ನವರಾತ್ರಿಯ 5ನೇ ದಿನ : ನಾದದೇವತೆ ಹೊಗಳುವ ಹಾಡು

ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ ಸಂಗೀತದಲ್ಲಾಗಲಿ, ಅಥವಾ ಪ್ರಪಂಚದ ಬೇರೆ ಯಾವುದೇ ಸಂಗೀತದಲ್ಲೂ ಹೋಲುವ ರಾಗವಿಲ್ಲ. ನೀವು ತರಾಸು ಅವರ ಹಂಸಗೀತೆಯನ್ನು ಓದಿದ್ದರೆ, ಅದರ ಮೇಲೆ ಆಧಾರಿತವಾದ ಚಲನಚಿತ್ರವನ್ನು ನೋಡಿದ್ದರೆ, ಅದರಲ್ಲಿ ಬರುವ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿಮಗೆ ತಿಳಿದೇ ಇರುತ್ತೆ. ಇಲ್ಲಿ ಒಂದು ವಿಷಯವನ್ನು ಹೇಳಿಬಿಡುತ್ತೇನೆ. ಈ ಭೈರವಿ ವೆಂಕಟಸುಬ್ಬಯ್ಯ ತರಾಸು ಅವರ ಕಲ್ಪನೆಯ ಪಾತ್ರವೇ ಹೊರತು ಚಾರಿತ್ರಿಕ ವ್ಯಕ್ತಿಯಲ್ಲ.
ಇವತ್ತು ನಾನು ಆಯ್ಕೆ ಮಾಡಿಕೊಂಡು ಹೇಳಲಿರುವ ರಚನೆ ಮುತ್ತುಸ್ಬಾಮಿ ದೀಕ್ಷಿತರದ್ದು. ಸಂಗೀತ ತ್ರಿಮೂರ್ತಿಗಳಲ್ಲಿ ಇವರು ಎಲ್ಲರಿಗಿಂತ ಕಡಿಮೆ ಕಾಲ ಬದುಕಿದ್ದರೂ (ಕ್ರಿ.ಶ.1775-1835), ಸಂಗೀತ ಸಾಧನೆಯಲ್ಲಿ ಇನ್ನಿಬ್ಬರಿಗೆ ಸಾಟಿಯಾದವರು ಇವರು. ವೈಣಿಕ ಮತ್ತು ಹಾಡುಗಾರರಾಗಿದ್ದ ಇವರಿಗೆ ಹಿಂದೂಸ್ತಾನಿ ಸಂಗೀತದ ಪರಿಚಯವೂ ಇತ್ತು. ಇವರು ದಕ್ಷಿಣ ಭಾರತದ ಅನೇಕ ಕ್ಷೇತ್ರಗಳನ್ನು ಸಂದರ್ಶಿಸಿ, ಅಲ್ಲಿನ ದೇವ ದೇವತೆಗಳ ಬಗ್ಗೆ ತಮ್ಮ ರಚನೆಗಳಲ್ಲಿ ಹಾಡಿದ್ದಾರೆ. ಇವರು ಸುಮಾರು ನಾನೂರು ರಚನೆಗಳು ನಮಗೆ ದೊರೆತಿವೆ.
ವಿಶೇಷವೆಂದರೆ, ಇವರು ತಾವು ಮದ್ರಾಸ್ ನ ಸೈಂಟ್ ಜಾರ್ಜ್ ಕೋಟೆಯಲ್ಲಿ ಕೇಳಿದ ಇಂಗ್ಲಿಷ್ ಬ್ಯಾಂಡ್ ಗಳ ಹಾಡುಗಳ ಮಟ್ಟಿನಲ್ಲೇ, ಅದಕ್ಕೆ ತಮ್ಮದೇ ಸಾಹಿತ್ಯ ಬರೆದಿರುವುದು. ಈಗಲೂ ಇದನ್ನು ಸಂಗೀತ ಅಭ್ಯಾಸದ ಮೊದಲ ದಿನಗಳಲ್ಲಿ ಹೇಳಿಕೊಡುವುದಿದೆ. ಇಂಥ ಸರಳ ರಚನೆಗಳಿಂದ ಹಿಡಿದು ಅತಿ ಕ್ಲಿಷ್ಟವಾದ ರಚನೆಗಳನ್ನೂ ಮಾಡಿರುವುದು ಇವರ ಸಂಗೀತದ ಹರಹನ್ನು ತೋರಿಸುತ್ತೆ.
ಇವತ್ತಿನ ದೇವೀ ಪರವಾದ ಕೃತಿ ಕಲಾವತಿ ರಾಗದಲ್ಲಿರುವ 'ಕಲಾವತೀ ಕಮಲಾಸನ ಯುವತಿ' ಎಂಬ ರಚನೆ. ಈ ರಚನೆಯು ಕಾಶ್ಮೀರ ವಾಸಿಯಾದ ಸರಸ್ವತೀ ದೇವಿಯ ಮೇಲೆ ಬರೆದಿರುವುದಾಗಿದೆ. ಶರತ್ಕಾಲದ ಬೆಳದಿಂಗಳಂತೆ ಮೆರುಗುವ ಸರಸ್ವತಿ, ಒಳಿತನ್ನು ಮಾಡು! ಎಂದು ದೀಕ್ಷಿತರು ಇಲ್ಲಿ ಕೇಳಿಕೊಳ್ಳುತ್ತಾರೆ.
ದಸರೆಯಲ್ಲಿ ಹಾಡಲು, ಕೇಳಲು ನಾದದೇವತೆಯನ್ನು ಹೊಗಳುವ ಈ ಹಾಡು ಎಷ್ಟು ಸೊಗಸು ಅಲ್ಲವೆ? [ಕೃಪೆ : ಹಂಸ ನಾದ]
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications