Gandhi Jayanti 2023: ಮಹಾತ್ಮಾ ಗಾಂಧಿಯವರ ಜನ್ಮ ವಾರ್ಷಿಕೋತ್ಸವದ ಬಗ್ಗೆ ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ
ಭಾರತೀಯ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್ದಾಸ್ ಕರಮಚಂದ್ ಗಾಂಧಿಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರಿಂದ ಮಹಾತ್ಮ ಎಂಬ ಬಿರುದನ್ನು ಪಡೆದ ಗಾಂಧಿ ಅವರು ರಾಜಕಾರಣಿ, ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರು ಕೂಡ ಆಗಿದ್ದರು.
ಅವರ ಸಿದ್ಧಾಂತಗಳು ಮತ್ತು ಹೋರಾಟಗಳು 1947 ರಲ್ಲಿ ಭಾರತದ ಸ್ವಾತಂತ್ರ್ಯಕ್ಕೆ ಕಾರಣವಾದವು. ಹೀಗಾಗಿ ಅವರನ್ನು ಪ್ರೀತಿಯಿಂದ 'ಬಾಪು' ಮತ್ತು 'ರಾಷ್ಟ್ರದ ಪಿತಾಮಹ' ಎಂದು ಕರೆಯಲಾಗುತ್ತದೆ. ಸ್ವರಾಜ್ಯ (ಸ್ವ-ಆಡಳಿತ) ಮತ್ತು ಅಹಿಂಸೆಗಳಲ್ಲಿ ಇದ್ದ ಅವರ ಅಚಲವಾದ ನಂಬಿಕೆಯು ವಿಶ್ವಾದ್ಯಂತ ಪ್ರಶಂಸೆಯನ್ನು ಗಳಿಸಿತು.

ಗಾಂಧಿ ಜಯಂತಿಯ ಮಹತ್ವ
ಮಹಾತ್ಮ ಗಾಂಧಿಯವರು ಅಕ್ಟೋಬರ್ 2, 1869 ರಂದು ಗುಜರಾತ್ನ ಪೋರಬಂದರ್ನಲ್ಲಿ ಜನಿಸಿದರು. ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಆಚರಿಸಲು, ಗಾಂಧಿ ಜಯಂತಿಯನ್ನು ಪ್ರತಿ ವರ್ಷ ಭಾರತದಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ.
ಗಾಂಧಿಯವರು ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ನೀಡುವಲ್ಲಿ ಸಾಕಷ್ಟು ಶ್ರಮಿಸಿದರು. ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ಮಾ ಗಾಂಧಿ ಅವರು ಮುಂಚೂಣಿಯಲ್ಲಿದ್ದರು. ಅವರು ಅಸಹಕಾರ ಚಳುವಳಿ, ನಾಗರಿಕ ಅಸಹಕಾರ ಚಳುವಳಿ ಮತ್ತು ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಭಾರತದಲ್ಲಿ ವಿವಿಧ ಸ್ವಾತಂತ್ರ್ಯ ಚಳುವಳಿಗಳನ್ನು ಮುನ್ನಡೆಸಿದವರು. ಅವರ ಮಾತುಗಳು ಮತ್ತು ಕಾರ್ಯಗಳು ಭಾರತದಲ್ಲಿ ವಸಾಹತುಶಾಹಿ ಆಡಳಿತದ ವಿರುದ್ಧದ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನೇಕರನ್ನು ಪ್ರೇರೇಪಿಸಿತು.
ಅಹಿಂಸೆಯಲ್ಲಿ ಮಹತ್ಮಾ ಗಾಂಧಿಯವರ ನಂಬಿಕೆಯನ್ನು ಗೌರವಿಸಿ, ವಿಶ್ವಸಂಸ್ಥೆಯು ಅವರ ಜನ್ಮದಿನವಾದ ಅಕ್ಟೋಬರ್ 2 ಅನ್ನು ಅಂತರರಾಷ್ಟ್ರೀಯ ಅಹಿಂಸಾ ದಿನ ಎಂದು ಗೊತ್ತುಪಡಿಸಿತು.
ಗಾಂಧಿ ಜಯಂತಿಯನ್ನು ಹೇಗೆ ಆಚರಿಸಲಾಗುತ್ತದೆ?
ಮಹತ್ಮಾ ಗಾಂಧಿಯವರ ಜನ್ಮ ವಾರ್ಷಿಕೋತ್ಸವದಂದು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಪ್ರಾರ್ಥನೆ ಸೇವೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದಿನವನ್ನು ಆಚರಿಸಲಾಗುತ್ತದೆ.
ಸಾಂಸ್ಕೃತಿಕ ಚಟುವಟಿಕೆಗಳು, ದೇಶಭಕ್ತಿ ಗೀತೆಗಳು, ನೃತ್ಯಗಳು ಮತ್ತು ಮಹಾತ್ಮ ಗಾಂಧಿಯವರ ಬೋಧನೆಗಳ ಬಗ್ಗೆ ಭಾಷಣಗಳು ಸಹ ಆಚರಣೆಯ ಸಮಯದಲ್ಲಿ ಸಾಮಾನ್ಯವಾಗಿರುತ್ತವೆ. ರಾಷ್ಟ್ರದಾದ್ಯಂತದ ನಾಯಕರು ಮಹಾತ್ಮ ಗಾಂಧಿಯವರ ಸಮಾಧಿಯನ್ನು ಹೊಂದಿರುವ ನವದೆಹಲಿಯ ರಾಜ್ ಘಾಟ್ನಲ್ಲಿ ಗೌರವ ಸಲ್ಲಿಸುತ್ತಾರೆ. ಮಹತ್ಮಾ ಗಾಂಧಿಯವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು 1948 ರಲ್ಲಿ ನಾಥುರಾಮ್ ಗೋಡ್ಸೆಯಿಂದ ಹತ್ಯೆಗೀಡಾದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications