ಮೊದಲ ರಾತ್ರಿ ಸುಬ್ಬು ಏನ್ ಮಾಡಿದ ಗೊತ್ತಾ?

ಇಂತಹ ಘನಂಧಾರಿ ಸುಬ್ಬ, ಮಾವನ ಮನೆಗೆ ಬರುತ್ತಿರುವ ವಿಷಯ ಟೆಲಿಪತಿಯಂತೆ ಮನೆಯಲ್ಲಿನ ಎಲ್ಲರಿಗೂ ಅರಿವಾಗಿತ್ತು. ಅಳಿಯ ವಾಸನೆ... ಎರಡನೇ ದೀಪಾವಳಿಗೆ ಬರುತ್ತಿರುವುದೇನೋ ನಿಜ ಆದರೆ ಇನ್ನೂ ಹಬ್ಬ ಎಲ್ಲೋ ಇದೆ, ಈಗಲೇ ಬಂದರೆ ಸುಧಾರಿಸುವುದೆಂತು? ಎಡವಿದ್ದೆಲ್ಲಿ? ತಾಯಿ-ಮಗಳು ರಾಯರ ಕಡೆ ನೋಡಿದರು. ಇವರು ಕಾಗದ ಬರೆಯುತ್ತೇನೆ ಎಂದು ತಿಳಿಸಿದ್ದರು, ಅಷ್ಟೆ.
ಕಾಗದ ಎಂದ ಮೇಲೆ ನೆನಪಿಗೆ ಬಂತು ನೋಡಿ ಮಾವ-ಅಳಿಯ ಪ್ರಸಂಗ. ಹಿಂದೊಮ್ಮೆ ಕಾಗದದ ಬಗ್ಗೆ ವಿಷಯ ಬಂದಾಗ ಸುಬ್ಬ ಮಾವನಿಗೆ ಹೇಳಿದ್ದ "ನೀವು ಕಾಗದ ಅಂತ ಬರೆದು ಹಾಕಬೇಡಿ. ಸುಮ್ಮನೆ ಯಾರ್ಯಾರೋ ಮುಟ್ಟಿ ಎಂಜಲು ಕೈಯಲ್ಲೇ ತಂದುಕೊಡ್ತಾರೆ. ಯಾರೂ ಕೈಯಿಂದ ಮುಟ್ಟದೆ ಮಡಿ ಮಡಿಯಾಗಿ ನನಗೆ ವಿಷಯ ಈಮೈಲ್ ಮಾಡಿ" ಎಂದಿದ್ದ!
ಕೆಲವು ವಿಷಯದಲ್ಲಂತೂ ನಮ್ ಸುಬ್ಬ ಅತೀ ಜಾಣ. ಈಮೈಲ್ ಸಂದೇಶ ಶುದ್ದ ಮಡಿ ಅಂತ ರಾಯರಿಗೆ ಆಗಲೇ ಮನವರಿಕೆಯಾಗಿದ್ದು. ಅದಕ್ಕಿಂತಲೂ, ಸುಬ್ಬನಿಗೆ ಈಮೈಲ್ ಹೇಗೆ ಓದಬೇಕೂ ಅಂತ ಅರಿವಿದೆಯೋ ಇಲ್ಲವೋ ಎಂದೇ ಅವರು ಕಾಗದ ಎಂದು ಅಂದುಕೊಂಡಿದ್ದರು ಎಂಬುದು, ಎಲ್ಲರಿಗೂ ಅರಿವಿದ್ದ ಸಿಕ್ಕಾಪಟ್ಟೆ ರಹಸ್ಯವಾದ ಮಾತು.
ಇಷ್ಟಕ್ಕೂ ಈಮೈಲ್ ನಲ್ಲಿ ಸುಬ್ಬನಿಗೆ ಕನ್ಫ಼್ಯೂಸ್ ಆಗುವಂಥದ್ದೇನಿತ್ತೋ ಗೊತ್ತಿಲ್ಲ, ಇಷ್ಟು ಬೇಗ ಬಂದು ವಕ್ಕರಿಸಲು. ಕಳೆದ ವರ್ಷ ಹೀಗೇ ಆಯ್ತು. ಅಳಿಯ-ಮಗಳನ್ನು ಹಬ್ಬಕ್ಕೆ ಆಹ್ವಾನಿಸುವ ಸಲುವಾಗಿ ರಾಯರು ಮೈಲ್ ಬರೆದು ಕಡೆಯಲ್ಲಿ "ನಿಮ್ಮಗಳ ಕ್ಷೇಮಕ್ಕೆ ಕರೆ ಅಥವಾ ಈಮೈಲ್ ಮಾಡಿ" ಎಂದು ಸಾಂಪ್ರದಾಯಿಕವಾಗಿ ಬರೆದಿದ್ದರು.
ದೀಪಾವಳಿಗೆ ಬಂದ ಸುಬ್ಬ "ಮಾವಾ, ನಿಮಗೆ ಇಷ್ಟು ಬೇಗ ಅರುಳು-ಮರಳು ಆದ ಹಾಗಿದೆ. ನಿಮ್ಮಗಳು ಅಂತ ಬರೆದಿದ್ದೀರಿ ಈಮೈಲ್ ನಲ್ಲಿ. ಇವಳು ನನ್ನ ಮಗಳಲ್ಲ, ನನ್ ಹೆಂಡತಿ. ಇವಳು ನಿಮ್ಮ ಮಗಳು" ಅಂತ ಪೆಕರು ಪೆಕರಾಗಿ ನಕ್ಕಿದ್ದ. ರಾಯರಿಗೆ ಆಗ ಅರಿವಾಗಿತ್ತು "ನಿಮ್ಮಗಳ" ಅನ್ನೋದನ್ನು ಸುಬ್ಬ "ನಿಮ್ಮ ಮಗಳ" ಅಂತ ಅರ್ಥೈಸಿಕೊಂಡಿದ್ದ. ಅಂದಿನಿಂದ ರಾಯರು ತಮ್ಮ ಅರ್ಥಕೋಶದಿಂದ ಆ ಪದವನ್ನೇ ತೆಗೆದುಹಾಕಿದ್ದರು.
ರಾಮುವಿಗೆ ಜೀವನದಲ್ಲೇ ಪ್ರಥಮ ಬಾರಿ ಭಯಂಕರ ಅನುಭವವಾಗಿದ್ದೂ ಕಳೆದ ದೀಪಾವಳಿಯಲ್ಲೇ. ಭಾವನನ್ನು ಸ್ವಾಗತಿಸಲು ಬಾಗಿಲಿಗೆ ಬಂದವನಿಗೆ "ಏನೋ ರಾಮೂ, ಕುಳ್ಳಗಾಗಿ ಬಿಟ್ಟಿದ್ದೀಯಾ" ಅನ್ನೋದೇ? ರಾಮುವಿಗೆ ತಬ್ಬಿಬ್ಬು. ಅದಕ್ಕೆ ರಾಧಾ "ಹಾಗೇನಿಲ್ಲಾರೀ, ನಮ್ ರಾಮೂ ದಪ್ಪ ಆಗಿರೋದ್ರಿಂದ ಎತ್ತರ ಕಡಿಮೆ ಕಾಣ್ತಿದ್ದಾನೆ ಅಷ್ಟೇ" ನುಡಿದ್ದಳು. ರಾಮೂ ಸೈಲೆಂಟಾಗಿ ಜಾಗ ಖಾಲಿ ಮಾಡಿದ್ದ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications