ನವರಾತ್ರಿಗೆ ಸಿದ್ಧಗೊಂಡಿದೆ ಹೆಬ್ಬೂರು ಶ್ರೀಚಕ್ರ ಕಾಮಾಕ್ಷಿ ದೇಗುಲ
ನವರಾತ್ರಿ ಇನ್ನೇನು ಸನಿಹದಲ್ಲಿದೆ, ನಾಡಿನ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಲ್ಲಿ ನವರಾತ್ರಿ ಆಚರಿಸುತ್ತಾರೆ. ತುಮಕೂರು ಜಿಲ್ಲೆಯ ಹೆಬ್ಬೂರಿನಲ್ಲೂ ವಿಜೃಂಬಣೆಯಿಂದ ಆಚರಣೆ ಆಗುತ್ತದೆ. ಇಲ್ಲಿನ ಕಾಮಾಕ್ಷಿ ದೇಗುಲದಲ್ಲಿ ಚಟುವಟಿಕೆ ಮತ್ತೂ ಹೆಚ್ಚುತ್ತದೆ. ರಾಜ್ಯದ ನಾನಾ ಭಾಗಗಳಿಂದ ಬಂದು ಇಲ್ಲಿ ಪೂಜೆ ಮಾಡುತ್ತಾರೆ.
15ನೇ ಶತಮಾನದಲ್ಲಿ ಅದ್ವೈತ ಪರಂಪರೆ ಯತಿಗಳಾದ ಕೋದಂಡರಾಮಾಶ್ರಮ ಸ್ವಾಮಿಗಳು ಪೂಜಿಸಿದ ಕಾಮಾಕ್ಷಿ ಶಾರದಾಂಬೆ ನೆಲೆನಿಂತ ದೇಗುಲ ಇಲ್ಲಿದೆ. ಇಲ್ಲಿನ ಇನ್ನೊಂದು ವಿಶೇಷ ಅಂದರೆ ಮೇರು ಪ್ರಸ್ತಾರ ಚಿದಂಬರ ಶ್ರೀಚಕ್ರ. 10 ಅಂಗುಲ ಎತ್ತರ, 12 ಅಂಗುಲ ಅಗಲ, 12 ಅಂಗುಲ ಉದ್ದವಿರುವ ಇಲ್ಲಿನ ಶ್ರೀಚಕ್ರವನ್ನು ನುರಿತ ತಂತ್ರಾಗಮ ನಿಪುಣರೇ ಮಾಡಿದ್ದಾರೆ ಎಂಬುದು ನೋಡಿದ ತಕ್ಷಣವೇ ತಿಳಿಯುತ್ತದೆ.[ಮೈಸೂರಿನ ಅರಮನೆಗಳ ಇತಿಹಾಸ ಗೊತ್ತಾ?]
ಈ ಶ್ರೀಚಕ್ರದಲ್ಲಿ ಬಿಂದು, ತ್ರಿಕೋಣ, ಪಂಚಕೋಣ, ಅಷ್ಟಕೋಣ, ದ್ವಾದಶಕೋಣ, ಅಷ್ಟಾದಶ ಕೋಣ, ಪಂಚವಿಂಶತಿ ಕೋಣ ಹಾಗೂ ಪಂಚತ್ರಿಂಶತ್ ಕೋಣಗಳಿವೆ. ಅಲ್ಲದೆ ಇದಕ್ಕೆ ಕೂರ್ಮ ಪೀಠವಿದ್ದು, ಅದರ ಮೇಲೆ ಅಷ್ಟ ದಿಗ್ಗಜಗಳು, ಅಷ್ಟ ದಿಗ್ನಾಗಗಳು, ಅಷ್ಟ ಶಕ್ತಿಗಳು ಇವೆ.

ಕಮಲ ದಳ, ಸ್ವರ್ಣ ಕಳಶ
ಭೂಪುರ ಮತ್ತು ಏಳು ಆವರಣಗಳಲ್ಲಿ 35, 25, 22, 18, 12, 8, 5ರಂತೆ ಕಮಲದ ದಳಗಳು ಮತ್ತು ಸ್ವರ್ಣಕಳಶ ರೂಪದ ಬಿಂದುವಿನ ರೀತಿಯ ರಚನೆ ಇವೆ. ಈ ದೇಗುಲವೂ ಶ್ರೀಚಕ್ರ ಮಾದರಿಯಲ್ಲೇ ಇದೆ. ಕಾಮಾಕ್ಷಿ ವಿಗ್ರಹ ಇರುವ ಪೀಠವೂ ಶ್ರೀಚಕ್ರ ಮಾದರಿಯಲ್ಲೇ ನಿರ್ಮಿಸಲಾಗಿದೆ ಮತ್ತು ಪಚ್ಚೆಯ ಮತ್ತೊಂದು ಶ್ರೀಚಕ್ರಕ್ಕೆ ದಿನವೂ ಪೂಜೆ ನಡೆಯುತ್ತದೆ.

ವಿವಿಧ ಹೋಮ, ವಿಶೇಷ ಪೂಜೆ
ಮಹಾಲಯ ಅಮಾವಾಸ್ಯೆ ಅಮ್ಮನವರಿಗೆ ನವಕಾಭಿಷೇಕ, ದುರ್ಗಾಹೋಮದಿಂದ ಪ್ರಾರಂಭವಾಗಿ ಒಂಬತ್ತು ದಿನವೂ ವಿವಿಧ ಹೋಮ, ವಿಶೇಷ ಪೂಜೆಗಳು ನಡೆಯುತ್ತವೆ. ಲಲಿತಾ ಪಂಚಮಿಯಂದು ಲಲಿತಾಹೋಮ, ದುರ್ಗಾಷ್ಟಮಿಯಂದು ದುರ್ಗಾ ಹೋಮಗಳು ನಡೆಯುತ್ತವೆ. ಅಷ್ಟಮಿ ಹಾಗೂ ಪಂಚಮಿ ಹೊರತುಪಡಿಸಿ ಎಲ್ಲ ದಿನವೂ ಚಂಡಿಕಾ ಹೋಮ ನಡೆಯುತ್ತದೆ.

ರಸ್ತೆಯೂ ಚೆನ್ನಾಗಿದೆ
ಇನ್ನು ಹೆಬ್ಬೂರಿಗೆ ತುಮಕೂರಿನ ಕಡೆಯಿಂದ ಬಂದರೆ ಇಪ್ಪತ್ಮೂರು ಕಿ.ಮೀ ಆಗುತ್ತದೆ. ಇನು ಕುಣಿಗಲ್ ಕಡೆಯಿಂದ ಬರುವುದಾದರೆ ಹದಿನೈದು ಕಿ.ಮೀ. ಎರಡೂ ಕಡೆಯಿಂದ ರಸ್ತೆ ತುಂಬ ಚೆನ್ನಾಗಿದೆ.

ಭಕ್ತರಿಗೆ ಪ್ರಸಾದ
ಮಠವು ಈ ವರೆಗೆ 11 ಪೀಠಾಧಿಪತಿಗಳನ್ನು ಕಂಡಿದೆ. ಹಿಂದಿನ ಪೀಠಾಧಿಪತಿಗಳಾದ ನಾರಾಯಣಾಶ್ರಮ ಸ್ವಾಮಿಗಳ ಕಾಲದಲ್ಲಿ ಅಭಿವೃದ್ಧಿ ಹೊಂದಿದ್ದು, ಸದ್ಯಕ್ಕೆ ಮಠವನ್ನು ಮಾಧವಾಶ್ರಮ ಸ್ವಾಮಿಗಳು ಮುನ್ನಡೆಸುತ್ತಿದ್ದಾರೆ. ಮಹಾಲಯ ಅಮಾವಾಸ್ಯೆಯಿಂದ ಆರಂಭವಾಗಿ ನವರಾತ್ರಿ ಪೂರ್ಣವಾಗುವವರೆಗೆ ಮಠಕ್ಕೆ ಬರುವ ಭಕ್ತರಿಗೆ ಊಟದ ವ್ಯವಸ್ಥೆ ಇರುತ್ತದೆ.

ಒಂಬತ್ತು ದಿನದ ವಿಶೇಷ
ನವರಾತ್ರಿಯ ಒಂಬತ್ತು ದಿನದಲ್ಲಿ ದೇವಿಯು ದುರ್ಗಾ, ಆರ್ಯಾ, ಭಗವತೀ, ಕುಮಾರಿ, ಅಂಬಿಕಾ, ಮಹಿಷ ಮರ್ದಿನಿ, ಚಂಡಿಕಾ, ಸರಸ್ವತಿ ಹಾಗೂ ವಾಗೀಶ್ವರಿಯ ರೂಪದಲ್ಲಿ ಇರುತ್ತಾಳೆ ಎಂಬುದು ನಂಬಿಕೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications