ಕುದ್ರೋಳಿ ದೇವಾಲಯದಲ್ಲಿ ಮಂಗಳೂರು ದಸರಾ ವೈಭವಕ್ಕೆ ಚಾಲನೆ
ಮಂಗಳೂರು, ಸೆಪ್ಟೆಂಬರ್ 21 : ಕರಾವಳಿ ನಗರಿ ಮಂಗಳೂರಿನಲ್ಲೂ ವೈಭವದ ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಕುದ್ರೋಳಿ ಗೋಕರ್ಣನಾಧೇಶ್ವರ ಕ್ಷೇತ್ರದಲ್ಲಿ ಶಕ್ತಿಯ ಪ್ರತೀಕವಾದ ನವದುರ್ಗೆಯರ ಪ್ರತಿಷ್ಟಾಪನೆಯ ಮೂಲಕ ನವರಾತ್ರಿ ಉತ್ಸವಕ್ಕೆ ಬುಧವಾರ ಚಾಲನೆ ದೊರೆತಿದೆ.
ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ದಸರಾ ಉತ್ಸವಕ್ಕೆ ಚಾಲನೆ ನೀಡಿದರು. ಕಡಲ ತಡಿಯ ಮಂಗಳೂರಿನಲ್ಲಿ ಈಗ ನವರಾತ್ರಿ ಉತ್ಸವದ ಸಡಗರ.

ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡು ಪುಣ್ಯಾಹ ಹೋಮ, ನವಕಲಶಾಭಿಷೇಕದ ಬಳಿಕ ಶಕ್ತಿಯ ಪ್ರತೀಕವಾದ ನವದುರ್ಗೆಯರೊಂದಿಗೆ ಶಾರದಾ ದೇವಿಯ ಪ್ರತಿಮೆಯನ್ನು ಪ್ರತಿಷ್ಟಾಪಿಸಿ ಪೂಜೆ ಸಲ್ಲಿಸಿ ಮಂಗಳೂರಿನ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಮಂಗಳೂರು ದಸರಾದ ವಿಶಿಷ್ಟ ಆಕರ್ಷಣೆ ನವದುರ್ಗೆಯರ ಪ್ರತಿಷ್ಟಾಪನೆ, ಮಂಗಳೂರಿನ ಕುದ್ರೋಳಿ ದೇವಾಲಯದಲ್ಲಿ ಸ್ವರ್ಗವೇ ಧರೆಗಿಳಿದು ಬಂದಂತಿದೆ.

ಶಕ್ತಿಯ ರೂಪಗಳಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ ಮತ್ತು ಸಿದ್ದಿಧಾತ್ರಿ ಹಾಗೂ ವಿಘ್ನನಿವಾರಕ ಗಣೇಶನನ್ನು ಇಲ್ಲಿ ಪ್ರತಿಷ್ಟಾಪಿಸಿ ವೈಭವಯುತವಾಗಿ 9 ದಿನಗಳ ಕಾಲ ಆರಾಧಿಸಲ್ಪಡುತ್ತಿರುವುದು ಇಲ್ಲಿನ ವೈಶಿಷ್ಟ್ಯ.
ಇಂದಿನಿಂದ ಸಪ್ಟೆಂಬರ್30 ವರೆಗೆ ನಡೆಯುವ ಈ ನವರಾತ್ರಿ ಉತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಿದ್ದು, ದೇಶ ವಿದೇಶಗಳಿಂದ ಪ್ರವಾಸಿಗರು ಈ ಮಂಗಳೂರು ದಸರಾ ಉತ್ಸವನ್ನುಕಣ್ತುಂಬಿಕೊಳ್ಳುತ್ತಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications