ನವರಾತ್ರಿಯ ಮೊದಲ ದಿನ : ತ್ಯಾಗರಾಜರ ಕೃತಿ
ಇಂದು ನವರಾತ್ರಿಯ ಮೊದಲ ದಿನ. ದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ್ಲೂ ಗೊಂಬೆಗಳ ಅಲಂಕಾರ. ಅಲ್ಲಲ್ಲಿ ಸಂಗೀತೋತ್ಸವಗಳು - ಹೀಗಾಗಿ ಧಾರ್ಮಿಕ ಕಾರಣಗಳಿಗಿಂತ, ಸಾಂಸ್ಕೃತಿಕ ಕಾರಣಗಳಿಗೆ ನವರಾತ್ರಿ ನನಗೆ ಮೆಚ್ಚುಗೆಯಾಗುವ ಹಬ್ಬ.
ಮೈಸೂರಿನಂತೆಯೇ, ವೈಭವದ ನವರಾತ್ರಿ ನಡೆಯುವ ಊರು ತಿರುವನಂತಪುರ. ಅಲ್ಲಿಯ ಪದ್ಮನಾಭ ದೇವಸ್ಥಾನದ ಪಕ್ಕದ ನವರಾತ್ರಿ ಮಂಡಪಂನಲ್ಲಿ, ಇನ್ನೂರಕ್ಕೂ ಹೆಚ್ಚು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಗೀತೋತ್ಸವದ ಆಚರಣೆ ಇದೆ. ಮಹಾರಾಜ ಸ್ವಾತಿ ತಿರುನಾಳ್ ಕರ್ನಾಟಕ ಸಂಗೀತದ ಪ್ರಮುಖ ವಾಗ್ಗೇಯಕಾರರಲ್ಲೊಬ್ಬರು. ಅವರು ನವರಾತ್ರಿಯ ಸಂದರ್ಭದಲ್ಲೇ ಹಾಡಬೇಕೆಂದು ರಚಿಸಿರುವ ಒಂಬತ್ತು ದೇವೀ ಪರವಾದ ಕೃತಿಗಳನ್ನು, ಈ ಸಂಗೀತೋತ್ಸವದಲ್ಲಿ ಪ್ರತಿ ದಿನ ತಲಾ ಒಂದು ಕೃತಿಯನ್ನು ವಿಸ್ತರಿಸಿ ಹಾಡಲಾಗುತ್ತೆ. ಈ ರಚನೆಗಳಿಗೆ ನವರಾತ್ರಿ ಕೃತಿಗಳೆಂದೇ ಕರೆಯಲಾಗುತ್ತೆ. ದಸರೆಯ ಮೊದಲ ದಿವಸ ಸಂಜೆ ಹಾಡುವ ಕೃತಿ ಶಂಕರಾಭರಣ ರಾಗದ ದೇವಿ ಜಗಜ್ಜನನಿ ಎಂಬುದು.

ಈ ಸಂದರ್ಭದಲ್ಲೇ, ನನಗೆ ಇಷ್ಟವಾದ ಕೆಲವು ರಚನೆಗಳನ್ನೂ ಸಂಗೀತಾಸಕ್ತರೊಂದಿಗೆ ಹಂಚಿಕೊಳ್ಳೋಣವೆನಿಸಿತು. ಪ್ರತಿ ದಿನ ಒಂದು ಕೃತಿಯ ಬಗ್ಗೆ ಸ್ಬಲ್ಪ ಮಾಹಿತಿಯನ್ನೂ, ಸಾಧ್ಯವಾದರೆ ಕೇಳಲು ಕೊಂಡಿಗಳನ್ನೂ ಕೊಡುವ ಇರಾದೆ ನನ್ನದು. ನವರಾತ್ರಿ ಆದ್ದರಿಂದ, ದೇವಿಯ ವಿವಿಧ ರೂಪಗಳ (ಪಾರ್ವತಿ, ಸರಸ್ವತಿ, ದುರ್ಗೆ, ಇತ್ಯಾದಿ) ಬಗ್ಗೆ ಇರುವ ಕೃತಿಗಳಿವು ಅನ್ನುವುದನ್ನು ಬಿಟ್ಟರೆ, ಯಾವುದೇ ಕ್ರಮವನ್ನು ನಾನು ಅನುಸರಿಸುತ್ತಿಲ್ಲ.
ಮೊದಲ ದಿವಸ ನಾನು ಆಯುತ್ತಿರುವ ಕೃತಿ ಕಲ್ಯಾಣಿ ರಾಗದ ತ್ಯಾಗರಾಜರ ಕೃತಿ - ಸುಂದರಿ ನೀ ದಿವ್ಯರೂಪಮುನು ಎಂಬುದು. ತ್ಯಾಗರಾಜರು ತಮಿಳುನಾಡಿನ ಮಧ್ಯಭಾಗದಲ್ಲಿ, ತಂಜಾವೂರಿನ ಬಳಿ ತಿರುವಾರೂರಿನಲ್ಲಿದ್ದವರು. ಒಮ್ಮೆ ತಮ್ಮ ಶಿಷ್ಯರಾದ ವೀಣಾ ಕುಪ್ಪಯ್ಯರ್ ಅವರ ಮನೆಗೆ ಅಹ್ವಾನಿತರಾಗಿ ಅವರಿದ್ದ ಚೆನ್ನಪಟ್ಟಣಂ(ಚೆನ್ನೈ, ಮದ್ರಾಸು)ಗೆ ಪ್ರವಾಸ ಕೈಗೊಂಡಿದ್ದರು. ಆಗ, ಅಲ್ಲೇ ಬಳಿಯಿರುವ ತಿರುವೊಟ್ಟ್ರಿಯೂರ್ ಎಂಬ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದರು. ಈ ಊರು, ಈಗ ಮದ್ರಾಸಿಗೇ ಸೇರಿಕೊಂಡಂತೆ, ಊರಿನ ಉತ್ತರಭಾಗದಲ್ಲಿದೆ. ಅಲ್ಲಿರುವ ತ್ರಿಪುರಸುಂದರಿಯ ಮೇಲೆ ಐದು ಕೃತಿಗಳನ್ನು ರಚಿಸಿದರು. ಇವು ತಿರುವೊಟ್ಟ್ರಿಯೂರ್ ಪಂಚರತ್ನ ಕೃತಿಗಳು ಎಂದೇ ಹೆಸರುವಾಸಿಯಾಗಿವೆ.
ಕಲ್ಯಾಣಿ ರಾಗ 15-16ನೇ ಶತಮಾನಗಳಲ್ಲಿ ಪ್ರಚಲಿತದಲ್ಲಿದ್ದರೂ, ಅದಕ್ಕೆ ಅಷ್ಟಾಗಿ ಪಂಡಿತರ ಪ್ರಶಸ್ತಿ ದೊರಕಿರಲಿಲ್ಲವೆಂದು ತೋರುತ್ತದೆ. ಹಾಗೆಂದೇ, ವೆಂಕಟಮಖಿಯಂತಹ ಶಾಸ್ತ್ರಜ್ಞರು ಈ ರಾಗವನ್ನು ಮುಸಲ್ಮಾನರಿಗೆ ಪ್ರಿಯವಾದ ರಾಗ -ಎಂದು ಅದಕ್ಕೆ ಇರುವ ಉತ್ತರಾದಿ ಮತ್ತು ಪರ್ಶಿಯನ್ ಸಂಗೀತದ ಸಂಬಂಧಗಳನ್ನು ಹೇಳಿ ತೋರಿಸಿದ್ದಾರೆ. ಆದರೆ, ಕಾಲಾನುಕ್ರಮದಲ್ಲಿ ಅದು ಕರ್ನಾಟಕ ಸಂಗೀತದ ವಾಗ್ಗೇಯಕಾರರಿಗೆ ಬಹಳ ಪ್ರೀತಿಯ ರಾಗವೇ ಆಗಿಹೋಯಿತು.
ತ್ಯಾಗರಾಜರೊಬ್ಬರೇ ಸುಮಾರು ಮೂವತ್ತಕ್ಕೂ ಹೆಚ್ಚು ರಚನೆಗಳನ್ನು ಕಲ್ಯಾಣಿ ರಾಗದಲ್ಲಿ ರಚಿಸಿದ್ದಾರೆ. ಅವುಗಳಲ್ಲಿ ಒಂದು ಉತ್ತಮ ರಚನೆ ಸುಂದರಿ ನೀ ದಿವ್ಯ ರೂಪಮುನು. ಆದಿತಾಳದಲ್ಲಿ ನಿಬದ್ಧವಾಗಿರುವ ಈ ಕೃತಿಯ ಸಾಹಿತ್ಯ ತೆಲುಗಿನಲ್ಲಿದೆ. ಈ ರಚನೆಯಲ್ಲಿ ತ್ಯಾಗರಾಜರು ತಿರುವೊಟ್ಟ್ರಿಯೂರಿನ ತ್ರಿಪುರ ಸುಂದರಿಯನ್ನು ನೋಡಿದ ತಮ್ಮ ಭಾಗ್ಯವನ್ನು ಬಡವನಿಗೆ ಸಿರಿಬಂದಂತೆ ಎಂದು ವರ್ಣಿಸಿದ್ದಾರೆ. ಈ ರಚನೆಯನ್ನು ನೀವು ಇಲ್ಲಿ ಕೇಳಬಹುದು:
[ಕೃಪೆ : ಹಂಸ ನಾದ]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications