ನವರಾತ್ರಿಯ 5ನೇ ದಿನ : ನಾದದೇವತೆ ಹೊಗಳುವ ಹಾಡು

ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ ಸಂಗೀತದಲ್ಲಾಗಲಿ, ಅಥವಾ ಪ್ರಪಂಚದ ಬೇರೆ ಯಾವುದೇ ಸಂಗೀತದಲ್ಲೂ ಹೋಲುವ ರಾಗವಿಲ್ಲ. ನೀವು ತರಾಸು ಅವರ ಹಂಸಗೀತೆಯನ್ನು ಓದಿದ್ದರೆ, ಅದರ ಮೇಲೆ ಆಧಾರಿತವಾದ ಚಲನಚಿತ್ರವನ್ನು ನೋಡಿದ್ದರೆ, ಅದರಲ್ಲಿ ಬರುವ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿಮಗೆ ತಿಳಿದೇ ಇರುತ್ತೆ. ಇಲ್ಲಿ ಒಂದು ವಿಷಯವನ್ನು ಹೇಳಿಬಿಡುತ್ತೇನೆ. ಈ ಭೈರವಿ ವೆಂಕಟಸುಬ್ಬಯ್ಯ ತರಾಸು ಅವರ ಕಲ್ಪನೆಯ ಪಾತ್ರವೇ ಹೊರತು ಚಾರಿತ್ರಿಕ ವ್ಯಕ್ತಿಯಲ್ಲ.
ಇವತ್ತು ನಾನು ಆಯ್ಕೆ ಮಾಡಿಕೊಂಡು ಹೇಳಲಿರುವ ರಚನೆ ಮುತ್ತುಸ್ಬಾಮಿ ದೀಕ್ಷಿತರದ್ದು. ಸಂಗೀತ ತ್ರಿಮೂರ್ತಿಗಳಲ್ಲಿ ಇವರು ಎಲ್ಲರಿಗಿಂತ ಕಡಿಮೆ ಕಾಲ ಬದುಕಿದ್ದರೂ (ಕ್ರಿ.ಶ.1775-1835), ಸಂಗೀತ ಸಾಧನೆಯಲ್ಲಿ ಇನ್ನಿಬ್ಬರಿಗೆ ಸಾಟಿಯಾದವರು ಇವರು. ವೈಣಿಕ ಮತ್ತು ಹಾಡುಗಾರರಾಗಿದ್ದ ಇವರಿಗೆ ಹಿಂದೂಸ್ತಾನಿ ಸಂಗೀತದ ಪರಿಚಯವೂ ಇತ್ತು. ಇವರು ದಕ್ಷಿಣ ಭಾರತದ ಅನೇಕ ಕ್ಷೇತ್ರಗಳನ್ನು ಸಂದರ್ಶಿಸಿ, ಅಲ್ಲಿನ ದೇವ ದೇವತೆಗಳ ಬಗ್ಗೆ ತಮ್ಮ ರಚನೆಗಳಲ್ಲಿ ಹಾಡಿದ್ದಾರೆ. ಇವರು ಸುಮಾರು ನಾನೂರು ರಚನೆಗಳು ನಮಗೆ ದೊರೆತಿವೆ.
ವಿಶೇಷವೆಂದರೆ, ಇವರು ತಾವು ಮದ್ರಾಸ್ ನ ಸೈಂಟ್ ಜಾರ್ಜ್ ಕೋಟೆಯಲ್ಲಿ ಕೇಳಿದ ಇಂಗ್ಲಿಷ್ ಬ್ಯಾಂಡ್ ಗಳ ಹಾಡುಗಳ ಮಟ್ಟಿನಲ್ಲೇ, ಅದಕ್ಕೆ ತಮ್ಮದೇ ಸಾಹಿತ್ಯ ಬರೆದಿರುವುದು. ಈಗಲೂ ಇದನ್ನು ಸಂಗೀತ ಅಭ್ಯಾಸದ ಮೊದಲ ದಿನಗಳಲ್ಲಿ ಹೇಳಿಕೊಡುವುದಿದೆ. ಇಂಥ ಸರಳ ರಚನೆಗಳಿಂದ ಹಿಡಿದು ಅತಿ ಕ್ಲಿಷ್ಟವಾದ ರಚನೆಗಳನ್ನೂ ಮಾಡಿರುವುದು ಇವರ ಸಂಗೀತದ ಹರಹನ್ನು ತೋರಿಸುತ್ತೆ.
ಇವತ್ತಿನ ದೇವೀ ಪರವಾದ ಕೃತಿ ಕಲಾವತಿ ರಾಗದಲ್ಲಿರುವ 'ಕಲಾವತೀ ಕಮಲಾಸನ ಯುವತಿ' ಎಂಬ ರಚನೆ. ಈ ರಚನೆಯು ಕಾಶ್ಮೀರ ವಾಸಿಯಾದ ಸರಸ್ವತೀ ದೇವಿಯ ಮೇಲೆ ಬರೆದಿರುವುದಾಗಿದೆ. ಶರತ್ಕಾಲದ ಬೆಳದಿಂಗಳಂತೆ ಮೆರುಗುವ ಸರಸ್ವತಿ, ಒಳಿತನ್ನು ಮಾಡು! ಎಂದು ದೀಕ್ಷಿತರು ಇಲ್ಲಿ ಕೇಳಿಕೊಳ್ಳುತ್ತಾರೆ.
ದಸರೆಯಲ್ಲಿ ಹಾಡಲು, ಕೇಳಲು ನಾದದೇವತೆಯನ್ನು ಹೊಗಳುವ ಈ ಹಾಡು ಎಷ್ಟು ಸೊಗಸು ಅಲ್ಲವೆ? [ಕೃಪೆ : ಹಂಸ ನಾದ]
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications