ಜಯ ನಾಮ ಸಂವತ್ಸರದ ದೀಪಾವಳಿ ಕವನ
ದೀಪಾವಳಿಯ ಸಂದರ್ಭಕ್ಕೆ ಹೊಂದುವ ಕೆಲವು ಅಲಂಕಾರಯುಕ್ತವಾದ ಐದು ಪದ್ಯಗಳನ್ನು ಭಾಮಿನೀ ಷಟ್ಪದಿಯಲ್ಲಿ ಹಂಸಾನಂದಿ ಅವರು ಹೊಸೆದಿದ್ದಾರೆ.
ಮೊದಲ ಪದ್ಯ, ದೀಪಾವಳಿಯ ಮೊದಲದಿನವಾದ ನೀರು ತುಂಬುವ ಹಬ್ಬ, ಎರಡನೇ ಪದ್ಯ ಎರಡನೆಯ ದಿನವಾದ ನರಕ ಚತುರ್ದಶಿಯ ಬಗ್ಗೆ, ಮೂರನೇ ದಿನ ಕಾಳ ಕತ್ತಲೆಯ ಅಮಾವಾಸ್ಯೆಯ ಲಕ್ಷ್ಮೀ ಪೂಜೆಗೆ, ನಾಲ್ಕನೇ ಪದ್ಯ ಕರ್ನಾಟಕದಲ್ಲಿ ದೀಪಾವಳಿಯ ಅತೀ ಜನಪ್ರಿಯ ದಿನವಾದ ಬಲಿಪಾಡ್ಯಮಿಯ ಹಬ್ಬದೂಟದ ಬಗ್ಗೆ, ಮತ್ತೆ ಐದನೇ ಪದ್ಯ ಅಣ್ಣತಮ್ಮಂದಿರನ್ನು ಸತ್ಕರಿಸುವ ಸೋದರ ಬಿದಿಗೆಯ ಬಗ್ಗೆ ಎಂದು ಓದಿಕೊಳ್ಳಬಹುದು.ಎಲ್ಲರಿಗೂ ಮತ್ತೊಮ್ಮೆ ದೀಪಾವಳಿಯು ಆನಂದವನ್ನು ತರಲೆಂಬ ಹಾರೈಕೆಗಳು.

ನೀರು ತುಂಬುವ ಹಬ್ಬ ಬಂದಿರೆ
ನೀರೆಯರು ಮನೆತುಂಬ ನಾನಾ-
ಕಾರದಲಿ ಚಿತ್ತಾರ ರಂಗೋಲಿಗಳ ಹಾಕುತಲಿ |
ಮಾರುಮಾರಿಗು ಬಣ್ಣಬಣ್ಣದ
ಹಾರಗಳ ಕಟ್ಟುತ್ತ ಸೊಗಸಿನ
ತೋರಣದ ಚಿಗುರಲ್ಲಿ ಕೋರುತಲೆಲ್ಲರೊಳಿತನ್ನು ||1||
ಅಂದು ನರಕಾಸುರನ ಭಯದಲಿ
ನೊಂದಿರುವ ಜಗವನ್ನು ಕಾಯಲಿ-
ಕೆಂದು ಕೃಷ್ಣನು ಕೊಂದನಾತನ ವಿಷ್ಣು ಚಕ್ರದಲಿ |
ಇಂದಿಗೂ ನೆನೆಯುವೆವು ಮಹದಾ-
ನಂದದಿಂದಲಿ ದುಷ್ಟ ದಮನವ
ಚಂದದಿಂದಲಿ ನಾವು ಹೊತ್ತಿಸಿ ವಿಷ್ಣು ಚಕ್ರಗಳ ||2||
ಸಾಲು ಸಾಲಿನ ಸೊಡರ ಕುಡಿಗಳು
ಮಾಲೆ ಹಾಕಿದ ಮಿಂಚು ದೀಪವು
ಮೂಲೆಮೂಲೆಗಳಲ್ಲಿ ಸುರುಸುರು ಬತ್ತಿಗಳ ಬೆಳಕು |
ಮೇಲಿನಾಗಸದಲ್ಲಿ ಹೊಳೆಯುವ
ಸಾಲು ತಾರಾಗಣವ ಮೀರಿಸಿ
ಪೇಲವವಗೈದಿರಲಿ ಮನಸಿನ ಕಾಳಕತ್ತಲೆಯ ||3||
ಪೇರಿಸಿರುವೊಬ್ಬಟ್ಟು ಲಡ್ಡುವು
ಗಾರಿಗೆಯು ಸಜ್ಜಪ್ಪ ಶಾವಿಗೆ
ಮಾರು ಹೋಗದೆಯಿರುವುದುಂಟೇನಿಂಥ ಪರಿಮಳಕೆ |
ಮೂರು ಸುತ್ತಲು ಹಬ್ಬುತಿರಲೀ
ಸಾರಿನೊಗ್ಗರಣೆಯು ಕಮ್ಮನೆ
ಮೇರೆ ಮೀರಿಸಿ ಹಬ್ಬದೂಟದ ಬಯಕೆ ಮನದಲ್ಲಿ ||4||
ಸೊಡರು ಹಬ್ಬದ ಕೊನೆಯ ದಿನ ಮನೆ
ಯೊಡತಿ ತನ್ನೊಡಹುಟ್ಟಿದವರನು
ಸಡಗರಿಸಿ ಕರೆಯುವಳು ಮರೆಯದೆ ತವರ ಕುಡಿಗಳನು |
ನುಡಿಯುತಲಿ ಸಂತಸದ ಮಾತುಗ
ಳೊಡನೆ ಸತ್ಕರಿಸುತ್ತಲವರನು
ಹಡೆದ ಮನೆಗೆಂದೆಂದು ಹದುಳವ ಕೋರಿ ಸೊಗವಡೆದು ||5||
ಹಂಸಾನಂದಿ ಅವರ ಬ್ಲಾಗಿಗೆ ದಾರಿ ಇಲ್ಲಿದೆ
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications