Mysuru Dasara 2023: ನಾಡಹಬ್ಬಕ್ಕೆ ಮುಹೂರ್ತ ಫಿಕ್ಸ್, ದಿನಾಂಕಗಳ ವಿವರ ತಿಳಿಯಿರಿ
ಮೈಸೂರು, ಜುಲೈ, 07: ಇಡೀ ರಾಜ್ಯದ ಜನತೆ ಕಾತುರದಿಂದ ಕಾಯುತ್ತಿದ್ದ ನಾಡಹಬ್ಬ ಮೈಸೂರು ದಸರಾ 2023ಕ್ಕೆ ಮುಹೂರ್ತ ನಿಗದಿಯಾಗಿದೆ. ಹಾಗಾದರೆ ಯಾವಾಗ ಆರಂಭ ಮತ್ತು ಎಲ್ಲಿಯವರೆಗೆ ಹಬ್ಬವನ್ನು ಆಚರಿಸಲಾಗುತ್ತದೆ ಅನ್ನುವ ವಿವರವನ್ನು ಇಲ್ಲಿ ಗಮನಿಸಿ.
ದಸರಾ ಮಹೋತ್ಸವದ ಕಾರ್ಯಸೂಚಿಯನ್ನು ಅರಮನೆ ಮಂಡಳಿ ಕಚೇರಿಯಲ್ಲಿ ಗುರುವಾರ (ಜುಲೈ 06) ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿ ಬಿಡುಗಡೆ ಮಾಡಲಾಯಿತು. ಈ ಬಾರಿ 2023ರ ದಸರಾ ಉತ್ಸವವನ್ನು ಅಕ್ಟೋಬರ್ 15ರಿಂದ 24ರವರೆಗೆ ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಅಕ್ಟೋಬರ್ 15ರಿಂದ ದಸರಾ ಆರಂಭವಾಗಲಿದ್ದು, ಅಕ್ಟೋಬರ್ 23ರಂದು ಆಯುಧ ಪೂಜೆ & ಅಕ್ಟೋಬರ್ 24ರಂದು ವಿಜಯದಶಮಿ ಆಚರಣೆಗಳು ನಡೆಯಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಈ ವೇಳೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯತ್ರಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಮಣ್ಯ ಸೇರಿದಂತೆ ಮತ್ತತರರು ಉಪಸ್ಥಿತರಿದ್ದರು.
ಇನ್ನು 2023ರ ದಸರಾ ಸಿದ್ಧತೆಗಳ ಕುರಿತು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿತ್ತು ಎಂದು ತಿಳಿದುಬಂದಿದೆ. ಹೀಗೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ದಸರಾ ಉನ್ನತಾಧಿಕಾರ ಸಮಿತಿ ಸಭೆಗೂ ಮುನ್ನ ಪೂರ್ವಭಾವಿ ಚರ್ಚೆಯನ್ನು ನಡೆಸಲಾಯಿತು. ಹಾಗೆಯೇ ವಿಧಾನಸಭೆ ಅಧಿವೇಶನದ ಬಳಿಕ ವಿಧಾನಸೌಧದಲ್ಲಿ ಈ ಕುರಿತು ಉನ್ನತಾಧಿಕಾರಿಗಳ ಸಮಿತಿಯ ಸಭೆ ನಡೆಯಲಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications