ನವರಾತ್ರಿ 2ನೇ ದಿನ : ಭುವನೇಶ್ವರಿಯ ನೆನೆ ಮಾನಸವೆ
ನೆನ್ನೆ ನವರಾತ್ರಿ ಹಬ್ಬದ ಮೊದಲ ದಿನದ ಬಗ್ಗೆ ಬರೆದಿದ್ದೆ. ಇವತ್ತು ಇನ್ನು ದಸರೆಯ ಎರಡನೆಯ ದಿವಸ. ನಮಗೆಲ್ಲ ತಿಳಿದ ಹಾಗೆ ನವರಾತ್ರಿ ಕನ್ನಡಿಗರಿಗೆ ದೊಡ್ಡ ಹಬ್ಬ. ವಿಜಯ ನಗರದ ಅರಸರ ಕಾಲದಲ್ಲಿ ದಸರೆಯ ಸಂಭ್ರಮ ನಡೆಯುತ್ತಿದ್ದದ್ದರ ವಿಷಯವಾಗಿ, ಆ ಕಾಲದಲ್ಲಿ ಬಂದಿದ್ದ ಪರ್ಶಿಯನ್ ಹಾಗೂ ಫ್ರೆಂಚ್ ಯಾತ್ರಿಕರ ಬರಹಗಳಿಂದ ತಿಳಿದುಬರುತ್ತದೆ. ಆ ವೈಭವಕ್ಕೆ, ಈಗಲೂ ಹಂಪೆಯಲ್ಲಿರುವ ಮಹಾನವಮಿ ದಿಬ್ಬವೂ ಸಾಕ್ಷಿಯಾಗಿದೆ. ನಂತರ, ಈ ಸಂಪ್ರದಾಯ ಮೈಸೂರಿನ ಅರಸರಲ್ಲೂ ಮುಂದುವರೆದದ್ದು ಆಶ್ಚರ್ಯವೇನಿಲ್ಲ.
ಮೈಸೂರರಸರು ದಸರೆಯ ಆಚರಣೆಯೊಂದರಲ್ಲೇ ಅಲ್ಲ; ಅವರು ವಿವಿಧ ಕಲಾಪ್ರಕಾರಗಳಿಗೆ ಕೊಡುತ್ತಿದ್ದ ಪ್ರೋತ್ಸಾಹದಲ್ಲೂ ಆ ಕಾಲದ ರಾಜ್ಯಗಳ ಮುಂಚೂಣಿಯಲ್ಲಿದ್ದರು. 18-19 ನೇ ಶತಮಾನಗಳಲ್ಲಿ ಮೈಸೂರು ವೀಣೆಯ ಬೆಡಗೆಂದಾಗುವುದಕ್ಕೂ ಇದೇ ಕಾರಣ. ಹಲವಾರು ವಿದ್ವಾಂಸರು ಹಾಗೇ ಮೈಸೂರರಸರ ಆಶ್ರಯ ಅರಸಿ ಬಂದದ್ದೂ ಉಂಟು. ಹಾಗೆ ಬಂದವರಲ್ಲಿ, ಹರಿಕೇಶನಲ್ಲೂರು ಮುತ್ತಯ್ಯ ಭಾಗವತರು ಪ್ರಮುಖರು.
ಕೃಷ್ಣರಾಜ ಒಡೆಯರ ಆಸ್ಥಾನ ವಿದ್ವಾಂಸರಾಗಿ ಇವರು ಬಂದದ್ದರ ಬಗ್ಗೆ ಒಂದು ಕುತೂಹಲಕಾರಿ ಸಂಗತಿಯೊಂದಿದೆ. ಅದೇನೋ, ಮುತ್ತಯ್ಯ ಭಾಗವತರಿಗೆ ಮಹಾರಾಜರ ಮುಂದೆ ಕಚೇರಿ ಕೊಡುವ ಅವಕಾಶ ಸಿಕ್ಕ ದಿನ ಅವರ ಗಂಟಲಿಗೆ ಏನೋ ತೊಂದರೆಯಾಗಿ ಕಾರ್ಯಕ್ರಮ ಹೆಚ್ಚು ಕಳೆಕಟ್ಟಲಿಲ್ಲ. ಸಾಧಾರಣವಾಗಿ ಅರಮನೆಯಲ್ಲಿ ಹಾಡುವ ವಿದ್ವಾಂಸರಿಗೆ ಅವರಿಗೆ ತಕ್ಕ ಮರ್ಯಾದೆ ಕೊಡಲಾಗುತ್ತಿತ್ತು. ಆ ರೀತಿ ಅವರಿಗೂ ಮರ್ಯಾದೆ ಮಾಡಿ ಕಳಿಸಲಾಯಿತಂತೆ. ಭಾಗವತರಿಗೆ ಸ್ವಲ್ಪ ನಿರಾಸೆಯೇ ಆಯಿತು.
ನಂತರ ಕೆಲವು ದಿನಗಳ ನಂತರ, ಅವರು ಚಾಮುಂಡಿ ಬೆಟ್ಟದ ಮೇಲೆ ದೇವಾಲಯದಲ್ಲಿ ತಮ್ಮ ಪಾಡಿಗೆ ಹಾಡಿಕೊಳ್ಳುತ್ತಿದ್ದಾಗ ಆ ದಿನ ದೇವಿಯ ದರ್ಶನಕ್ಕೆ ಬಂದ ಒಡೆಯರಿಗೆ ಅದು ಕೇಳಿ ಅವರ ಮೇಲೆ ಬಂದಿದ್ದ ಅಭಿಪ್ರಾಯ ಬದಲಾಯಿತಂತೆ. ನಂತರ ಅವರನ್ನು ತಮ್ಮ ಆಸ್ಥಾನ ವಿದ್ವಾಂಸರನ್ನಾಗಿ ಮಾಡಿಕೊಂಡರಂತೆ. ಇದು ನಡೆದದ್ದು 1927ರಲ್ಲಿ.
ಮಹಾರಾಜರು ತಮ್ಮ ಇಷ್ಟದೇವಿ ಮೈಸೂರಿನ ನಗರ ದೇವತೆ, ಚಾಮುಂಡಿಯ ಮೇಲೆ 108 ಕೃತಿಗಳನ್ನು ರಚಿಸಲು ಕೇಳಿದರಂತೆ, ಅಂತೆಯೇ ಮುತ್ತಯ್ಯ ಭಾಗವತರು 108 ಕೃತಿಗಳನ್ನು ರಚಿಸಿದರು - ಕನ್ನಡದಲ್ಲಿರುವ ಈ ಕೃತಿಗಳ ಸಾಹಿತ್ಯವನ್ನು ದೇವೋತ್ತಮ ಜೋಯಿಸರೆಂಬ ಅರಮನೆಯ ವಿದ್ವಾಂಸರು ಬರೆದುಕೊಟ್ಟರಂತೆ.
ಇವತ್ತು ನಾನು ಕೇಳಿಸುವ ರಚನೆ - ಭುವನೇಶ್ವರಿಯ ನೆನೆ ಮಾನಸವೆ; ಮೋಹನ ಕಲ್ಯಾಣಿ ರಾಗ, ಆದಿತಾಳದಲ್ಲಿದೆ. ಈ ರಾಗದಲ್ಲಿ ಸಂಗೀತರಚನೆ ಮಾಡಿದವರಲ್ಲಿ ಮುತ್ತಯ್ಯಭಾಗವತರೇ ಮೊದಲಿಗರು. ಅತಿ ಪ್ರಸಿದ್ಧ ವಾದ ಮೋಹನ, ಹಾಗೂ ಕಲ್ಯಾಣಿ ಈ ಎರಡು ರಾಗಗಳನ್ನು ಮೇಳೈಸುವುದರಿಂದ ಈ ರಾಗ ಉಂಟಾಗಿದೆ. ಕೃತಿಯ ಸಾಹಿತ್ಯ, ಸ್ವಲ್ಪ ಸಂಸ್ಕೃತ ಹೆಚ್ಚಾಗೇ ಇರುವಂತಹ ಕನ್ನಡಭಾಷೆಯಲ್ಲಿದೆ.
ಈಗ ಇದನ್ನು ಡಾ.ನಾಗವಲ್ಲಿ ನಾಗರಾಜ್ ಈ ಕೆಳಗಿನ ಕೊಂಡಿಯಲ್ಲಿ ಕೇಳಬಹುದು:
ನಾಳೆ, ದಸರೆಯ ಮತ್ತೊಂದು ವಿಶೇಷ ರಚನೆಯೊಂದಿಗೆ ಸಿಗೋಣ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ













Click it and Unblock the Notifications