ಉಡುಪಿ: ಹಣತೆಗಳಿಗೆ ಬಣ್ಣ ನೀಡಿ ಜೀವನದ ದಾರಿ ಹುಡುಕಿದ ವಿದ್ಯಾರ್ಥಿನಿ
ಉಡುಪಿ, ನವೆಂಬರ್ 1: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಶುರುವಾಗಿದ್ದು, ದೀಪಾವಳಿಯ ಅಂದ ಹೆಚ್ಚಿಸುವುದು ಚಂದದ ಹಣತೆಗಳು. ಮಾರುಕಟ್ಟೆಗಳಲ್ಲಿ ತರಹೇವಾರಿ ಹಣತೆಗಳು ಬರುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಬಣ್ಣದ ಹಣತೆಗಳನ್ನು ತಯಾರಿಸಿ, ಉಡುಪಿಯ ವಿದ್ಯಾರ್ಥಿನಿಯೊಬ್ಬಳು ಮನೆಗೆ ಆಸೆರೆಯಾಗುತ್ತಿದ್ದಾಳೆ. ಹಣತೆ ಬೆಳಗಿದಂತೆ ತನ್ನ ಕನಸು ಬೆಳಗಬಹುದು ಎಂಬ ಆಶಾಭಾವನೆಯಲ್ಲಿದ್ದಾಳೆ.
ಬೆಳಕಿನ ಹಬ್ಬ ದೀಪಾವಳಿಗೆ ಕೆಲವೇ ದಿನಗಳಷ್ಟೇ ಬಾಕಿ ಇದೆ. ದೀಪದ ಹಣತೆಗಳು ಬೆಳಕಿನ ಹಬ್ಬದ ಅಂದವನ್ನು ಇಮ್ಮಡಿಗೊಳಿಸುತ್ತವೆ. ಸದ್ಯ ಮಾರುಕಟ್ಟೆಯಲ್ಲಿ ಬಣ್ಣ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್ ಶುರುವಾಗಿದೆ. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಬೇಕು, ತನ್ನ ವಿದ್ಯಾಭ್ಯಾಸಕ್ಕೆ ಸಹಕಾರಿ ಆಗಬೇಕು ಎಂಬ ಸುಂದರ ಕನಸನ್ನು ಇಟ್ಟುಕೊಂಡು ಹಣತೆಗಳಿಗೆ ವಿಧವಾದ ಬಣ್ಣ ಬಳಿಯುತ್ತಿದ್ದಾಳೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೊಪ್ಪಲಂಗಡಿ ನಿವಾಸಿ ರಕ್ಷಾ ಹಣತೆಗಳಿಗೆ ಬಣ್ಣಗಳ ಚಿತ್ತಾರ ಬಿಡಿಸುತ್ತಿರುವ ವಿದ್ಯಾರ್ಥಿನಿ. ಪ್ರಸ್ತುತ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪೈನ್ ಆರ್ಟ್ಸ್ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿರುವ ಈಕೆಗೆ ಬಾಲ್ಯದಿಂದಲೂ ಚಿತ್ರ ಬಿಡಿಸುವುದು ಅಂದರೆ ಈಕೆಗೆ ಪಂಚಪ್ರಾಣ.

ಅಂಗವಿಕಲ ತಂದೆ, ಕೂಲಿ ಕೆಲಸ ಮಾಡುವ ತಾಯಿ. ಕಾಲೇಜು ವ್ಯಾಸಂಗ ಮಾಡುವ ತಮ್ಮ. ಇವರೊಂದಿಗೆ ಬಾಡಿಗೆ ಮನೆಯಲ್ಲಿ ಬಡತನದ ಜೀವನ ನಡೆಸುವ ರಕ್ಷಾ, ತನ್ನ ವಿಶಿಷ್ಟ ಚಿತ್ರ ಕಲೆಯನ್ನೇ ಬಂಡವಾಳವಾಗಿಸಿ, ಹಣತೆಗಳಿಗೆ ಬಣ್ಣ ಬಳಿದು ಮಾರಾಟಕ್ಕೆ ಮುಂದಾಗಿದ್ದಾಳೆ.
ಬೆಂಗಳೂರಿನಿಂದ ಕಚ್ಚಾ ವಸ್ತುಗಳನ್ನು ತರಿಸಿ, ಮನೆಯಲ್ಲೇ ಹಣತೆಗಳಿಗೆ ವಿವಿಧ ಬಣ್ಣ ಬಳಿದು, ಹಣತೆಗಳ ಮೆರಗನ್ನು ಹೆಚ್ಚಿಸುತ್ತಿದ್ದಾಳೆ. ಈಕೆಯ ಕೈಚಳಕದಿಂದ ಮೂಡಿ ಬರುವ ಬಣ್ಣ ಬಣ್ಣದ ಹಣತೆಗಳಿಗೆ, ಕರಾವಳಿ ಮಾತ್ರವಲ್ಲದೇ ಹೊರ ರಾಜ್ಯದಲ್ಲೂ ಈ ಬಾರಿ ಬೇಡಿಕೆ ಇದೆಯಂತೆ. ದೀಪಾವಳಿಯ ಈ ಸಂದರ್ಭದಲ್ಲಿ ರಕ್ಷಾ ಫುಲ್ ಬ್ಯುಸಿಯಾಗಿದ್ದಾರೆ.

ರಕ್ಷಾಳಿಗೆ ಸ್ವಂತ ಸೂರು ಕಟ್ಟಿಕೊಳ್ಳಬೇಕು ಅಂತ ಕನಸಿದೆ. ಜೊತೆಗೆ, ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡಬೇಕು ಅಂತ ಆಸೆ ಇದೆ. ಹೀಗಾಗಿ ರಾತ್ರಿ ಹಗಲೆನ್ನದೇ ಹಣತೆಗಳಿಗೆ ಚಿತ್ತಾರ ಬಿಡಿಸುತ್ತಿದ್ದಾರೆ. ಇವರ ಶ್ರಮಕ್ಕೆ ಬೆನ್ನೆಲುಬಾಗಿ ಸ್ನೇಹಿತರು ಸಾಥ್ ನೀಡುತ್ತಿದ್ದಾರೆ.

ಅಂದಹಾಗೆ, ವಿದ್ಯಾಭ್ಯಾಸ ಜೊತೆಗೆ ತನ್ನ ವಿಶಿಷ್ಟ ಕಲೆಯನ್ನು ಬಳಸಿಕೊಂಡು ಮನೆಯವರಿಗೆ ನೆರವಾಗುವ ರಕ್ಷಾ ಇತರಿಗೂ ಮಾದರಿಯಾಗಿದ್ದಾಳೆ. ದೀಪಾವಳಿಯಲ್ಲಿ ಬಣ್ಣ ಬಣ್ಣದ ಹಣತೆಗಳು ಬೆಳಗಿದಂತೆ, ಈಕೆಯ ಜೀವನವೂ ಬೆಳಗಲಿ, ಕಂಡ ಕನಸು ಕನಸಾಗಲಿ ಅನ್ನುವುದು ನಮ್ಮ ಆಶಯ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications