ಮನೆಯ ಸಂತೋಷಕ್ಕಾಗಿ ದಸರಾ ದಿನದಂದು ಈ 5 ಕೆಲಸಗಳನ್ನು ಮಾಡಿ...
ದಸರಾ ಹಬ್ಬ ಅಂದರೆ ವಿಜಯದಶಮಿಯನ್ನು ಇಡೀ ದೇಶದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅಶ್ವಿನ್ ಮಾಸದ ಶುಕ್ಲ ಪಕ್ಷದ ಹತ್ತನೆಯ ದಿನದಂದು ಈ ಹಬ್ಬವನ್ನು ಆಚರಿಸುವ ಸಂಪ್ರದಾಯವಿದೆ. ಈ ದಿನ ಲಂಕಾದ ರಾಜ ರಾವಣನನ್ನು ಶ್ರೀರಾಮನು ಕೊಂದನು. ಈ ಹತ್ಯೆಯನ್ನು ಅಧರ್ಮದ ಮೇಲೆ ಧರ್ಮದ ವಿಜಯವಾಗಿ ನೋಡಲಾಗುತ್ತದೆ. ಹೀಗಾಗಿ ವಿಜಯದಶಮಿಯ ದಿನದಂದು ಕೆಲವು ವಿಶೇಷ ಕ್ರಮಗಳನ್ನು ಕೈಗೊಂಡರೆ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಬಹುದು.
ದಾನ ಮಾಡುವುದು
ಹಣಕಾಸಿನ ಬಿಕ್ಕಟ್ಟು, ಸಾಲ ಅಥವಾ ಕಾಯಿಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ದಸರಾ ದಿನದಂದು ದಾನ ಮಾಡುವುದು ಪ್ರಯೋಜನಕಾರಿಯಾಗಿದೆ. ಈ ದಿನ ಬೆಳಿಗ್ಗೆ ಸ್ನಾನ ಮಾಡಿ ಶುದ್ಧವಾದ ಬಟ್ಟೆ ಧರಿಸಿ ದೇವಸ್ಥಾನಕ್ಕೆ ಹೋಗಿ ಮಾತೆಯ ಆಶೀರ್ವಾದ ಪಡೆಯಿರಿ. ಹೀಗೆ ಮಾಡುವುದರಿಂದ ಜೀವನದಲ್ಲಿ ಹಣದ ಸಮಸ್ಯೆಗಳು ಕೊನೆಗೊಳ್ಳುತ್ತವೆ. ನಿಮ್ಮ ಅದೃಷ್ಟ ಹೆಚ್ಚಾಗುತ್ತದೆ.

ನೀವು ಜೀವನದಲ್ಲಿ ಸಮಸ್ಯೆಗಳನ್ನು ಜಯಿಸಲು ಬಯಸಿದರೆ ವಿಶೇಷ ನೈವೇದ್ಯಗಳನ್ನು ಅರ್ಪಿಸುವ ಮೂಲಕ ದೇವಿಯನ್ನು ಸಂತೋಷಪಡಿಸಿ, ಆಕೆಯ ಆಶೀರ್ವಾದವನ್ನು ಪಡೆಯಬಹುದು. ಜೊತೆಗೆ ರಾವಣ ದಹನದ ಅಗ್ನಿಯಲ್ಲಿ ತೆಂಗಿನಕಾಯಿಯನ್ನು ಅರ್ಪಿಸಿ. ಎಲ್ಲಾ ಸಮಸ್ಯೆಗಳು ನಾಶವಾಗುತ್ತವೆ.
ರಾವಣ ದಹನ ಭಸ್ಮ
ರಾವಣ ದಹನದ ನಂತರ ರಾವಣನ ಚಿತಾಭಸ್ಮವನ್ನು ಮನೆಗೆ ತಂದರೆ ಅದು ತುಂಬಾ ಶುಭ. ಈ ಭಸ್ಮವನ್ನು ಮನೆಯ ತಿಜೋರಿಯಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಸಮೃದ್ಧಿ ನೆಲೆಸುತ್ತದೆ ಮತ್ತು ಹೊಸ ಗಳಿಕೆಯ ದಾರಿಗಳು ತೆರೆದುಕೊಳ್ಳುತ್ತವೆ. ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಣಲಿದೆ. ಒಂದು ವರ್ಷದವರೆಗೆ ಯಾವುದೇ ರೀತಿಯ ತೊಂದರೆ ಅಥವಾ ರೋಗವು ವ್ಯಕ್ತಿಯನ್ನು ಮುಟ್ಟುವುದಿಲ್ಲ.
ತುಳಸಿ ಗಿಡ
ವಿಜಯದಶಮಿಯಂದು ತುಳಸಿ ಸಸಿಯನ್ನು ಪೂಜಿಸಿದರೆ ತುಂಬಾ ಒಳ್ಳೆಯದು. ಹೀಗೆ ಮಾಡುವುದರಿಂದ ನಿಮ್ಮ ಶತ್ರುಗಳು ನಾಶವಾಗುತ್ತಾರೆ. ಇದರಿಂದಾಗಿ ನಿಮಗೆ ಹಾನಿ ಮಾಡಲು ಪ್ರಯತ್ನಿಸುವವರು ನಿಮ್ಮಿಂದ ದೂರ ಉಳಿಯುತ್ತಾರೆ. ವಿಶೇಷ ಆಚರಣೆಗಳೊಂದಿಗೆ ತುಳಸಿ ಗಿಡವನ್ನು ಪೂಜಿಸುವುದರಿಂದ ಮಾತೃದೇವತೆಯ ಆಶೀರ್ವಾದ ಸಿಗುತ್ತದೆ.
ಶಮಿ ಮರ
ಶಮಿ ಮರವು (ಬನ್ನಿ ಮರ) ಶಿವನಿಗೆ ಬಹಳ ಪ್ರಿಯವಾಗಿದೆ. ಈ ದಿನ ಈ ಮರವನ್ನು ಪೂಜಿಸುವುದು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಜಾತಕದಲ್ಲಿ ಶನಿ ದೋಷವನ್ನು ಕಡಿಮೆ ಮಾಡಲು ಬನ್ನಿ ಮರವನ್ನು ಪೂಜಿಸಬಹುದು. ಜೀವನದ ಅನೇಕ ತೊಂದರೆಗಳನ್ನು ಮುಕ್ತಿಯನ್ನು ಪಡೆಯಬಹುದು.
ಅಕ್ಟೋಬರ್ 15ರಿಂದ ಅಕ್ಟೋಬರ್ 23ರವರೆಗೆ ನವರಾತ್ರಿ ಪೂಜೆಯನ್ನು ಮಾಡಲಾಗುತ್ತದೆ. ಇಂದು ಅಂದರೆ ಒಂಬತ್ತನೇ ದಿನ ದುರ್ಗಾ ದೇವಿಯ ಒಂಬತ್ತನೇ ರೂಪ ಸಿದ್ಧಿದಾತ್ರಿಯನ್ನು ಪೂಜಿಸಲಾಗುತ್ತದೆ. ನಾಳೆ ಅಕ್ಟೋಬರ್ 24ರಂದು ವಿಜಯದಶಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ದಿನ ಮಹಿಷಾಸುರ ಎಂಬ ರಾಕ್ಷಸನನ್ನು ದುರ್ಗಾ ದೇವಿ ಸಂಹರಿಸುವ ಜಯದ ಸಂಕೇತವಾಗಿ ಆಚರಣೆ ಮಾಡಲಾಗುತ್ತದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications