ಈ ಬಾರಿಯ ದೀಪಾವಳಿ ಹೊಗೆಯ ಚೆಲ್ಲಾಟವಾಗದೆ ಪರಿಸರ ಸ್ನೇಹಿಯಾಗಲಿ
ಬೆಳಕಿನ ಹಬ್ಬದ ದೀಪಾವಳಿಯನ್ನು ಪಟಾಕಿ ಬದಲು ಹಣತೆ ಬೆಳಗುವುದರ ಮೂಲಕ ಮತ್ತಷ್ಟು ಮೆರುಗು ನೀಡಬಹುದು.
ದೀಪಾವಳಿಯು ಜ್ಞಾನದ ಸಂಕೇತವೆನ್ನುವುದು ಮೂಲೆಗುಂಪಾಗಿ ಕಿವಿಗರಚುವ ಅಸಹನೀಯ ಸದ್ದಿನ, ಆಘಾತಕಾರಿ ಸ್ಫೋಟ ಮತ್ತು ಹೊಗೆಯ ಚೆಲ್ಲಾಟವಾಗಿದೆ.
ಇನ್ನೇನು ದೀಪಾವಳಿಗೆ ಒಂದು ವಾರ ಬಾಕಿ ಇದೆ. ಬಟ್ಟೆಗಳು, ಗೃಹಾಲಂಕಾರ ವಸ್ತುಗಳ ಜೊತೆ ಜನರು ಪಟಾಕಿಗಳನ್ನು ಕೊಳ್ಳಲು ಸಿದ್ಧರಾಗಿದ್ದಾರೆ. ಆದರೆ ಪಟಾಕಿ ಬಿಟ್ಟು ಹಣತೆಯನ್ನು ಬೆಳಗಿ ಎನ್ನುವುದು ನಮ್ಮ ಆಶಯವಾಗಿದೆ.
ಯಾವುದೇ ಬಗೆಯ ಪಟಾಕಿ ಸಿಡಿಸಿದ ಹಲವು ವಾರಗಳ ನಂತರವೂ ವಾತಾವರಣದಲ್ಲಿ ಮೆಗ್ನೀಶಿಯಂ, ಗಂಧಕದ ನೈಟ್ರೇಟ್ , ಸಾರಜನಕದ ಡೈ ಆಕ್ಸೈಡ್ ಮುಂತಾದ ನಂಜಿನ ವಸ್ತುಗಳು ಕಡಿಮೆಯಾಗುವುದಿಲ್ಲ. ಉಸಿರಾಟ ತೊಂದರೆ, ಕಣ್ಣುರಿ , ಗಂಟಲುನೋವು ಬಾಧಿಸುತ್ತದೆ.

ದೀಪಾವಳಿ ಬಂದರೆ ಸಾಕು ಅಯ್ಯೋ ದೀಪಾವಳಿ ಬಂತಪ್ಪ ನಾನು ಎಲ್ಲಾದ್ರೂ ಹೋಗಿಬಿಡ್ತೀನಿ ಎಂದು ಹೇಳುವವರೇ ಹೆಚ್ಚು. ಯಾಕಪ್ಪಾ ಹಬ್ಬ ಆಚರಣೆ ಬಿಟ್ಟು ಊರು ಬಿಟ್ಟು ಹೋಗುವ ಮಾತು ಆಡ್ತಾರಲ್ಲಾ ಎಂದು ನೋಡ್ತಿದೀರ.
ಬರಬರುತ್ತ ಹಬ್ಬಗಳ ಆಶಯಗಳುಅಯೋಮಯವಾಗುತ್ತಿವೆ. ಆಡಂಬರ, ಅಬ್ಬರ, ಗೌಜು, ಶ್ರೀಮಂತಿಕೆ ತೋರಿಕೆ ದುಂದುಗಾರಿಕೆಗಳ ಮೆರವಣಿಗೆಯೇ ಹಬ್ಬವೆನಿಸಿದೆ. ನಮ್ಮ ಲಂಗುಲಗಾಮಿಲ್ಲದ ಸಡಗರಗಳು ವ್ಯಾಪಾರಿಗಳಲ್ಲಿ ಲಾಭಕೋರತನವನ್ನು ಹೆಚ್ಚಿಸಿದೆ.
ದೀಪಾವಳಿ ಮರುದಿನ ಬೆಂಗಳೂರಲ್ಲಂತೂ ಕಸದ ರಾಶಿಯದ್ದೇ ಕಾರುಬಾರು, ಕಾಗದ ಚಿಂದಿ, ಅರೆಸುಟ್ಟ ರಾಸಾಯನಿಕಗಳು, ಕುಡಿಕೆ ಚೂರು, ಲೋಹದ ಕಡ್ಡಿಗಳು, ತಂತಿಗಳುವಗೈರೆ ಟನ್ನುಗಟ್ಟಲೆ. ಇದರ ವಿಲೇವಾರಿಯು ಆಡಳಿತಕ್ಕೆ ದೊಡ್ಡ ಸವಾಲಾಗಿದೆ.
ಈ ಇನ್ನೊಂದು ಹೆಜ್ಜೆ ಮುಂದಿಡಬೇಕಿದೆ.ಆಯಾ ಬಡಾವಣೆಗಳಲ್ಲಿನ ಮೈದಾನಗಳಲ್ಲೇ ಸಾವ್ರತ್ರಿಕವಾಗಿ ಪಟಾಕಿ ಸಿಡಿಸುವುದು , ಗಾಳಿಪಟ ಹಾರಿಸಿ ಸಂಭ್ರಮಿಸುವ ಹಾಗೆ . ಕೆರೆಯಂಗಳವಾದರೆ ಇನ್ನೂ ಚೆಂದ. ಇದರಿಂದ ಎಲ್ಲರೂ ಒಟ್ಟಾಗಿ ಬಾಣ, ಬಿರುಸು, ಮತಾಪು ಹಚ್ಚುವ ಉಲ್ಲಾಸ.
ದೀಪಗಳ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪರಿಸರಕ್ಕೆ ಹಾನಿಕಾರಕ ಪಟಾಕಿಗಳನ್ನು ಸಿಡಿಸಿ ಮಾಲಿನ್ಯ ಮಾಡುವುದನ್ನು ತಡೆಯಲು ಪರಿಸರ ರಕ್ಷಣೆಗೆ ಸರ್ಕಾರ ಮುಂದಾಗಿದೆ.
ಈ ಹಿಂದೆ 2018ರಲ್ಲಿ ದೀಪಾವಳಿ ಹಬ್ಬಕ್ಕೂ ಮುಂಚೆಯೇ ಸುಪ್ರೀಂ ಕೋರ್ಟ್ ಪರಿಸರ ಮಾಲಿನ್ಯ ಉಂಟುಮಾಡುವ ಪಟಾಕಿಗಳ ತಯಾರಿಕೆ ಹಾಗೂ ಮಾರಾಟಕ್ಕೆ ನಿಷೇಧ ಹೇರಿತ್ತು. ಹಾಗೆಯೇ ಕಡಿಮೆ ಕೆಮಿಕಲ್ ಬಳಸಿ ತಯಾರಿಕೆ ಮಾಡುವ ಹಸಿರು ಪಟಾಕಿಗಳ ತಯಾರಿಕೆ ಹಾಗೂ ಮಾರಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಆದೇಶಿಸಿತ್ತು.
ಆದರೆ ಆಗ ಈ ಬಗ್ಗೆ ಹಲವು ಪಟಾಕಿ ತಯಾರಕರು ಹಾಗೂ ಮಾರಾಟಗಾರರಿಗೆ ಸರಿಯಾಗಿ ಮಾಹಿತಿ ಇಲ್ಲದ ಕಾರಣಕ್ಕೆ ಆಗ ಹಸಿರು ಪಟಾಕಿ ಮಾರುಕಟ್ಟೆಗೆ ಬಂದಿರಲಿಲ್ಲ. ಆದ್ದರಿಂದ ಈ ಬಾರಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ತಯಾರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ಪಟಾಕಿಗಳು ಮಾರುಕಟ್ಟೆಗೆ ಲಗ್ಗೆ ಇಡಲಿವೆ.
ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಈ ಹಸಿರು ಪಟಾಕಿಯಿಂದ ಶೇ.30ರಷ್ಟು ಮಾಲಿನ್ಯ ಕಡಿಮೆಯಾಗಲಿದೆ. ಆದ್ದರಿಂದ ಭಾವನೆ ಹಾಗೂ ಪರಿಸರಕ್ಕೆ ಅಡ್ಡಿಯಾಗದಂತೆ ಪರಿಸರ ಸ್ನೇಹಿ ಪಟಾಕಿಗಳನ್ನು ಪರಿಚಯಿಸಲಾಗುತ್ತಿದೆ.
ಹಸಿರು ಪಟಾಕಿಗಳನ್ನು ವೈಜ್ಞಾನಿಕ ಹಾಗೂ ಕೈಗಾರಿಕ ಸಂಶೋಧನ ಕೌನ್ಸಿಲ್(ಸಿಎಸ್ಐಆರ್) ತಯಾರಿಸಿದೆ. ಸಾಮಾನ್ಯ ಪಟಾಕಿಗಳಿಗಿಂತ ಹಸಿರು ಪಟಾಕಿಗಳಲ್ಲಿ ಕಡಿಮೆ ಕೆಮಿಕಲ್ ಬಳಸಲಾಗುತ್ತದೆ. ಹೀಗಾಗಿ ಇದರಿಂದ ಪರಿಸರಕ್ಕೆ ಹೆಚ್ಚು ಹಾನಿ ಆಗುವುದಿಲ್ಲ. ಜೊತೆಗೆ ಸಾಮಾನ್ಯ ಪಟಾಕಿಗಳಿಂತ ಈ ಹಸಿರು ಪಟಾಕಿಗಳ ಬೆಲೆಯೂ ಕಡಿಮೆ ಇದೆ ಎನ್ನಲಾಗಿದೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications