Ganesh Chaturthi 2025: ಗಣೇಶ ಹಬ್ಬದ ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಹಬ್ಬದ ಮಹತ್ವ!
ಗಣೇಶೋತ್ಸವವನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಗಣೇಶ ಚತುರ್ಥಿ, ವಿನಾಯಕ ಚತುರ್ಥಿ ಎಂದೂ ಕರೆಯಲ್ಪಡುತ್ತದೆ. ಗಣೇಶನನ್ನು ನಿಮ್ಮ ಮನೆಗಳಿಗೆ ಬರಮಾಡಿಕೊಳ್ಳಲು ಇನ್ನು ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಬಾರಿ ಗಣೇಶ ಚತುರ್ಥಿಯೂ ಬಹಳ ವಿಜೃಂಭಣೆಯಿಂದ ನಡೆಯಲಿದೆ.
ಮನೆಯಲ್ಲಿ ಯಾವುದೇ ಶುಭಕಾರ್ಯವಿದ್ದರೂ ಮೊದಲು ವಿನಾಯಕನಿಗೆ ಪೂಜೆ ಸಲ್ಲಿಸಲಾಗುತ್ತದೆ. ಅಡೆತಡೆಗಳನ್ನು ನಿವಾರಿಸುವ, ಬುದ್ಧಿವಂತಿಕೆ, ಸಮೃದ್ಧಿ ಮತ್ತು ಹೊಸ ಆರಂಭಗಳ ದೇವರು ಎಂದು ಪೂಜಿಸಲ್ಪಡುವ ದೇವರು ವಿನಾಯಕ. ಪ್ರಥಮ ಪೂಜೆಗೆ ಭಾಜನರಾಗಿರುವ ಗಣಪತಿಯ ಪೂಜೆಯನ್ನು ಗಣೇಶ ಹಬ್ಬದಂದು ವಿಜೃಂಭಣೆಯಿಂದ ನೆರವೇರಿಸಲಾಗುತ್ತದೆ. ಗಣಪತಿ ಬಪ್ಪಾ ಮೋರೆಯಾ ಮಂಗಳ ಮೂರ್ತಿ ಮೋರೆಯಾ ಎಂಬ ಉದ್ಘೋಷದೊಂದಿಗೆ ಗಣಪತಿಯನ್ನು ನೀರಿನಲ್ಲಿ ವಿಸರ್ಜಿಸಲಾಗುತ್ತದೆ.

ಇನ್ನೂ ಮನೆಯಲ್ಲಿ ನೀವು ಗಣೇಶ ಮೂರ್ತಿಯನ್ನ ಸ್ಥಾಪಿಸಿ ಪೂಜೆಯನ್ನು ಮಾಡುತ್ತೀರಿ ಎಂದಾದಲ್ಲಿ ಕೆಲವೊಂದು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ವಿಧಿವತ್ತಾಗಿ ಮನೆಯಲ್ಲಿ ಗಣಪನ ಪೂಜೆಯನ್ನು ನಡೆಸಬೇಕು. ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಗಣೇಶ ಉತ್ಸವ ಆರಂಭವಾಗುತ್ತದೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಗಣೇಶನು ಭದ್ರ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಜನಿಸಿದನು ಮತ್ತು ಈ ದಿನಾಂಕವನ್ನು ಗಣೇಶ ಚತುರ್ಥಿಯೆಂದು ಆಚರಿಸಲಾಗುತ್ತದೆ.
ಗಣೇಶ ಚತುರ್ಥಿ 2025 ಯಾವಾಗ?
ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ, ಭಾದ್ರಪದ ಮಾಸದ ಶುಕ್ಲ ಪಕ್ಷ ಚತುರ್ಥಿಯಂದು ಬುಧವಾರ, ಆಗಸ್ಟ್ 27 ರಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ಹಬ್ಬವು ಸಾಮಾನ್ಯವಾಗಿ 10 ರಿಂದ 11 ದಿನಗಳವರೆಗೆ ನಡೆಯಲಿದ್ದು, ಸೆಪ್ಟೆಂಬರ್ 6 ರ ಶನಿವಾರದಂದು ಭವ್ಯ ಗಣೇಶ ವಿಸರ್ಜನೆಯೊಂದಿಗೆ ಕೊನೆಗೊಳ್ಳುತ್ತದೆ. ಭಾದ್ರಪದ ಮಾಸ, ಶುಕ್ಲ ಪಕ್ಷ, ಚತುರ್ಥಿಯಂದು ಆಗಸ್ಟ್ 27 ರ ಬುಧವಾರ ಪೂಜೆಗೆ ಮುಹೂರ್ತ: ಬೆಳಿಗ್ಗೆ 11:12 ರಿಂದ ಮಧ್ಯಾಹ್ನ 01:44ರವರೆಗೆ.
ಗಣೇಶ ಚತುರ್ಥಿಯ ಮಹತ್ವ
ಗಣೇಶ ಚತುರ್ಥಿ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶ ಎಂದರೆ ಮಕ್ಕಳಿಂದ ಹಿಡಿದು ಬಹುತೇಕ ಎಲ್ಲರಿಗೂ ಅಚ್ಚುಮೆಚ್ಚಿನ ದೇವರು. ದೇಶದಲ್ಲಷ್ಟೇ ಅಲ್ಲದೆ, ವಿದೇಶದಲ್ಲೂ ವಿನಾಯಕ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ, ಸಂಭ್ರಮದಿಂದ ಆಚರಿಸಲಾಗುತ್ತದೆ. ಹಿಂದೂಗಳು ಅತ್ಯಂತ ಆರಾಧಿಸುವ ಮತ್ತು ಆಚರಿಸುವ ದೇವರುಗಳಲ್ಲಿ ಗಣೇಶನೂ ಒಬ್ಬ. ಗಣೇಶ ಚತುರ್ಥಿಯು ಗಣೇಶನ ಜನ್ಮದ ಆಚರಣೆಯಾಗಿದ್ದು, ಇದನ್ನು ಅಡೆತಡೆಗಳನ್ನು ನಿವಾರಿಸುವವನು , ಬುದ್ಧಿವಂತಿಕೆಯನ್ನು ನೀಡುವವನು ಮತ್ತು ಪ್ರಥಮ ಪೂಜ್ಯ (ಪೂಜಿಸಲ್ಪಟ್ಟ ಮೊದಲ ದೇವರು) ಎಂದು ಪೂಜಿಸಲಾಗುತ್ತದೆ.
ಭಕ್ತರು ಜ್ಞಾನ, ಸಮೃದ್ಧಿ ಮತ್ತು ಹೊಸ ಉದ್ಯಮಗಳಲ್ಲಿ ಯಶಸ್ಸಿಗಾಗಿ ಗಣೇಶನ ಆಶೀರ್ವಾದವನ್ನು ಬಯಸುತ್ತಾರೆ. ಈ ಹಬ್ಬವು ಸಾಮಾಜಿಕ ಒಗ್ಗಟ್ಟನ್ನು ಬೆಳೆಸುತ್ತದೆ, ಹಂಚಿಕೆಯ ಆಚರಣೆಗಳು ಮತ್ತು ಆಚರಣೆಗಳ ಮೂಲಕ ಕುಟುಂಬಗಳು ಮತ್ತು ಸಮುದಾಯಗಳನ್ನು ಒಟ್ಟಿಗೆ ತರುತ್ತದೆ. ವಿನಾಯಕ ಚತುರ್ಥಿ ಎಂದೂ ಕರೆಯಲ್ಪಡುವ ಗಣೇಶನನ್ನು ಬುದ್ಧಿವಂತಿಕೆ, ಸಮೃದ್ಧಿ, ಅದೃಷ್ಟ ಮತ್ತು ಕೆಟ್ಟದ್ದನ್ನು ನಾಶಮಾಡುವ ದೇವರು ಎಂದು ಗೌರವಿಸಲಾಗುತ್ತದೆ.
ಗಣೇಶ ಚತುರ್ಥಿಯ ಮೊದಲು ಗೌರಿ ಹಬ್ಬ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬವೂ ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ಅಂತಹ ಹಬ್ಬಗಳಲ್ಲಿ ಗೌರಿ-ಗಣೇಶ ಹಬ್ಬವೂ ಅತ್ಯಂತ ಮುಖ್ಯವಾದುದು. ಭಾದ್ರಪದ ಮಾಸದಲ್ಲಿ ಬರುವ ಮೊದಲ ಹಬ್ಬವೇ ಗೌರಿಹಬ್ಬ. ಈ ಗೌರಿ ಹಬ್ಬದ ಆಚರಣೆಗೆ ಕಥೆಗಳಿವೆ. ಬಂಧು ಬಾಂಧವರನ್ನು ಭಾವೈಕ್ಯತೆಯನ್ನು ಗಟ್ಟಿಗೊಳಿಸುವುದು ಈ ಹಬ್ಬದ ವಿಶೇಷ. ತವರು ಮನೆಗೆ ಬಂದ ಹೆಣ್ಣು ಮಕ್ಕಳು ಉಡುಗೊರೆಯನ್ನು ಪಡೆದುಕೊಳ್ಳುವುದು. ಹೆತ್ತವರು ಒಡ ಹುಟ್ಟಿದವರು ಚೆನ್ನಾಗಿರಲಿ ಎಂದು ಹಾರೈಸುವುದು ಗೌರಿ ಹಬ್ಬದ ಮಹತ್ವವಾಗಿದೆ. ಭಕ್ತರು ಅದ್ದೂರಿ ಮೆರವಣಿಗೆಯ ನಂತರ ಗಣೇಶನ ವಿಗ್ರಹವನ್ನು ಜಲಮೂಲದಲ್ಲಿ ಮುಳುಗಿಸುವ ಮೂಲಕ ಗಣೇಶನಿಗೆ ಧನ್ಯವಾದ ಕೋರುತ್ತಾರೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications