಮನೆಯ ಪೂಜೆಯ ವಿಧಿ ವಿಧಾನಗಳಲ್ಲಿ ಭಾಗವಹಿಸುವ ಪಟ್ಟದ ಆನೆಯಾಗಿ ಕಾರ್ಯನಿರ್ವಹಿಸುತ್ತಿದ್ದು, 15 ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡ ಅನುಭವವಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications