ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನ್ಯರಿಗೂ ಜ್ಞಾನದೀಪ ದಾನ ಮಾಡಿ ದೀಪಾವಳಿ ಆಚರಿಸೋಣ...

By ವಿಶ್ವಾಸ ಸೋಹೋನಿ
|
Google Oneindia Kannada News

ದೀಪಾವಳಿ ವಿಶ್ವದಲ್ಲೇ ಅತಿ ದೊಡ್ಡ ಹಬ್ಬವಾಗಿದ್ದು, ಹಿಂದೂ, ಜೈನ, ಬುದ್ಧ ಮತ್ತು ಸಿಖ್ ಧರ್ಮಗಳಲ್ಲಿ ಈ ಹಬ್ಬಕ್ಕೆ ಹೆಚ್ಚು ಮಹತ್ವ ಇದೆ. ಭಾರತ, ನೇಪಾಳ, ಶ್ರೀಲಂಕಾ, ಮಿಯಮ್ಮಾರ, ಮಾರಿಶಿಯಸ್, ಗಯಾನಾ, ಟ್ರಿನಿಡಾಡ್, ಸೂರಿನಾಮ್, ಮಲೇಶಿಯ, ಸಿಂಗಾಪುರ ಮತ್ತು ಫಿಜಿ ದೇಶಗಳಲ್ಲಿ ಈ ಹಬ್ಬಕೆ ರಾಷ್ಡ್ರೀಯ ರಜೆ ಕಲ್ಪಿಸಲಾಗಿದ್ದು, ಜನರು ದೀಪಾವಳಿಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸುತ್ತಾರೆ. ನೇಪಾಳದಲ್ಲಿ ಹೊಸ ವರ್ಷ ದೀಪಾವಳಿ ಶುರುವಾಗುತ್ತದೆ.

ದೀಪಾವಳಿ ದೀಪಗಳ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯದಂದು ದೀಪಾವಳಿಯನ್ನು ಆಚರಿಸುತ್ತಾರೆ.

ದೀಪಾವಳಿ ವಿಶೇಷ ಪುರವಣಿ

ಅಮಾವಾಸ್ಯೆಯ ನಿಖರ ದಿನಾಂಕ ಬೇರೆ ಬೇರೆ ದಿನಗಳಂದು ಆಗಬಹುದು. ಇದರೊಂದಿಗೆ ದೀಪಾವಳಿಯ ದಿನಾಂಕವೂ ಬೇರೆಯಾಗಬಹುದು. ಜೈನ ಧರ್ಮದಲ್ಲಿ ದೀಪಾವಳಿಯನ್ನು ದೇವದಿವಾಳಿ ಎಂದು ಹೇಳುತ್ತಾರೆ. ಈ ದಿನ ಕೊನೆಯ ತಿರ್ಥಂಕಾರನಾದ ಮಹಾವೀರ, ಬಿಹಾರ ರಾಜ್ಯದ ಪಾವಪುರಿ ಎಂಬ ಸ್ಥಳದಲ್ಲಿ (15 ಆಕ್ಟೊಬರ ಕ್ರಿ.ಪು.527) ನಿರ್ವಾಣ ಅವಸ್ಥೆಗೆ ಹೋದನು.

ಕ್ರಿ.ಪೂ. 3ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವಂತೆ ಮಾಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಯಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು.

ತಮ್ಮ ಗುರುವಿನ ಜ್ಞಾನಜ್ಯೋತಿಯ ಸಂಕೇತವಾಗಿ 16 ಗಣ-ಚಕ್ರವರ್ತಿ, 9 ಮಲ್ಲ ಮತ್ತು 9 ಲಿಚ್ಚಾವಿ ಅವರು ತಮ್ಮ ಗಣರಾಜ್ಯದಲ್ಲಿ ದೀಪ ಬೆಳಗಿಸಿ ದ್ವಾರವನ್ನು ಬೆಳಗಿದರು. ಜೈನರಿಗೆ ಇದು ವರ್ಷದ ಪ್ರಾರಂಭದ ದಿನ. ಆದರೆ ಆಚಾರ್ಯ ಬೆನಸೆನ್ ಬರೇದಿರುವ ಹರಿವಂಶ ಪುರಾಣದಲ್ಲಿ ದೀಪಾಲಿಕಯಾ (ದೀಪಾವಳಿ) ಬಗ್ಗೆ ಉಲ್ಲೇಖವಿದೆ. ದೀಪಾಲಿಕಯಾ ಎಂದರೆ ಪ್ರಕಾಶವು ದೇಹವನ್ನು ತ್ಯಜಿಸುವುದು.

ಬದುಕಿನ ದೀವಟಿಗೆ ಹಚ್ಚುವ ದೀಪಾವಳಿಯ ಎರಡು ಮುಖಗಳುಬದುಕಿನ ದೀವಟಿಗೆ ಹಚ್ಚುವ ದೀಪಾವಳಿಯ ಎರಡು ಮುಖಗಳು

ಸಿಖ್ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. 1620 ರಲ್ಲಿ ಸಿಕ್ಕರ ಆರನೆಯ ಗುರು ಹರಗೋಬಿಂದ್ ಸಿಂಗ ಗ್ವಾಲಿಯರ್ನ್ ಕೋಟೆಯಲ್ಲಿ ಬಂಧಿತರಾಗಿದ್ದರು. ಈ ವೇಳೆ 52 ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.

 ಭಾರತೀಯರ ದೊಡ್ಡ ಹಬ್ಬ

ಭಾರತೀಯರ ದೊಡ್ಡ ಹಬ್ಬ

ಕಾರ್ತಿಕ ಅಮವಾಸ್ಯೆಗೆ ಭಾರತದ ಪ್ರತಿಯೊಂದು ಮನೆಯಲ್ಲಿ ದೀಪಗಳನ್ನು ಬೆಳಗಿಸಿ ಅಬಾಲ ವೃಧ್ದರೂ ಸಂತೋಷ ಪಡುತ್ತಾರೆ. ಎಲ್ಲರೂ ತಮ್ಮ ತಮ್ಮ ಮನೆ, ಗುಡಿ ಗುಂಡಾರಗಳನ್ನು ಶುಚಿ ಗೊಳಿಸಿ, ಬಣ್ಣಗಳಿಂದ ಶೃಂಗರಿಸುತ್ತಾರೆ. ದೀಪಾವಳಿ ಭಾರತೀಯರ ಒಂದು ದೊಡ್ಡ ಹಬ್ಬ.

ಅವಳಿ' ಎಂದರೆ ಮಾಲೆ, ಸಾಲು ಎಂದರ್ಥ. ಹಬ್ಬದ ದೃಷ್ಟಿಯಿಂದ ನೋಡಿದರೆ ದೀಪಾವಳಿ ದೀಪಗಳ ಸಾಲಿನಂತೆ ಹಬ್ಬಗಳ ಸಾಲೂ ಹೌದು. ನೀರು ತುಂಬುವ ಹಬ್ಬದಿಂದ ಆರಂಭವಾಗಿ ನರಕಚತುರ್ದಶಿ, ಧನತೇರಸ, ಬಲಿಪಾಡ್ಯಮಿ, ಭಾವನಬಿದಿಗೆ, ಅಕ್ಕನ ತದಿಗೆ, ಪಂಚಮಿಯ ವರೆಗೆ ಪ್ರತಿದಿನವೂ ಹಬ್ಬ.

ವ್ಯಾಪಾರಸ್ಥರು ತಮ್ಮ ಹಳೆ ಖಾತೆಗಳನ್ನು ಮುಕ್ತಾಯ ಮಾಡಿ ಹೊಸ ಖಾತೆಯನ್ನು ಪ್ರಾರಂಭ ಮಾಡುತ್ತಾರೆ. ಧನ ದೇವತೆ ಲಕ್ಷ್ಮೀ'ಯನ್ನು ಇದೇ ಸಮಯದಲ್ಲಿ ಆವಾಹನೆ ಮಾಡಿ ಪೂಜಿಸಲಾಗುತ್ತದೆ.

 ದೀಪಗಳಿಗೆ ವಿಶೇಷ ಮಹತ್ವ

ದೀಪಗಳಿಗೆ ವಿಶೇಷ ಮಹತ್ವ

ದೀಪಾವಳಿ ಬೆಳಕಿನ ಹಬ್ಬವಾಗಿದ್ದು, ದೀಪಗಳಿಗೆ ಈ ಹಬ್ಬದಲ್ಲಿ ವಿಶೇಷ ಮಹತ್ವ ಇದೆ. ದೀಪದಾನವು ಈ ಹಬ್ಬದಲ್ಲಿ ಮಾಡುವ ವಾಡಿಕೆ ಇದೆ. ಸ್ಥೂಲ ದೀಪದ ಜೊತೆಗೆ ಆತ್ಮಜ್ಯೋತಿಯನ್ನು ಬೆಳಗಿಸಿದರೆ ನಮ್ಮ ಜೀವನ ಪರಿಪೂರ್ಣವಾಗುತ್ತದೆ. ಪ್ರತಿ ಒಂದು ಹಬ್ಬಕ್ಕೆ ತನ್ನದೇ ಆದ ಹಿನ್ನಲೆ ಇದ್ದು, ಆಧ್ಯಾತ್ಮಿಕ ರಹಸ್ಯವನ್ನು ತಿಳಿಸಿಕೊಡುವುದರ ಜೊತೆಗೆ ಅದನ್ನು ತಮ್ಮ ನಿತ್ಯ ಜೀವನದಲ್ಲಿ ಸಹಜವಾಗಿ ಹೇಗೆ ಅಳವಡಿಕೊಳ್ಳುಬೇಕು, ಎನ್ನುವುದನ್ನು ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಹೇಳಲಾಗುತ್ತದೆ.

ಸುಜ್ಞಾನದ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ ಆಚರಣೆಯ ಮಹತ್ವಸುಜ್ಞಾನದ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ ಆಚರಣೆಯ ಮಹತ್ವ

 ಲಾಕ್ಷಣಿಕ ಭಾಷೆಯ ರೂಪದಲ್ಲಿ ವರ್ಣನೆ

ಲಾಕ್ಷಣಿಕ ಭಾಷೆಯ ರೂಪದಲ್ಲಿ ವರ್ಣನೆ

ದೀಪಾವಳಿಯ ಬಲಿ' ರಾಜಾ ಮತ್ತು ನರಕಾಸುರನ ಎರಡು ಕಥೆಗಳು ಲಾಕ್ಷಣಿಕ ಭಾಷೆಯ ರೂಪದಲ್ಲಿ ವರ್ಣನೆ ಮಾಡಲಾಗಿದೆ. ಈಶ್ವರೀಯ ಜ್ಞಾನದ ದೃಷ್ಟಿಯಲ್ಲಿ ನೊಡಿದಾಗ ನರಕಾಸುರ' ಮಾಯೆ ಅಥವಾ ಮನೋವಿಕಾರಗಳ ರೂಪವಾಗಿದೆ. ಕಾಮ, ಕ್ರೋಧ, ಲೋಭ, ಮೋಹ, ಹಾಗೂ ಅಹಂಕಾರಗಳು ಆಸುರಿ ಲಕ್ಷಣಗಳು ಮತ್ತು ನರಕದ ದ್ವಾರ ಆಗಿವೆ. ಈ ವಿಕಾರಗಳನ್ನು ಜಯಿಸುವುದು ಎಂದರೆ ಬಲಿ' ಕೊಡುವುದು ಎಂದು ಹೇಳಲಾಗುತ್ತದೆ.

ವಿಶ್ವದ ಇತಿಹಾಸದಲ್ಲಿ ನಾಲ್ಕು ಯುಗಗಳು ಇವೆ. ಸತ್ಯಯುಗ, ತ್ರೆತಾಯುಗ, ದ್ವಾಪರಯುಗ, ಮತ್ತು ಕಲಿಯುಗ. ಈ ಕಲಿಯುಗದ ಅಂತಿಮ ಸಮಯವು ಪಂಚವಿಕಾರ ಮತ್ತು ಆಸುರಿಗುಣಗಳ ಸಾಮ್ರಾಜ್ಯದ ಸಮಯವಾಗಿದೆ. ಪ್ರತಿಯೊಬ್ಬ ನರ-ನಾರಿಯರ ಮನಸ್ಸಿನ ಮೇಲೆ ವಿಕಾರಗಳ ರಾಜ್ಯ ಇದೆ. ಇದಕ್ಕೆ ನರಕಾಸುರ" ಅಥವಾ ರಾಜಾಬಲಿಯ" ಅಧಿಪತ್ಯ ಎಂದು ಹೇಳಲಾಗುತ್ತದೆ.

ಭಾರತವು ಸತ್ಯಯುಗದಲ್ಲಿ ಸ್ವರ್ಗವಾಗಿತ್ತು ಅಲ್ಲಿನ ಮನುಷ್ಯರೆಲ್ಲರು ದೇವಿ-ದೇವತೆಗಳಾಗಿದ್ದರು. ಅವರೇ ಜನ್ಮ ಮರಣದ ಚಕ್ರದಲ್ಲಿ ಬರುತ್ತಾ ಈಗ ನರಕದಲ್ಲಿ ನರಕಾಸುರ' ಅಥವಾ ಬಲಿ'ಯ ಅಧೀನರಾಗಿದ್ದಾರೆ. ಆತ್ಮಜ್ಞಾನ ಮತ್ತು ನಿರಾಕಾರ ಶಿವನ ಧ್ಯಾನದಿಂದ ನಾವು ಪುನಃ ಬಂಧನಮುಕ್ತರಾಗಲು ಸಾಧ್ಯವಿದೆ.

 ಆತ್ಮಜ್ಞಾನ ಎಂದರೆ...

ಆತ್ಮಜ್ಞಾನ ಎಂದರೆ...

ಆತ್ಮಜ್ಞಾನ ಎಂದರೆ ಆತ್ಮದೀಪವನ್ನು ಬೆಳಗಿಸುವುದು. ನಾನು ಒಂದು ಜ್ಯೋತಿ, ಜಾತಿ ಇಲ್ಲದ ಅತಿಸೂಕ್ಷ್ಮ ಆತ್ಮಜ್ಯೋತಿ. ಶರೀರದ ಹಣೆಯ ಮಧ್ಯದಲ್ಲಿ ಹೊಳೆಯುವ ಚ್ಯೆತನ್ಯ ಜ್ಯೋತಿ, ದೇಹ ಎಂಬ ರಥದ ಸಾರಥಿ ನಾನು ಆತ್ಮ. ದೇಹದ ಮೂಲಕ ಈ ಸೃಷ್ಟಿ ನಾಟಕದಲ್ಲಿ ಪಾತ್ರ ಅಭಿನಯಿಸುವ ಪಾತ್ರಧಾರಿ ನಾನು. ಈ ರೀತಿ ನಿತ್ಯಚಿಂತನೆ ಮಾಡಬೇಕು. ಇದನ್ನೇ ಆತ್ಮಾನುಭೂತಿ ಎಂದು ಕರೆಯಲಾಗುತ್ತದೆ. ಆತ್ಮಜ್ಯೋತಿಯನ್ನು ಬೆಳಗಿಸಲು ಜ್ಞಾನಘೃತ ಬೇಕು.

ಎರಡನೆದಾಗಿ, ಸರ್ವ ಆತ್ಮರ ತಂದೆಯಾದ ಪರಮಜ್ಯೋತಿಯ ಪರಿಚಯ ಅತಿ ಅವಶ್ಯಕ. ಪರಮಾತ್ಮನು ನಿರಾಕಾರ, ಅಯೋನಿಜ, ಅಭೊಕ್ತ, ಅಜನ್ಮ, ಅವ್ಯಕ್ತ, ಅಶರೀರಿ, ಅವಿಭಾಜ್ಯ, ಅಮರ, ಅವಿನಾಶಿ, ಸರ್ವಶ್ರೇಷ್ಠನಾದ, ಶಿವನು, ಅವನೇ ಅಲ್ಲಾ, ಅವನೆ ಈಶ್ವರ, ಅವನೇ ಗಾಡ್, ಓಂಕಾರನು, ದೇವನೊಬ್ಬ, ನಾಮ ಹಲವು, ಭಾವ ಒಂದೇ, ಭಾಷೆ ಹಲವು, ನಮ್ಮಲ್ಲೇಕೆ ಭೇದವೂ. ನಾನು ಹಿಂದು, ನಾನು ಮುಸಲ್ಮಾನ, ಕ್ರೈಸ್ತರೆಂಬ ಭೇದವೂ. ನಾಳೆ ನಾಡನಾಳುವಂತಾ ಮಕ್ಕಳಲ್ಲಿ ಜಗಳವೂ.

ಬ್ರಹ್ಮ, ವಿಷ್ಣು, ಬಸವ, ಏಸು, ನಾನಕ ಪೈಗಂಬರೆಲ್ಲ ಒಬ್ಬದೇವನ ಮಕ್ಕಳು. ಸರ್ವಧರ್ಮವನ್ನು ಬಿಟ್ಟು, ದೇಹ ಧರ್ಮವನ್ನು ಸುಟ್ಟು, ನಿರಾಕಾರ ಜೋತಿರ್ಬಿಂದು ತಂದೆ ಶಿವನ ನೆನೆಸಿದಾಗ ಮುಕ್ತಿ ಮತ್ತು ಜೀವನಮುಕ್ತಿಯು ಪ್ರಾಪ್ತವಾಗುವುದು. ಹೀಗೆ ನಾನು ಆತ್ಮಜ್ಯೋತಿಯಾಗಿ ಪರಮಜ್ಯೋತಿಯನ್ನು ನೆನಪು ಮಾಡುವುದಕ್ಕೆ ಸಹಜ ರಾಜಯೋಗವೆಂದು ಹೇಳುತ್ತಾರೆ.

ಸುಜ್ಞಾನದ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ ಆಚರಣೆಯ ಮಹತ್ವಸುಜ್ಞಾನದ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ ಆಚರಣೆಯ ಮಹತ್ವ

 ಜ್ಞಾನದ ಜ್ಯೋತಿ ಬೆಳಗಿಸಿ

ಜ್ಞಾನದ ಜ್ಯೋತಿ ಬೆಳಗಿಸಿ

ದೀಪಾವಳಿಯ ದಿನ ಪ್ರತಿಯೊಬ್ಬರು ತಮ್ಮ ಮನೆಗಳನ್ನು, ಸುಣ್ಣ ಬಣ್ಣಗಳಿಂದ ಶುಚಿಗೊಳಿಸಿ, ದೀಪಾಲಂಕಾರವನ್ನು ಮಾಡುತ್ತಾರೆ. ಅದರ ಜೊತೆಗೆ ಮನಸ್ಸಿನಲ್ಲಿ ಇರುವ ಅಮವಾಸ್ಯೆಯ ಪ್ರತೀಕವಾದ ಅಜ್ಞಾನ ಅಂಧಕಾರವನ್ನು ದೂರ ಮಾಡಲು ಅಂತರ ಮನದಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗಿಸಬೇಕಾಗಿದೆ.

ನಿರಾಕಾರನಾಗಿರುವ ಶಿವನ ಸಂಬಂಧದಿಂದ ಅಂದರೆ ರಾಜಯೋಗದಿಂದ ಅನೇಕ ಶಕ್ತಿಗಳ, ಸರ್ವಗುಣಗಳ ಪ್ರಾಪ್ತಿ ಆಗುತ್ತದೆ. ಆದ್ದರಿಂದಲೇ ಭಕ್ತರು ಭಗವಂತನ ಮುಂದೆ ಅಸತೋಮಾ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ' ಎಂದು ಹಾಡುತ್ತಾರೆ. ದೀಪ ದಾನದ ಅರ್ಥವು ಜ್ಞಾನದಾನವೇ ಆಗಿದೆ.

ದೀಪಾವಳಿಯ ದಿನದಂದು ಹೊಸ ಬಟ್ಟೆಗಳನ್ನು ಧರಿಸುತ್ತಾರೆ, ಸಿಹಿಯನ್ನು ಹಂಚುತ್ತಾರೆ, ಹಳೆ ಖಾತೆಯನ್ನು ಸಮಾಪ್ತ ಮಾಡಿ ಹೊಸ ಖಾತೆಯನ್ನು ಶುರು ಮಾಡುತ್ತಾರೆ. ಇದರ ಜೊತೆ ಜೊತೆಗೆ ಹೊಸ ಭಾವ, ಮಧುರ ನುಡಿ, ಸ್ನೇಹ, ಪ್ರೀತಿಯ ಅವಶ್ಯಕತೆ ಇದೆ. ಹಳೆ ಕರ್ಮದ ಖಾತೆಯನ್ನು ರಾಜಯೋಗದ ತಪಸ್ಸಿನ ಬಲದಿಂದ ಸಮಾಪ್ತಿ ಮಾಡಬೇಕಾಗಿದೆ. ನಿರಾಕಾರ ಪರಮಜ್ಯೋತಿ ಪರಮಾತ್ಮನು ಪುನಃ ಪವಿತ್ರತೆ, ಸುಖ ಶಾಂತಿ ಸಮೃದ್ಧಿಯ ರಾಮರಾಜ್ಯ' ಸ್ಥಾಪನೆ ಮಾಡುತ್ತಿರುವ ಸಂಕೇತವು ದೀಪಾವಳಿ.

ಹಾಗಾದರೆ ಬನ್ನಿ, ನಾವು ಈ ವರ್ಷದ ದೀಪಾವಳಿಯನ್ನು ಆತ್ಮದೀಪವನ್ನು ಬೆಳಗಿಸಿ, ಈಶ್ವರಾನುಭೂತಿಯನ್ನು ಮಾಡುತ್ತಾ ಅನ್ಯರಿಗೂ ಜ್ಞಾನದೀಪವನ್ನು ದಾನ ಮಾಡಿ ಆಚರಿಸೊಣ.

ಶರನ್ನವರಾತ್ರಿಯ 21ನೇ ದಿನಕ್ಕೇ ದೀಪಾವಳಿ; ಏನಿದು ರಾಮಾಯಣ ನಂಟು?ಶರನ್ನವರಾತ್ರಿಯ 21ನೇ ದಿನಕ್ಕೇ ದೀಪಾವಳಿ; ಏನಿದು ರಾಮಾಯಣ ನಂಟು?

English summary
Diwali is the largest festival in the world. This festival is of great significance in the Hindu, Jain, Buddha and Sikh religions. Here's a detailed article about this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X