ಜಯ ನಾಮ ಸಂವತ್ಸರದ ದೀಪಾವಳಿ ಕವನ
ದೀಪಾವಳಿಯ ಸಂದರ್ಭಕ್ಕೆ ಹೊಂದುವ ಕೆಲವು ಅಲಂಕಾರಯುಕ್ತವಾದ ಐದು ಪದ್ಯಗಳನ್ನು ಭಾಮಿನೀ ಷಟ್ಪದಿಯಲ್ಲಿ ಹಂಸಾನಂದಿ ಅವರು ಹೊಸೆದಿದ್ದಾರೆ.
ಮೊದಲ ಪದ್ಯ, ದೀಪಾವಳಿಯ ಮೊದಲದಿನವಾದ ನೀರು ತುಂಬುವ ಹಬ್ಬ, ಎರಡನೇ ಪದ್ಯ ಎರಡನೆಯ ದಿನವಾದ ನರಕ ಚತುರ್ದಶಿಯ ಬಗ್ಗೆ, ಮೂರನೇ ದಿನ ಕಾಳ ಕತ್ತಲೆಯ ಅಮಾವಾಸ್ಯೆಯ ಲಕ್ಷ್ಮೀ ಪೂಜೆಗೆ, ನಾಲ್ಕನೇ ಪದ್ಯ ಕರ್ನಾಟಕದಲ್ಲಿ ದೀಪಾವಳಿಯ ಅತೀ ಜನಪ್ರಿಯ ದಿನವಾದ ಬಲಿಪಾಡ್ಯಮಿಯ ಹಬ್ಬದೂಟದ ಬಗ್ಗೆ, ಮತ್ತೆ ಐದನೇ ಪದ್ಯ ಅಣ್ಣತಮ್ಮಂದಿರನ್ನು ಸತ್ಕರಿಸುವ ಸೋದರ ಬಿದಿಗೆಯ ಬಗ್ಗೆ ಎಂದು ಓದಿಕೊಳ್ಳಬಹುದು.ಎಲ್ಲರಿಗೂ ಮತ್ತೊಮ್ಮೆ ದೀಪಾವಳಿಯು ಆನಂದವನ್ನು ತರಲೆಂಬ ಹಾರೈಕೆಗಳು.

ನೀರು ತುಂಬುವ ಹಬ್ಬ ಬಂದಿರೆ
ನೀರೆಯರು ಮನೆತುಂಬ ನಾನಾ-
ಕಾರದಲಿ ಚಿತ್ತಾರ ರಂಗೋಲಿಗಳ ಹಾಕುತಲಿ |
ಮಾರುಮಾರಿಗು ಬಣ್ಣಬಣ್ಣದ
ಹಾರಗಳ ಕಟ್ಟುತ್ತ ಸೊಗಸಿನ
ತೋರಣದ ಚಿಗುರಲ್ಲಿ ಕೋರುತಲೆಲ್ಲರೊಳಿತನ್ನು ||1||
ಅಂದು ನರಕಾಸುರನ ಭಯದಲಿ
ನೊಂದಿರುವ ಜಗವನ್ನು ಕಾಯಲಿ-
ಕೆಂದು ಕೃಷ್ಣನು ಕೊಂದನಾತನ ವಿಷ್ಣು ಚಕ್ರದಲಿ |
ಇಂದಿಗೂ ನೆನೆಯುವೆವು ಮಹದಾ-
ನಂದದಿಂದಲಿ ದುಷ್ಟ ದಮನವ
ಚಂದದಿಂದಲಿ ನಾವು ಹೊತ್ತಿಸಿ ವಿಷ್ಣು ಚಕ್ರಗಳ ||2||
ಸಾಲು ಸಾಲಿನ ಸೊಡರ ಕುಡಿಗಳು
ಮಾಲೆ ಹಾಕಿದ ಮಿಂಚು ದೀಪವು
ಮೂಲೆಮೂಲೆಗಳಲ್ಲಿ ಸುರುಸುರು ಬತ್ತಿಗಳ ಬೆಳಕು |
ಮೇಲಿನಾಗಸದಲ್ಲಿ ಹೊಳೆಯುವ
ಸಾಲು ತಾರಾಗಣವ ಮೀರಿಸಿ
ಪೇಲವವಗೈದಿರಲಿ ಮನಸಿನ ಕಾಳಕತ್ತಲೆಯ ||3||
ಪೇರಿಸಿರುವೊಬ್ಬಟ್ಟು ಲಡ್ಡುವು
ಗಾರಿಗೆಯು ಸಜ್ಜಪ್ಪ ಶಾವಿಗೆ
ಮಾರು ಹೋಗದೆಯಿರುವುದುಂಟೇನಿಂಥ ಪರಿಮಳಕೆ |
ಮೂರು ಸುತ್ತಲು ಹಬ್ಬುತಿರಲೀ
ಸಾರಿನೊಗ್ಗರಣೆಯು ಕಮ್ಮನೆ
ಮೇರೆ ಮೀರಿಸಿ ಹಬ್ಬದೂಟದ ಬಯಕೆ ಮನದಲ್ಲಿ ||4||
ಸೊಡರು ಹಬ್ಬದ ಕೊನೆಯ ದಿನ ಮನೆ
ಯೊಡತಿ ತನ್ನೊಡಹುಟ್ಟಿದವರನು
ಸಡಗರಿಸಿ ಕರೆಯುವಳು ಮರೆಯದೆ ತವರ ಕುಡಿಗಳನು |
ನುಡಿಯುತಲಿ ಸಂತಸದ ಮಾತುಗ
ಳೊಡನೆ ಸತ್ಕರಿಸುತ್ತಲವರನು
ಹಡೆದ ಮನೆಗೆಂದೆಂದು ಹದುಳವ ಕೋರಿ ಸೊಗವಡೆದು ||5||
ಹಂಸಾನಂದಿ ಅವರ ಬ್ಲಾಗಿಗೆ ದಾರಿ ಇಲ್ಲಿದೆ
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications