Gandhi Jayanti 2023: ಮಹಾತ್ಮಾ ಗಾಂಧಿಯವರ ಜನ್ಮ ವಾರ್ಷಿಕೋತ್ಸವದ ಬಗ್ಗೆ ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ
ಭಾರತೀಯ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್ದಾಸ್ ಕರಮಚಂದ್ ಗಾಂಧಿಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರಿಂದ ಮಹಾತ್ಮ ಎಂಬ ಬಿರುದನ್ನು ಪಡೆದ ಗಾಂಧಿ ಅವರು ರಾಜಕಾರಣಿ, ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರು ಕೂಡ ಆಗಿದ್ದರು.
ಅವರ ಸಿದ್ಧಾಂತಗಳು ಮತ್ತು ಹೋರಾಟಗಳು 1947 ರಲ್ಲಿ ಭಾರತದ ಸ್ವಾತಂತ್ರ್ಯಕ್ಕೆ ಕಾರಣವಾದವು. ಹೀಗಾಗಿ ಅವರನ್ನು ಪ್ರೀತಿಯಿಂದ 'ಬಾಪು' ಮತ್ತು 'ರಾಷ್ಟ್ರದ ಪಿತಾಮಹ' ಎಂದು ಕರೆಯಲಾಗುತ್ತದೆ. ಸ್ವರಾಜ್ಯ (ಸ್ವ-ಆಡಳಿತ) ಮತ್ತು ಅಹಿಂಸೆಗಳಲ್ಲಿ ಇದ್ದ ಅವರ ಅಚಲವಾದ ನಂಬಿಕೆಯು ವಿಶ್ವಾದ್ಯಂತ ಪ್ರಶಂಸೆಯನ್ನು ಗಳಿಸಿತು.

ಗಾಂಧಿ ಜಯಂತಿಯ ಮಹತ್ವ
ಮಹಾತ್ಮ ಗಾಂಧಿಯವರು ಅಕ್ಟೋಬರ್ 2, 1869 ರಂದು ಗುಜರಾತ್ನ ಪೋರಬಂದರ್ನಲ್ಲಿ ಜನಿಸಿದರು. ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಆಚರಿಸಲು, ಗಾಂಧಿ ಜಯಂತಿಯನ್ನು ಪ್ರತಿ ವರ್ಷ ಭಾರತದಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ.
ಗಾಂಧಿಯವರು ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ನೀಡುವಲ್ಲಿ ಸಾಕಷ್ಟು ಶ್ರಮಿಸಿದರು. ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ಮಾ ಗಾಂಧಿ ಅವರು ಮುಂಚೂಣಿಯಲ್ಲಿದ್ದರು. ಅವರು ಅಸಹಕಾರ ಚಳುವಳಿ, ನಾಗರಿಕ ಅಸಹಕಾರ ಚಳುವಳಿ ಮತ್ತು ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಭಾರತದಲ್ಲಿ ವಿವಿಧ ಸ್ವಾತಂತ್ರ್ಯ ಚಳುವಳಿಗಳನ್ನು ಮುನ್ನಡೆಸಿದವರು. ಅವರ ಮಾತುಗಳು ಮತ್ತು ಕಾರ್ಯಗಳು ಭಾರತದಲ್ಲಿ ವಸಾಹತುಶಾಹಿ ಆಡಳಿತದ ವಿರುದ್ಧದ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನೇಕರನ್ನು ಪ್ರೇರೇಪಿಸಿತು.
ಅಹಿಂಸೆಯಲ್ಲಿ ಮಹತ್ಮಾ ಗಾಂಧಿಯವರ ನಂಬಿಕೆಯನ್ನು ಗೌರವಿಸಿ, ವಿಶ್ವಸಂಸ್ಥೆಯು ಅವರ ಜನ್ಮದಿನವಾದ ಅಕ್ಟೋಬರ್ 2 ಅನ್ನು ಅಂತರರಾಷ್ಟ್ರೀಯ ಅಹಿಂಸಾ ದಿನ ಎಂದು ಗೊತ್ತುಪಡಿಸಿತು.
ಗಾಂಧಿ ಜಯಂತಿಯನ್ನು ಹೇಗೆ ಆಚರಿಸಲಾಗುತ್ತದೆ?
ಮಹತ್ಮಾ ಗಾಂಧಿಯವರ ಜನ್ಮ ವಾರ್ಷಿಕೋತ್ಸವದಂದು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಪ್ರಾರ್ಥನೆ ಸೇವೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ದಿನವನ್ನು ಆಚರಿಸಲಾಗುತ್ತದೆ.
ಸಾಂಸ್ಕೃತಿಕ ಚಟುವಟಿಕೆಗಳು, ದೇಶಭಕ್ತಿ ಗೀತೆಗಳು, ನೃತ್ಯಗಳು ಮತ್ತು ಮಹಾತ್ಮ ಗಾಂಧಿಯವರ ಬೋಧನೆಗಳ ಬಗ್ಗೆ ಭಾಷಣಗಳು ಸಹ ಆಚರಣೆಯ ಸಮಯದಲ್ಲಿ ಸಾಮಾನ್ಯವಾಗಿರುತ್ತವೆ. ರಾಷ್ಟ್ರದಾದ್ಯಂತದ ನಾಯಕರು ಮಹಾತ್ಮ ಗಾಂಧಿಯವರ ಸಮಾಧಿಯನ್ನು ಹೊಂದಿರುವ ನವದೆಹಲಿಯ ರಾಜ್ ಘಾಟ್ನಲ್ಲಿ ಗೌರವ ಸಲ್ಲಿಸುತ್ತಾರೆ. ಮಹತ್ಮಾ ಗಾಂಧಿಯವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು 1948 ರಲ್ಲಿ ನಾಥುರಾಮ್ ಗೋಡ್ಸೆಯಿಂದ ಹತ್ಯೆಗೀಡಾದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications